AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು

ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಏ.8 ರಂದು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಹಿರೆಕೇರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು
ನಟಿ ಶ್ರುತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 12, 2023 | 2:12 PM

Share

ಹಾವೇರಿ: ಬಿಜೆಪಿ (BJP) ನಾಯಕಿ ಶ್ರುತಿ (Actor Shruti) ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ (JDS) ಏ.8 ರಂದು ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿತ್ತು. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಜೆಡಿಎಸ್​ ಆರೋಪ ಮಾಡಿತ್ತು. ಅದರಂತೆ ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರು ದೂರು ನೀಡಿದ್ದರು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಕಲಂ 505(2) ರಡಿಯಲ್ಲಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಬ್ಬರದ ಭಾಷಣ ಮಾಡಿದ್ದ ನಟಿ ಶೃತಿ

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಪರ ಪ್ರಚಾರ ಮಾಡಲು ಶೃತಿಯವರು ಆಗಮಿಸಿದ್ದರು. ಈ ವೇಳೆ ಭಾಷಣ ಮಾಡಿದ್ದ ಅವರು ‘ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡುತ್ತೇನೆ ‘ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್​ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕಾದರೆ ಭಾರತೀಯ ಜನತಾ ಪಾರ್ಟಿಗೆ ಮತ ಹಾಕಿ ಎಂದಿದ್ದರು. ಇದೇ ಹೇಳಿಕೆ ಸಂಬಂಧ ಇದೀಗ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲಂ 505(2) ರಡಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ