AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಕಾಲದ್ದು ಎನ್ನಲಾದ ಹ್ಯಾಂಡ್ ಗ್ರಾನೈಡ್ ಪತ್ತೆ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು

ದೊಂಬಿ ನಡೆದಾಗ, ಪೊಲೀಸರು, ಯುದ್ಧದ ಸಂದರ್ಭದಲ್ಲಿ ಬಳಸಲಾಗುವ ಹ್ಯಾಂಡ್ ಗ್ರಾನೈಡ್ ಇದಾಗಿತ್ತು ಎಂದು ಸದ್ಯ ಮೂಲಗಳು ತಿಳಿಸಿವೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಎಸ್​.ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಹಳೆಯ ಕಾಲದ್ದು ಎನ್ನಲಾದ ಹ್ಯಾಂಡ್ ಗ್ರಾನೈಡ್ ಪತ್ತೆ; ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು
ಹ್ಯಾಂಡ್ ಗ್ರಾನೈಡ್
TV9 Web
| Edited By: |

Updated on:Jan 20, 2022 | 10:36 PM

Share

ಹಾವೇರಿ: ಹಳೆಯ ಕಾಲದ್ದು ಎನ್ನಲಾದ ಹ್ಯಾಂಡ್ ಗ್ರಾನೈಡ್(Hand Granide) ಹಾವೇರಿ ನಗರದ ನೇತಾಜಿ ನಗರದಲ್ಲಿ ಪತ್ತೆಯಾಗಿದೆ. ಮನೆ (Home) ಕಟ್ಟುವ ಸಲುವಾಗಿ ಖಾಲಿ ಜಾಗವನ್ನು ಸ್ವಚ್ಛ ಮಾಡುವಾಗ ತುಕ್ಕು ಹಿಡಿದ ಸ್ಥಿತಿಯಲ್ಲಿ ಹ್ಯಾಂಡ್ ಗ್ರಾನೈಡ್ ಪತ್ತೆಯಾಗಿದೆ. ಹ್ಯಾಂಡ್ ಗ್ರಾನೈಡ್ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು (Karnataka police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರವಿ ಮುಷ್ಠಿ ಎಂಬುವವರಿಗೆ ಸೇರಿದ ಜಾಗದಲ್ಲಿ  ಹ್ಯಾಂಡ್ ಗ್ರಾನೈಡ್ ಪತ್ತೆಯಾಗಿದೆ.

ದೊಂಬಿ ನಡೆದಾಗ, ಪೊಲೀಸರು, ಯುದ್ಧದ ಸಂದರ್ಭದಲ್ಲಿ ಬಳಸಲಾಗುವ ಹ್ಯಾಂಡ್ ಗ್ರಾನೈಡ್ ಇದಾಗಿತ್ತು ಎಂದು ಸದ್ಯ ಮೂಲಗಳು ತಿಳಿಸಿವೆ. ಈ ಬಗ್ಗೆ ಎಫ್ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಎಸ್​.ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

ಕಲಬುರಗಿ: 2 ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನ; ಮಕ್ಕಳು ಸಾವು, ಮಹಿಳೆ ಬಚಾವ್

2 ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ 2 ವರ್ಷದ ದ್ರಾಕ್ಷಾಯಿಣಿ, 4 ತಿಂಗಳ ಮಗು ಪ್ರೇಮಾ ಸಾವನ್ನಪ್ಪಿದ್ದಾರೆ. ತಾಯಿ ಭಾಗ್ಯಶ್ರೀಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಸಂಗಾಪುರದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥ ತಾಯಿ ಭಾಗ್ಯಶ್ರೀಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಡ್ಯ: ಪಾಂಡವಪುರ ಪೊಲೀಸರಿಂದ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಅರೆಸ್ಟ್

ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿಯನ್ನು ಪಾಂಡವಪುರ ಪೊಲೀಸರು ಬಂಧಿಸಿದ್ದಾರೆ. ತಹಶೀಲ್ದಾರ್ ವಿರುದ್ಧ ಕಾನೂನು ಭಂಗ ಚಳವಳಿ ನಡೆಸಲು ಮುಂದಾಗಿದ್ದು, ಚಳವಳಿಗೂ ಮುನ್ನವೇ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ 9 ಹೋರಾಟಗಾರರನ್ನು ಬಂಧಿಸಲಾಗಿದೆ. ಪಾಂಡವಪುರದ ಮಿನಿ ವಿಧಾನ ಸೌಧದ ಮುಂಭಾಗ ನಡೆಯಬೇಕಿದ್ದ ಚಳವಳಿಗಳು ಮುನ್ನ ಬಂಧಿಸಲಾಗಿದೆ.

ಕಲಬುರಗಿ: ಹಳ್ಳದ ನೀರು ಕುಡಿದಿದ್ದ ಹತ್ತು ಮೇಕೆಗಳು ಸಾವು

ಹಳ್ಳದ ನೀರು ಕುಡಿದಿದ್ದ ಹತ್ತು ಮೇಕೆಗಳು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಬಣಮಗಿ ಗ್ರಾಮದಲ್ಲಿ ನಡೆದಿದೆ. ಚಂದ್ರಶ್ಯಾ ಅನ್ನೋರಿಗೆ ಸೇರಿದ್ದ ಮೇಕೆಗಳು ಸಾವನ್ನಪ್ಪಿವೆ. ಗ್ರಾಮದ ಹೊರವಲಯದಲ್ಲಿರುವ ಹಳ್ಳದ ನೀರು ಕುಡದಿದ್ದ ಮೇಕೆಗಳು, ನೀರು ಕುಡಿದ ಕೆಲಹೊತ್ತಿನಲ್ಲಿಯೇ ಹತ್ತು ಮೇಕೆಗಳು ಸಾವನ್ನಪ್ಪಿವೆ.

ಇದನ್ನೂ ಓದಿ: ಪೊಲೀಸ್​ ಭದ್ರಕೋಟೆಯಾದ ಇಡೀ ರಾಮನಗರ: ಇಂದು ಭಾರೀ ಹೈಡ್ರಾಮಾಗೆ ಸಾಕ್ಷಿ ಆಗಲಿದೆ ರಾಮನಗರ! ಏನಿದೆ ಸದ್ಯದ ಪರಿಸ್ಥಿತಿ

ಪತಿಯ ಬಿಟ್ಟು ಒಂಟಿಯಾಗಿದ್ದ ನರ್ಸ್ ಶವ ಪತ್ತೆ, ಜೊತೆಗಾರನ ವಶಕ್ಕೆ ಪಡೆದು ವಿಚಾರಣೆ ಶುರು ಮಾಡಿದ ಖಾಕಿ

Published On - 10:06 pm, Thu, 20 January 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ