AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿ ಸಾವಿಗೆ ನ್ಯಾಯಕೊಡಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಕಾಲಿಗೆ ಬಿದ್ದ ಪೋಷಕರು

ಮೂರೂವರೆ ವರ್ಷಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಳು. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆಯಾದರೂ ನ್ಯಾಯ ಸಿಕ್ಕಿಲ್ಲ. ಇಂದು ಮೃತೆಯ ಪೋಷಕರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾಲಿಗೆ ಬಿದ್ದು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಪುತ್ರಿ ಸಾವಿಗೆ ನ್ಯಾಯಕೊಡಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಕಾಲಿಗೆ ಬಿದ್ದ ಪೋಷಕರು
ಪುತ್ರಿ ಸಾವಿಗೆ ನ್ಯಾಯಕೊಡಿಸುವಂತೆ ಮಾಜಿ ಸಿಎಂ ಬೊಮ್ಮಾಯಿ ಕಾಲಿಗೆ ಬಿದ್ದ ಪೋಷಕರು
Rakesh Nayak Manchi
Rakesh Nayak Manchi|

Updated on: Jun 18, 2023 | 6:02 PM

Share

ಹಾವೇರಿ: ಮೂರೂವರೆ ವರ್ಷಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿಯೊಬ್ಬಳ ಅನುಮಾನಸ್ಪದ ಸಾವು ಪ್ರಕರಣ ಸಂಬಂಧ ಇಂದು ಮೃತೆಯ ಪೋಷಕರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕಾಲಿಗೆ ಬಿದ್ದು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಡೆದ ಘಟನೆ ಇದಾಗಿದೆ.

ಕಸ್ತೂರಬಾ ಹಾಸ್ಟೆಲ್​ನಲ್ಲಿ 2019ರ ಡಿಸೆಂಬರ್ 8ರಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮಡ್ಲಿ ಗ್ರಾಮದ ಸಾವಕ್ಕ, ಅಶೋಕ್ ಮರಿಲಿಂಗಪ್ಪನವರ ದಂಪತಿ ಪುತ್ರಿ ದ್ಯಾಮವ್ವ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಳು. ನೇನುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆಕೆಯ ಶವ ಕಂಡು ಪೋಷಕರು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬ ಶಂಕೆ ವ್ಯಕ್ತವಾಗಿತ್ತು. ಹೀಗಾಗಿ ವಿದ್ಯಾರ್ಥಿನಿ ತಂದೆ ಅಶೋಕ್ ಪೋಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೂ ಪ್ರಕರಣದ ಬಗ್ಗೆ ಸೂಕ್ತ ತನಿಖೆ ‌ಇನ್ನೂ ಆಗಿಲ್ಲ. ಹೀಗಾಗಿ ಮಗಳ ಸಾವಿಗೆ ‌ನ್ಯಾಯ ಕೊಡಿಸಿ ಎಂದು ಬೊಮ್ಮಾಯಿ ಅವರ ಕಾಲಿಗೆ ಬಿದ್ದು ಮನವಿ ‌ಮಾಡಿದರು. ಇದೇ ವೇಳೆ ಮೃತೆಯ ಪೋಷಕರೊಂದಿಗೆ ಮಾತನಾಡಿದ,‌ ಸಿಐಡಿಯಿಂದ ತನಿಖೆಗೆ ‌ಆದೇಶಿಸಿರುವುದಾಗಿ ಹೇಳಿ ತೆರಳಿದರು.

ಇದನ್ನೂ ಓದಿ: ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಅವರಿಂದ ಅಧಿಕಾರ ಪಡೆದ ಅತಿರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಫೈಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಯಾಱರೋ ಕಾಮೆಂಟ್ ಮಾಡುತ್ತಾರೆ ಅಂದರೆ ನಾನು ರಿಪ್ಲೈ ಮಾಡಲು ಆಗುತ್ತದೆಯೇ ಎಂದು ಹೇಳಿ ಮೈಕ್ ದೂರ ತಳ್ಳಿದರು.

ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ

ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ಜನ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಬಗ್ಗೆ ಕಿವಿಮಾತು ಹೇಳುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೊಮ್ಮಾಯಿ, ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಪೂರೈಕೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದಿದೆ. ಜನರಿಗೆ ಕುಡಿಯುವ ನೀರು, ಕೃಷಿಗೆ ನೀರು ಇಲ್ಲದೇ ಸಮಸ್ಯೆ ಆಗಿದೆ. ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಕರೆಂಟ್ ನೀಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಆಗುತ್ತದೆ. ಹೈಡ್ರೋ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಸರಿಯಾದ ಕ್ರಮ ತೆಗೆದುಕೊಳ್ಳದಿದ್ರೆ ವಿದ್ಯುತ್ ಶಕ್ತಿಯ ಕ್ಷಾಮ ಎದುರಾಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ