AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Tiger: ರಾಣೇಬೆನ್ನೂರು ನಗರದ ಮೈಸೂರು ಹುಲಿ ಖ್ಯಾತಿಯ ಹೋರಿ ಸಾವು, ಅಭಿಮಾನಿಗಳು ಕಣ್ಣೀರು

Ranebennur: ಹೋರಿ ಹಬ್ಬದ ಅಖಾಡದಲ್ಲಿ ತನ್ನದೇ ಆದ ಹೆಸರು ಮಾಡಿದ್ದ ಮೈಸೂರು ಹುಲಿ ಹೆಸರಿನ ಹೋರಿ, ಬೈಕ್ ಗಳು, ಹತ್ತು ಗಾಡ್ರೇಜ್ ಗಳು, ಐದು ತೊಲೆ ಬಂಗಾರ ಸೇರಿದಂತೆ ಹಲವು ಬಹುಮಾನಗಳನ್ನು ತನ್ನದಾಗಿಸಿಕೊಂಡಿತ್ತು.

Mysore Tiger: ರಾಣೇಬೆನ್ನೂರು ನಗರದ ಮೈಸೂರು ಹುಲಿ ಖ್ಯಾತಿಯ ಹೋರಿ ಸಾವು, ಅಭಿಮಾನಿಗಳು ಕಣ್ಣೀರು
ರಾಣೆಬೆನ್ನೂರು ನಗರದ ಮೈಸೂರು ಹುಲಿ ಖ್ಯಾತಿಯ ಹೋರಿ ಸಾವು
TV9 Web
| Edited By: |

Updated on: Jan 30, 2023 | 12:00 PM

Share

ಉತ್ತರ ಕರ್ನಾಟಕದಲ್ಲಿ ಹೋರಿ ಬೆದರಿಸುವ ಹಬ್ಬ ತುಂಬಾ ಪ್ರಸಿದ್ಧ. ಮೈಸೂರು ಹುಲಿ ಹೋರಿ (Mysuru Huli Ox) ಅಂದರೆ ಅಖಾಡದಲ್ಲಿನ ಅಭಿಮಾನಿಗಳಿಗೆ ಖುಷಿಯೋ ಖುಷಿ. ಆದರೆ ಮೈಸೂರು ಹುಲಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಹೋರಿಯ ಸಾವಿಗೆ (bullock Hori) ಅಭಿಮಾನಿಗಳು ಕಣ್ಣೀರಾಗಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸಾವಿರಾರು ಅಭಿಮಾನಿಗಳು ಸೇರಿದ್ದರು. ಹೌದು ಇದು ಹಾವೇರಿ ಜಿಲ್ಲೆ ರಾಣೇಬೆನ್ನೂರು (Ranebennur) ನಗರದ ಕುರುಬಗೇರಿ ಓಣಿಯಲ್ಲಿ ಕಂಡುಬಂದ ದೃಶ್ಯಗಳಿವು. ಈ ಕುರಿತು ಒಂದು ವರದಿ. ಪ್ರಸಿದ್ಧ ಕುಸ್ತಿ ಪೈಲ್ವಾನ್ ಕುಟುಂಬದ ನಂಜಪ್ಪ ಗೂಳಣ್ಣನವರ ಹೆಸರಾಂತ ಕುಸ್ತಿ ಪಟುವಾಗಿದ್ದರು. ನಾಡಹಬ್ಬ ದಸಾರದಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದು ಅವರು ಮೈಸೂರು ಹುಲಿ ಎಂದು ಹೆಸರು ಪಡೆದಿದ್ದರು. ನಂತರ ಪೈಲ್ವಾನ್ ನಂಜಪ್ಪರ ಹೆಸರಿನ ಮೂಲಕ ಹೋರಿಗೆ “ಮೈಸೂರು ಹುಲಿ” (Mysore Tiger) ಎಂದು ನಾಮಕರಣ ಮಾಡಲಾಗಿತ್ತು. ಮೈಸೂರು ಹುಲಿ ಹೆಸರಿನ ಹೋರಿ 13 ವರ್ಷಗಳ ಕಾಲ ಹೋರಿ ಹಬ್ಬದ ಅಖಾಡದಲ್ಲಿ ತನ್ನದೇ ಆದ ಹೆಸರು ಮಾಡಿ ಇಂದು ಉಸಿರು ನಿಲ್ಲಿಸಿದೆ. ಹೋರಿ ಹಬ್ಬದಲ್ಲಿ ಆಕಾಶದಗಲಕ್ಕೆ ಬಲೂನ್ ಗಳ ಪೀಪಿಯನ್ನು ಕಟ್ಟಿಕೊಂಡು ಓಡುತ್ತಿದ್ದರೆ ಅಭಿಮಾನಿಗಳ ಕೇಕೆ, ಸಿಳ್ಳೆ ಮೇರೆ ಮೀರುತ್ತಿತ್ತು. ಹೋರಿಯ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ರಾಜ್ಯ ಹಾಗೂ ಬೇರೆ ಬೇರೆ ಕಡೆಗಳಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಗಳಲ್ಲಿ ಮೈಸೂರು ಹುಲಿ ಹೋರಿಗೆ ಸಾವಿರಾರು ಜನ ಅಭಿಮಾನಿಗಳು ನೆರೆದಿರುತ್ತಿದ್ದರು. ಮೈಸೂರು ಹುಲಿಯು ಧೂಳೆಬ್ಬಿಸಿಕೊಂಡು ಓಡುತ್ತಿದ್ದ ಮಿಂಚಿನ ಓಟ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು.

ಹೀಗೆ ಹೋರಿ ಹಬ್ಬದ ಅಖಾಡದಲ್ಲಿ ತನ್ನದೇ ಆದ ಹೆಸರು ಮಾಡಿದ್ದ ಮೈಸೂರು ಹುಲಿ ಹೆಸರಿನ ಹೋರಿ, ಬೈಕ್ ಗಳು, ಹತ್ತು ಗಾಡ್ರೇಜ್ ಗಳು, ಐದು ತೊಲೆ ಬಂಗಾರ ಸೇರಿದಂತೆ ಹಲವು ಬಹುಮಾನಗಳನ್ನು ತನ್ನದಾಗಿಸಿಕೊಂಡಿತ್ತು. ಈಗ ಹೋರಿ ಹಬ್ಬದ ಹುಲಿ ಮೈಸೂರು ಹುಲಿ ಉಸಿರು ನಿಲ್ಲಿಸಿರುವುದು ಹೋರಿ ಮಾಲೀಕರ ಕುಟುಂಬ ಸೇರಿದಂತೆ ಸಾವಿರಾರು ಅಭಿಮಾನಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ಒಟ್ಟಿನಲ್ಲಿ ಕೊಬ್ಬರಿ ಹೋರಿ ಸ್ಪರ್ಧೆಯಲ್ಲಿ ಹೆಸರು ಮಾಡಿದ್ದ ಮೈಸೂರಿನ ಹುಲಿ ಅನಾರೋಗ್ಯದಿಂದ ಮೃತಪಟ್ಟಿದೆ. ನೂರಾರು ಅಭಿಮಾನಿಗಳು ಹೋರಿ ಅಂತಿಮ ದರ್ಶನ ಪಡೆದು, ಹಿಂದೂ ಸಂಪ್ರದಾಯದಂತೆ ಮೈಸೂರಿನ ಹುಲಿಯ ಅಂತ್ಯಕ್ರಿಯೆಯನ್ನ ನೆರವೇರಿಸಲಾಯಿತು.

ವರದಿ: ಸೂರಜ್ ಉತ್ತೂರೆ, ಟಿವಿ9, ಹಾವೇರಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ