AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಡೆಯುವ ಭಾರತ ಇಂಧನ ಸಪ್ತಾಹ 2023ಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ಕಾರಣ ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ 2023 ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆಯೋಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು,

ಕರ್ನಾಟಕದಲ್ಲಿ ನಡೆಯುವ ಭಾರತ ಇಂಧನ ಸಪ್ತಾಹ 2023ಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ್ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮತ್ತು ಅವರ ಪುತ್ರ ವಿವೇಕ್ ಹೆಬ್ಬಾರ್Image Credit source: Express
TV9 Web
| Updated By: Rakesh Nayak Manchi|

Updated on:Dec 19, 2022 | 11:55 AM

Share

ಹಾವೇರಿ: ಮುಂದಿನ ವರ್ಷ ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ನಡೆಯಲಿರುವ ಭಾರತ ಇಂಧನ ಸಪ್ತಾಹ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ವಿಐಎನ್ ಡಿಸ್ಟಿಲರೀಸ್ ಮತ್ತು ಶುಗರ್ಸ್ ಪ್ರೈವೇಟ್ ಲಿಮಿಟೆಡ್‌ನ 3 ಸಾವಿರ ಕೆಎಲ್‌ಪಿಡಿ ಎಥೆನಾಲ್ ಮತ್ತು ಸಕ್ಕರೆ ಕಾರ್ಖಾನೆ (KLPD Ethanol and Sugar Factory)ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಹೊಂದಿರುವ ಕಾರಣ ಈ ಕಾರ್ಯಕ್ರಮವನ್ನು ಕರ್ನಾಟಕದಲ್ಲಿ (ಬೆಂಗಳೂರು) ಆಯೋಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಪ್ತಾಹ ಕಾರ್ಯಕ್ರಮದಲ್ಲಿ ದೇಶ ವಿದೇಶಗಳಿಂದ ಸುಮಾರು 10,000 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಸಚಿವ ಮುರಗೇಶ್ ನಿರಾಣಿ ಅವರ ಕೊಡುಗೆಯಿಂದ ರಾಜ್ಯವು ಸಕ್ಕರೆ, ಮದ್ಯ ಮತ್ತು ಎಥೆನಾಲ್ ಉತ್ಪಾದನೆಯಲ್ಲಿ ರಾಜ್ಯವನ್ನು ಅತಿದೊಡ್ಡ ಉತ್ಪಾದಕರನ್ನಾಗಿ ಮಾಡಿದೆ. ಹಾವೇರಿ ಜಿಲ್ಲೆಯ ಸಂಕೂರು ಮತ್ತು ಹಿರೇಕೆರೂರಿನಲ್ಲಿ ಎರಡು ಎಥೆನಾಲ್ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಕೆಲವು ಕಾರ್ಖಾನೆಗಳು ಬರಲಿವೆ. ಈ ವಲಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬೊಮ್ಮಾಯಿ ಅವರು ಶ್ಲಾಘಿಸಿದರು.

ಇದನ್ನೂ ಓದಿ: ಎಂಇಎಸ್​​ ಪುಂಡಾಟ ಇದೇ ಮೊದಲಲ್ಲ; ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿದೆ -ಸಿಎಂ ಬೊಮ್ಮಾಯಿ

ರೈತರಿಗೆ ಸಹಾಯ ಮಾಡಲು ಮತ್ತು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಲು ಕಾರ್ಖಾನೆಗಳಿಗೆ ಅನುಮತಿ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಜೈವಿಕ ಇಂಧನಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. 2024ರ ಶೇ 10ರ ಗುರಿಯನ್ನು ಪ್ರಸಕ್ತ ವರ್ಷದಲ್ಲಿ ಸಾಧಿಸಲಾಗಿದೆ. 2025ರ ವೇಳೆಗೆ ಶೇ 25 ಸೇರಿಸಲು ನಿರ್ಧರಿಸಲಾಗಿದೆ. ಇದು ಶೇ 20ರಷ್ಟು ತೈಲ ಆಮದನ್ನು ಕಡಿತಗೊಳಿಸುತ್ತದೆ ಎಂದರು.

ರಾಜ್ಯದ ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಡಿ

Published On - 11:55 am, Mon, 19 December 22