AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು

ಬಿಜೆಪಿ ನಾಯಕಿ ಶ್ರುತಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ ಏ.8 ರಂದು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಹಿರೆಕೇರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಚೋಧನಕಾರಿ ಭಾಷಣ: ನಟಿ ಶ್ರುತಿ ವಿರುದ್ದ ದೂರು ದಾಖಲು
ನಟಿ ಶ್ರುತಿ
ಕಿರಣ್ ಹನುಮಂತ್​ ಮಾದಾರ್
|

Updated on: Apr 12, 2023 | 2:12 PM

Share

ಹಾವೇರಿ: ಬಿಜೆಪಿ (BJP) ನಾಯಕಿ ಶ್ರುತಿ (Actor Shruti) ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿ​​​ (JDS) ಏ.8 ರಂದು ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿತ್ತು. ಗುರುವಾರ (ಏ.6) ರಂದು ಹಿರೇಕೆರೂರು ಕ್ಷೇತ್ರದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ನಟಿ ಶೃತಿ ಭಾಷಣದ ಭರಾಟೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂದು ಜೆಡಿಎಸ್​ ಆರೋಪ ಮಾಡಿತ್ತು. ಅದರಂತೆ ನೋಡಲ್ ಅಧಿಕಾರಿ ಪಂಪಾಪತಿ ಎಂಬುವವರು ದೂರು ನೀಡಿದ್ದರು. ಇದೀಗ ಪಕ್ಷ ಪಕ್ಷಗಳ ನಡುವೆ ವೈರತ್ವ, ದ್ವೇಷ, ಹಾಗೂ ಭಯ ಭೀತಿಯನ್ನುಂಟು ಮಾಡಿದ ಅಪರಾಧದ ಹಿನ್ನಲೆ ನಟಿ ಶೃತಿ ವಿರುದ್ಧ ಕಲಂ 505(2) ರಡಿಯಲ್ಲಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಅಬ್ಬರದ ಭಾಷಣ ಮಾಡಿದ್ದ ನಟಿ ಶೃತಿ

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಪರ ಪ್ರಚಾರ ಮಾಡಲು ಶೃತಿಯವರು ಆಗಮಿಸಿದ್ದರು. ಈ ವೇಳೆ ಭಾಷಣ ಮಾಡಿದ್ದ ಅವರು ‘ಯಾವುದೇ ಬೇರೆ ಪಕ್ಷದ ಬಗ್ಗೆ ನಾನು ಜಾಸ್ತಿ ಮಾತನಾಡಲ್ಲ. ಆದರೆ ಒಂದೆ ಮಾತಿನಲ್ಲಿ ಹೇಳಿ ಮುಗಿಸಿಬಿಡುತ್ತೇನೆ ‘ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್​ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್​ಗೆ ಮತ ಹಾಕಿ. ಭಾರತದಲ್ಲಿ ಭಾರತೀಯರ ವಂಶ ಅಭಿವೃದ್ಧಿ ಆಗಬೇಕಾದರೆ ಭಾರತೀಯ ಜನತಾ ಪಾರ್ಟಿಗೆ ಮತ ಹಾಕಿ ಎಂದಿದ್ದರು. ಇದೇ ಹೇಳಿಕೆ ಸಂಬಂಧ ಇದೀಗ ನಟಿ ಶೃತಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲಂ 505(2) ರಡಿ ಹಿರೆಕೇರೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ