AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದರೊಬ್ಬರಿಂದ 1522 ಮಹಿಳೆಯರ ಗರ್ಭಕೋಶ ಶಸ್ತ್ರಚಿಕಿತ್ಸೆ; ಜಿಲ್ಲಾಡಳಿತ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆತ

ನಾಳೆ ಸಿಎಂ ಶಿಗ್ಗಾಂವಿಗೆ ಭೇಟಿ ನೀಡುವ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು(CM Basavaraj Bommai) ಭೇಟಿ ಮಾಡಿಸುವುದು ಹಾಗೂ ಜಿಲ್ಲಾಡಳಿತದಿಂದ ನೆರವು ಕೊಡಿಸುವ ಪ್ರಯತ್ನದ ಭರವಸೆ ಹಿನ್ನೆಲೆಯಲ್ಲಿ ಪಾದಯಾತ್ರೆ ಹಿಂತೆಗೆತ.

ವೈದರೊಬ್ಬರಿಂದ 1522 ಮಹಿಳೆಯರ ಗರ್ಭಕೋಶ ಶಸ್ತ್ರಚಿಕಿತ್ಸೆ; ಜಿಲ್ಲಾಡಳಿತ ಭರವಸೆ ಮೇರೆಗೆ ಪ್ರತಿಭಟನೆ ಹಿಂತೆಗೆತ
ಪಾದಯಾತ್ರೆ ಮಾಡುತ್ತಿರುವ ಮಹಿಳೆಯರು
TV9 Web
| Edited By: |

Updated on:Apr 27, 2022 | 8:19 AM

Share

ಹಾವೇರಿ: ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋದರೆ ವೈದರೊಬ್ಬರು ಗರ್ಭಕೋಶ ಶಸ್ತ್ರಚಿಕಿತ್ಸೆ (Uterus Operation) ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯರು (Women) ಏಪ್ರಿಲ್ 25ರಿಂದ ಪಾದಾಯಾತ್ರೆ ನಡೆಸುತ್ತಿದ್ದಾರೆ. ಸದ್ಯ ಜಿಲ್ಲಾಡಳಿತ ಪ್ರತಿಭಟನಾಕಾರರ ಬೇಡಿಕೆಗಳನ್ನು ಇಡೇರಿಸುವುದಾಗಿ ಭರವಸೆ ನೀಡಿದ್ದು ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರ ಪಾದಯಾತ್ರೆ ತಾತ್ಕಾಲಿಕವಾಗಿ ಹಿಂತೆಗೆಯಲಾಗಿದೆ. ನಾಳೆ ಸಿಎಂ ಶಿಗ್ಗಾಂವಿಗೆ ಭೇಟಿ ನೀಡುವ ವೇಳೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು(CM Basavaraj Bommai) ಭೇಟಿ ಮಾಡಿಸುವುದು ಹಾಗೂ ಜಿಲ್ಲಾಡಳಿತದಿಂದ ನೆರವು ಕೊಡಿಸುವ ಪ್ರಯತ್ನದ ಭರವಸೆ ಹಿನ್ನೆಲೆಯಲ್ಲಿ ಪಾದಯಾತ್ರೆ ಹಿಂತೆಗೆತ. ಪಾದಯಾತ್ರೆ ಹಿಂತೆಗೆತದ ಚರ್ಚೆಯ ವೇಳೆ ನೊಂದ ಮಹಿಳೆ ಕಣ್ಣೀರು ಹಾಕಿದ್ದಾರೆ. ಗರ್ಭಕೋಶ ಶಸ್ತ್ರಚಿಕಿತ್ಸೆಯಿಂದ ಆಗುತ್ತಿರುವ ತೊಂದರೆ ನೆನೆದು ಕಣ್ಣೀರು ಹಾಕಿದ್ರು.

1522 ಮಹಿಳೆಯರ ಗರ್ಭಕೋಶ ತೆಗೆದ ಪ್ರಕರಣ, ಪರಿಹಾರಕ್ಕಾಗಿ ಆಗ್ರಹಿಸಿ ಮಹಿಳೆಯರ ಪಾದಯಾತ್ರೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಡಾ.ಪಿ.ಶಾಂತ, ಸುಮಾರು 1522 ಮಹಿಳೆಯರಿಗೆ ವಿನಾಕಾರಣ ಗರ್ಭಕೋಶವನ್ನೇ ತೆಗೆದು ಹಾಕಿದ್ದಾರೆ. ನಂತರ 2017-18ರಲ್ಲಿ ತನಿಖೆ ನಡೆದು ಸರ್ಕಾರ 45 ಕೋಟಿ ಪರಿಹಾರವನ್ನ ಪ್ರಕಟಿಸಿದೆ. ಆದ್ರೆ, ಧೃಡೀಕರಣ ಪತ್ರ ಇಲ್ಲ ಅಂತ ಮಹಿಳೆಯರಿಗೆ ಸಿಗಬೇಕಾಗಿದ್ದ ಹಣವನ್ನ ನೀಡಿಲ್ಲ. ಹೀಗಾಗಿ, ರೊಚ್ಚಿಗೆದ್ದ ಮಹಿಳೆಯರೆಲ್ಲ ನಿನ್ನೆ ಶಿಗ್ಗಾಂವಿಯಲ್ಲಿರುವ ಸಿಎಂ ನಿವಾಸದತ್ತ ಪಾದಯಾತ್ರೆ ಹೊರಟಿದ್ದರು.

ಪಾದಯಾತ್ರೆಯ ಎರಡನೇ ದಿನ ಹಾವೇರಿಯ ಹೊರವಲಯದಲ್ಲಿ ಮಹಿಳೆಯರಿಗೆ ಪೊಲೀಸ್ರು ಅಡ್ಡಿಹಾಕಿದ್ರು. ಈ ವೇಳೆ ಮಹಿಳೆಯರ ಮನವೊಲಿಸಲು ಅಧಿಕಾರಿಗಳು ಮುಂದಾದ್ರು. ಆದ್ರೆ, ಹೋರಾಟದ ಮುಂದಾಳತ್ವ ವಹಿಸಿದವ್ರು ಅದಕ್ಕೆ ಬಗ್ಗಲಿಲ್ಲ. ಸದ್ಯ ಈಗ ಜಿಲ್ಲಾಡಳಿತದ ಭರವಸೆ ಹಿನ್ನೆಲೆ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರ ಪಾದಯಾತ್ರೆ ತಾತ್ಕಾಲಿಕವಾಗಿ ಹಿಂತೆಗೆಯಲಾಗಿದೆ.

ಇದನ್ನೂ ಓದಿ: ಹಾವೇರಿಯಲ್ಲಿ ಗರ್ಭಕೋಶ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯರಿಂದ ಪ್ರತಿಭಟನೆ; ಪರಿಹಾರಕ್ಕೆ ಆಗ್ರಹಿಸಿ ಸಿಎಂ ನಿವಾಸದವರೆಗೆ ಪಾದಯಾತ್ರೆ

KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​

Published On - 8:19 am, Wed, 27 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್