AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ, ಆದ್ರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ; ಸಿಎಂ ಬೊಮ್ಮಾಯಿ

ಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪದವಿ ಕಾಲೇಜು ಮಾಡುತ್ತೇನೆ. ಗ್ರಾಮ ಪಂಚಾಯತಿಗೆ ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುವೆ. ಜಾತಿಭೇದವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಕ್ಯಾಬಿನೆಟ್​ನಲ್ಲಿ ಪ್ರತಿಭಾವಂತರಿದ್ದಾರೆ.

ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ, ಆದ್ರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ; ಸಿಎಂ ಬೊಮ್ಮಾಯಿ
ಹಾವೇರಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa

Updated on:Sep 01, 2021 | 1:45 PM

Share

ಹಾವೇರಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಎರಡು ದಿನ ಹಾವೇರಿ ಮತ್ತು ಹುಬ್ಬಳ್ಳಿಗೆ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ನೂತನ ಕಟ್ಟಡಗಳ ಉದ್ಘಾಟನೆ ಕಾರ್ಯ ನೆರವೇರಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದೆ. ಆದರೆ ನನ್ನ ತವರುಮನೆಯನ್ನು ನಾನೆಂದೂ ಮರೆಯುವುದಿಲ್ಲ. ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧನಾಗಿದ್ದೇನೆ. ಕ್ಷೇತ್ರದ ಬಗೆಗಿನ ನನ್ನ ಕನಸು ನನಸಾಗುವ ಕಾಲ ಬಂದಿದೆ. ಶಿಗ್ಗಾಂವಿ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಬರುವ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪದವಿ ಕಾಲೇಜು ಮಾಡುತ್ತೇನೆ. ಗ್ರಾಮ ಪಂಚಾಯತಿಗೆ ವಿಶೇಷ ಅನುದಾನ ಕೊಟ್ಟು ಅಭಿವೃದ್ಧಿ ಮಾಡುವೆ. ಜಾತಿಭೇದವಿಲ್ಲದೆ ಎಲ್ಲರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ನನ್ನ ಕ್ಯಾಬಿನೆಟ್​ನಲ್ಲಿ ಪ್ರತಿಭಾವಂತರಿದ್ದಾರೆ. ಅವರೆಲ್ಲರ ಕಾರ್ಯಕ್ಷಮತೆ ಬಳಸಿಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತೇವೆ. ಹೊರಗಡೆ ನಾನು ಮುಖ್ಯಮಂತ್ರಿ ಆಗಿರಬಹುದು. ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಅಂತ ತಡಸ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು. ಸಿಎಂ ಬೊಮ್ಮಾಯಿಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ಸಾಥ್ ನೀಡಿದರು.

ರೈತರ ಆದಾಯ ಎರಡು ಪಟ್ಟು ಹೆಚ್ಚಿಸುವ ಕೆಲಸ ಮಾಡುತ್ತಿದ್ದೇನೆ. ಭೂಮಿಯ ಪ್ರಮಾಣ ಕಡಿಮೆ ಆಗುತ್ತಿದೆ. ರೈತರ‌‌ ಮಕ್ಕಳು ಬೇರೆಯವರಂತೆ ಮುಂದೆ ಬರಬೇಕು. ನಾನು ಸಿಎಂ ಆಗುತ್ತಿದ್ದಂತೆ ರೈತರ ಮಕ್ಕಳಿಗೆ ಶಿಷ್ಯವೇತನ ಕೊಡಬೇಕು ಅಂತಾ ನಿರ್ಧಾರ ಮಾಡಿದೆ. ಈಡಿ ದೇಶದಲ್ಲಿ ಇಂಥಾ ಯೋಜನೆ ಇರುವುದು ಕರ್ನಾಟಕದಲ್ಲಿ ಮಾತ್ರ. ರೈತರಿಗೆ ಇದು ಮಾತ್ರವಲ್ಲದೆ ಬೇರೆ ಬೇರೆ ರೀತಿಯ ತರಬೇತಿ ಕೊಟ್ಟು ಅವರ ಅಭಿವೃದ್ಧಿ ಆಗುವಂತೆ ಮಾಡುತ್ತೇನೆ. ಗ್ರಾಮೀಣ ಪ್ರದೇಶಗಳಲ್ಲಿ ಆರ್​ಸಿಸಿ ಮನೆಗಳು ನೌಕರಿ ಮಾಡುವವರದ್ದು ಮಾತ್ರ ಆಗಿದೆ. ಹೀಗಾಗಿ ರೈತರ ಮಕ್ಕಳಿಗಾಗಿ ಯೋಜನೆ ರೂಪಿಸಿದ್ದೇನೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ವಿಕಲಚೇತನರ ವೇತನ ಹೆಚ್ಚಳ ಮಾಡಿದ್ದೇನೆ. ಅಧಿಕಾರಿಗಳು ಬಹಳ ದುಡ್ಡು ಆಗುತ್ತೆ ಅಂದರು. ಅದು ಬಡವರ ದುಡ್ಡು ಅವರಿಗೆ ಕೊಡಲು ನಿಮಗೇನು ಕಷ್ಟ ಅಂದೆ. ಒಬ್ಬ ಆಡಳಿತಗಾರನಿಗೆ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ. ನನ್ನ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಇನ್ನಷ್ಟು ಕಲ್ಪನೆಗಳನ್ನ ಇಟ್ಟುಕೊಂಡಿದ್ದೆ. ಅವೆಲ್ಲವನ್ನೂ ಬರುವ‌ ದಿನಗಳಲ್ಲಿ ಮಾಡಿಕೊಡುತ್ತೇನೆ ಅಂತ ಬೊಮ್ಮಾಯಿ ಹೇಳಿದರು.

ಕೆರೆಗಳಿಗೆ ನೀರು ತುಂಬಿಸುವ ನನ್ನ ಕನಸು ನನಸಾಗಿದೆ ಅಂತ ಬಾಡ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು 37 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ್ದೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಪ್ರಯತ್ನ ಮಾಡುತ್ತಿದ್ದೇನೆ. ಈ ಭಾಗದ ಸಾಮಾನ್ಯರಿಗೂ ಸುಲಭವಾಗಿ ಮರಳು ಸಿಗಬೇಕು ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ವೈರಲ್ ಜ್ವರ, ಒಂದು ವಾರದಲ್ಲಿ 32 ಮಕ್ಕಳು ಸಾವು; ಇದು ಡೆಂಗ್ಯೂ ಎಂದ ಅಧಿಕಾರಿಗಳು

ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಸೇರಿದ ಪಿಇಎಸ್ ಶಿಕ್ಷಣ ಸಂಸ್ಥೆಯ 4 ಬಸ್​ಗಳಿಂದ 580 ಲೀಟರ್​ ಡೀಸೆಲ್ ಕಳ್ಳತನ

(responsibility of entire state rests with me but I will never forget my Hometown said Basavaraj Bommai in Haveri)

Published On - 11:47 am, Wed, 1 September 21

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್