AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Sahitya Sammelana 2023: 20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ

ಜನವರಿ 6, 7 ಮತ್ತು 8 ಸೇರಿದಂತೆ 3 ದಿನ ಸಮ್ಮೇಳನ ನಡೆಯಲಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲಿನ ಊರಿಗೆ ಲಕ್ಷಾಂತರ ಸಾಹಿತ್ಯ ಆಸಕ್ತರು ಆಗಮಿಸೋ ನಿರೀಕ್ಷೆ ಇದೆ. ಹೀಗೆ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಇಂತಹ ದೊಡ್ಡ ಹಬ್ಬದಲ್ಲಿ ಸ್ವಚ್ಚತೆ ಮರೆಯಾಗಿದೆ.

Kannada Sahitya Sammelana 2023: 20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ
20 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಮರೆಯಾದ ಸ್ವಚ್ಚತೆ
TV9 Web
| Edited By: ಆಯೇಷಾ ಬಾನು|

Updated on:Jan 05, 2023 | 11:53 AM

Share

ಹಾವೇರಿ: ಸಾಧು ಸಂತರ ನಾಡು, ಸರ್ವಜ್ಞ ಹುಟ್ಟಿದ ಜಿಲ್ಲೆ, ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ನೆಲದ ಮಣ್ಣಿನಲ್ಲಿ ಜ.06ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆದಿದೆ. ಆದ್ರೆ ಇಲ್ಲಿ ವಿಪರ್ಯಾಸವೆಂದರೆ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ(Kannada Sahitya Sammelana) ಸ್ವಚ್ಚತೆ ಮರೆಯಾಗಿದೆ. ರಥಯಾತ್ರೆ ಸಾಗುವ ಮುಖ್ಯ ದಾರಿಯಲ್ಲಿ ಚರಂಡಿ ನೀರು, ಕಸ ಮುಜುಗರಕ್ಕೀಡು ಮಾಡುತ್ತಿದೆ.

ಕನಕದಾಸರು ನಡೆದಾಡಿದ ನೆಲ.. ಸಂತ ಶಿಶುನಾಳು ಶರೀಫರು ಓಡಾಡಿದ ಜಾಗ.. ಸರ್ವಜ್ಞ ಹುಟ್ಟಿದ ಜಿಲ್ಲೆ.. ಏಲಕ್ಕೆ ಹಾರ, ಸವಣೂರು ಖಾರ, ಬ್ಯಾಡಗಿ ಮೆಣಸಿನಕಾಯಿಗೆ ಹೆಸರಾರೋ ಹಾಗೂ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಅಕ್ಷರ ಜಾತ್ರೆ ನಡೆಯಲಿದೆ. ಸಾಹಿತಿ ದೊಡ್ಡರಂಗೇಗೌಡರ ಅಧ್ಯಕ್ಷತೆಯಲ್ಲಿ 86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿ ನಗರ ಮದುವಣಗಿತ್ತಿಯಂತೆ ಶೃಂಗಾರ ಗೊಂಡಿದೆ. ಜನವರಿ 6, 7 ಮತ್ತು 8 ಸೇರಿದಂತೆ 3 ದಿನ ಸಮ್ಮೇಳನ ನಡೆಯಲಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲಿನ ಊರಿಗೆ ಲಕ್ಷಾಂತರ ಸಾಹಿತ್ಯ ಆಸಕ್ತರು ಆಗಮಿಸೋ ನಿರೀಕ್ಷೆ ಇದೆ. ಹೀಗೆ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಇಂತಹ ದೊಡ್ಡ ಹಬ್ಬದಲ್ಲಿ ಸ್ವಚ್ಚತೆ ಮರೆಯಾಗಿದೆ.

ಮೂಗಿಗೆ ಬಟ್ಟೆ ಮುಚ್ಚಿ ರಥಯಾತ್ರೆಯಲ್ಲಿ ಸಾಗಿದ ವಿದ್ಯಾರ್ಥಿಗಳು

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ರಾಜ್ಯವನ್ನ ಸುತ್ತಿ ಹಾವೇರಿ ನಗರಕ್ಕೆ ಸಮ್ಮೇಳನ ರಥ ಬಂದಿದೆ. ಪಟ್ಟಣದಲ್ಲಿ ಹಾವೇರಿ ರಥಯಾತ್ರೆಗೆ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಚಾಲನೆ ನೀಡಿದ್ದಾರೆ. ರಥಯಾತ್ರೆಗೆ ಶಾಲಾ ಮಕ್ಕಳಿಂದ ಅದ್ದೂರಿಯಾಗಿ ಸ್ವಾಗತ ಕೋರಲಾಗಿದೆ. ಶಾಸಕ ಓಲೇಕಾರ್, ಮಹೇಶ ಜೋಶಿ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಶಾಲಾ ಮಕ್ಕಳು ಭಾಗಿಯಾಗಿದ್ದಾರೆ. ಆದ್ರೆ ಮೂಗಿಗೆ ಬಟ್ಟೆ ಮುಚ್ಚಿಕೊಂಡು ರಥಯಾತ್ರೆಯಲ್ಲಿ ಸಾಗುತ್ತಿರುವ ದೃಶ್ಯಗಳು ಕಂಡು ಬಂದಿವೆ. 20 ಕೋಟಿಗೂ ಅಧಿಕ ವೆಚ್ಚದಲ್ಲಿ ಸಮ್ಮೇಳನ ನಡೆಸಲಾಗುತ್ತಿದೆ. ಆದ್ರೆ ನಗರದಲ್ಲಿ ಸ್ವಚ್ಚತೆ ಕಾಪಾಡುವುದಕ್ಕೆ ವಿಶೇಷ ಕಾಳಜಿ ವಹಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ.

7 ರೈಲು ನಿಲ್ದಾಣ ಮಾಡಲು ನೈಋತ್ಯ ರೈಲ್ವೆ ಇಲಾಖೆಯಿಂದ ಆದೇಶ

ಇನ್ನು ಸಾಹಿತ್ಯ ಆಸಕ್ತರಿಗೆ ನೈಋತ್ಯ ರೈಲ್ವೆ ಇಲಾಖೆ ಗುಡ್​ನ್ಯೂಸ್​ ಕೊಟ್ಟಿದೆ. ಹಾವೇರಿಯಲ್ಲಿ 7 ಎಕ್ಸ್​ಪ್ರೆಸ್ ರೈಲು ನಿಲ್ದಾಣ ಮಾಡುವಂತೆ ನೈಋತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪದಿಂದ ಹೊಸ ನಿಯಮ

86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಸಾಪದಿಂದ ಹೊಸ ನಿಯಮ ಜಾರಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ ಮಾಡಲು ಸಿಎಂಗೆ 30 ನಿಮಿಷ ಮಾತ್ರ ಅವಕಾಶ ನೀಡಲಾಗಿದೆ. ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡರ ಭಾಷಣಕ್ಕೆ 45 ನಿಮಿಷ ಅವಕಾಶ ನೀಡಿದ್ದು, ಬಿಎಸ್​ವೈ, ಹೆಚ್​ಡಿಕೆ ಸೇರಿ ಹಿರಿಯ ರಾಜಕಾರಣಿಗಳಿಗೆ 10 ನಿಮಿಷ ಅವಕಾಶ ನೀಡಿ ಕಸಾಪ ಸಮಯ ನಿಗದಿಗೊಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:53 am, Thu, 5 January 23

Follow Us
Web contact
Web contact

TV9 Kannada

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ