AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ – ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಪ್ಪ

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಎನ್ನುತ್ತಾ ಗೊರವಪ್ಪ ನಾಗಪ್ಪ ಉರ್ಮಿ ಅವರು ನುಡಿದ ಭವಿಷ್ಯ ಹೀಗಿದೆ

ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ - ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಪ್ಪ
ದೇವರಗುಡ್ಡದಲ್ಲಿ ಬಿಲ್ಲನ್ನೇರಿ ಕಾರ್ಣಿಕ ನುಡಿದ ಗೊರವಪ್ಪ ಹೇಳಿದ ಭವಿಷ್ಯ ಇಲ್ಲಿದೆ
TV9 Web
| Edited By: |

Updated on:Oct 04, 2022 | 7:28 PM

Share

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು (Ranebennur) ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಬಿಲ್ಲನ್ನೇರಿ ಗೊರವಪ್ಪ ನಾಗಪ್ಪ ಉರ್ಮಿ ಅವರು (Karnika goravappa nagappa urmi) ಮತ್ತೊಮ್ಮೆ ಕಾರ್ಣಿಕ ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯೋ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ (dasara prediction) ವರ್ಷದ ಭವಿಷ್ಯವಾಣಿ ಅಂತಲೆ ನಂಬಲಾಗುವ ನುಡಿಮುತ್ತುಗಳು ಇವಾಗಿವೆ.

ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ಎನ್ನುತ್ತಾ ಗೊರವಪ್ಪ ನಾಗಪ್ಪ ಉರ್ಮಿ ಅವರು ನುಡಿದ ಭವಿಷ್ಯ ಹೀಗಿದೆ: ಮಾಲತೇಶ ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಅವರು ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಅಂತಾ ಕಾರ್ಣಿಕ ವಿಶ್ಲೇಷಿಸಿದ್ದಾರೆ.

ಕೊರೊನಾದಿಂದಾಗಿ ಕಳೆದೆರಡು ವರ್ಷದಿಂದ ಕಳೆಗುಂದಿದ್ದ ದೇವರ ಕಾರ್ಣಿಕೋತ್ಸವ:

ದೇವರಗುಡ್ಡದ ಗೊರವಯ್ಯ ಅವರು ನುಡಿಯುವ ಕಾರ್ಣಿಕದ ಮೇಲೆ ಜನರಿಗೆ ಮೊದಲಿಂದಲೂ ಅಪಾರ ನಂಬಿಕೆಯಿದೆ. ಕೊರೊನಾ ಹಾವಳಿಯಿಂದಾಗಿ ಕಳೆದೆರಡು ವರ್ಷಗಳಿಂದ ಜಿಲ್ಲಾಡಳಿತದ ಬಿಗಿನಿಯಮದಿಂದಾಗಿ ಕಾರ್ಣಿಕ ವೀಕ್ಷಿಸಲು ಹೆಚ್ಚು ಜನರು ಸೇರುತ್ತಿರಲಿಲ್ಲ. ಆದರೆ ಈ ಬಾರಿ ಅಪಾರ ಜನಸ್ತೋಮ ಸೇರಿದ್ದರು.

ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ಕಂಟಕ, ಮುಂದಿನ ಯುಗಾದಿವರೆಗೆ ಹಲವು ಕಾಯಿಲೆಗಳ ತಾಂಡವ: ಕೋಡಿ ಶ್ರೀ ಅಚ್ಚರಿಯ ಭವಿಷ್ಯ

ಧಾರವಾಡ: ಕೋಡಿಮಠದ(Kodi Mutt Seer) ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Sri Shivananda Shivayogi Rajendra Swamiji) ಅವರು ಸಹ ಇಂದು ಮಂಗಳವಾರ ಭವಿಷ್ಯ ವಾಣಿ ನುಡಿದಿದ್ದಾರೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ ಎಂದು ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.

ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಕೋಡಿಮಠದ ಸ್ವಾಮೀಜಿ ಸ್ಫೋಟಕ ಭವಿಷ್ಯ ವಾಣಿ ನುಡಿದಿದ್ದರು. ಅದನ್ನು ನೆನಪಿಸಿಕೊಂಡ ಸ್ವಾಮೀಜಿ, ಈ ಸಂವತ್ಸರ ಪ್ರಾರಂಭದಲ್ಲಿಯೇ ನಾನು ಭವಿಷ್ಯ ಹೇಳಿದ್ದೆ. ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು-ನೋವು ಆಗುತ್ತೆ ಅಂತಾ ಹೇಳಿದ್ದೆ. ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ಕುಸಿಯುತ್ತೆ ಎಂದು ಹೇಳಿದ್ದೆ. ಈಗ ನಾವು ಹೇಳಿದಂತೆಯೇ ಆಗಿದೆ.

ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗೋ ಲಕ್ಷಣವಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಹೆಚ್ಚಾಗಿ ಬರುತ್ತವೆ. ವಿಷಜಂತುಗಳು ಹೊರಗೆ ಬಂದು ತೊಂದರೆ ಕೊಡುತ್ತವೆ. ಪ್ರಕೃತಿಯಿಂದ ಅಲ್ಲೊಲ ಕಲ್ಲೋಲ ಆಗುತ್ತೆ. ರಾಜ್ಯಕ್ಕೆ ಒಂದು ಅವಘಡ ಆಗಲಿದೆ. ಅದನ್ನು ಕೂಡ ಕಾದು ನೋಡಿ. ಬೆಂಕಿಯಿಂದ ಹೆಚ್ಚೆಚ್ಚು ಸಮಸ್ಯೆ ಆಗಲಿದೆ. ಮತಾಂಧತೆ, ಜಾತೀಯತೆ, ಆಕ್ರೋಶ ಹೆಚ್ಚಾಗುತ್ತದೆ ಎನ್ನುವ ಮೂಲಕ ಕಾರ್ತಿಕ ಮಾಸದಲ್ಲಿ ಗಂಡಾಂತರ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

Published On - 7:10 pm, Tue, 4 October 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?