AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಯಾಕೆ ಗೊತ್ತಾ?

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಪ್ರತಿ ಖಾತೆಗೆ ರೈತರಿಗೆ ಕೇವಲ 2 ಸಾವಿರ ನೀಡುವುದನ್ನ ಬಿಟ್ಟು ಪ್ರತಿ ಎಕರೆಗೆ ಕನಿಷ್ಠ 15 ಸಾವಿರ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯ ಪ್ರತಿ ರೈತರಿಂದ ಒಂದು ಸಾವಿರ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ನೀಡುತ್ತೇವೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ರೈತರು.

ಸಿಎಂ ಸಿದ್ದರಾಮಯ್ಯ  ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಯಾಕೆ ಗೊತ್ತಾ?
ಸಿದ್ದರಾಮಯ್ಯ ಸರ್ಕಾರದ ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರ ಆಕ್ರೋಶ
ಸಾಧು ಶ್ರೀನಾಥ್​
|

Updated on: Dec 12, 2023 | 11:11 AM

Share

ಹಾವೇರಿ, ಡಿಸೆಂಬರ್ 12: ರಾಜ್ಯದಲ್ಲಿ ಈ ಬಾರಿ ಭಾರೀ ಬರಗಾಲ. ಸರಕಾರ ಬರ ಘೋಷಣೆ ಮಾಡಿದೆ. ಸರಕಾರ ಪ್ರತಿ ರೈತನಿಗೆ ಮೊದಲ ಕಂತಿನಲ್ಲಿ ಎರಡು ಸಾವಿರ ರುಪಾಯಿ ಬರ ಪರಿಹಾರ ನೀಡುವದಾಗಿ ಘೋಷಣೆ ಮಾಡಿತ್ತು. ಅದಕ್ಕೆ ಇಲ್ಲಿನ ರೈತರು ( farmers) ಮಾಡಿದ್ದಾದರೂ ಎನು? ಅಂತಿರಾ ಈ ಸ್ಟೋರಿ ನೋಡಿ. ರಾಜ್ಯ ಸರಕಾರ (Siddaramaiah) ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರ ಘೊಷನೆ ಮಾಡಿ ಪ್ರತಿ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರುಪಾಯಿ ಪರಿಹಾರ ನೀಡುತ್ತಿದೆ. ಆದರೆ ಸರ್ಕಾರದ ಅಕೌಂಟಿಗೆ ನಾವೇ ಒಂದು ಸಾವಿರ ರುಪಾಯಿ ನೀಡುತ್ತೇವೆ ಎಂದು ಹಾವೇರಿ ಜಿಲ್ಲೆ ಸವಣೂರು (Savanur) ತಾಲೂಕಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

50ಕ್ಕೂ ಅಧಿಕ ರೈತರು ತಲಾ ಒಂದು ಸಾವಿರ ರುಪಾಯಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಪ್ರತಿ ಎಕರೆಗೆ ೨೦ ರಿಂದ 30 ಸಾವಿರ ರುಪಾಯಿ ಖರ್ಚು ಮಾಡಿದ್ದೇವೆ. ಅದರೆ ಸರ್ಕಾರ ಮಾತ್ರ ಎರಡು ಸಾವಿರ ರೂಪಾಯಿ ಬರ ಪರಿಹಾರ ನೀಡಿ ನಮ್ಮನ್ನು ಭಿಕ್ಷುರಂತೆ ಕಾಣುತ್ತಿದೆ. ಇದು ನಮಗೆ ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅವಮಾನ ಮಾಡಿದಂತೆ. ನಮಗೆ 2 ಸಾವಿರ ರೂಪಾಯಿ ಪರಿಹಾರವೆಂದು ವಿಷ ಕುಡಿಯಲು ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವರ್ಷ ರೈತರು ಎರಡರಿಂದ ಮೂರು ಬಾರಿ ಬಿತ್ತನೆ ಮಾಡಿದ್ದೇವೆ. ಪ್ರತಿ ಬಾರಿ ಬಿತ್ತನೆ ಮಾಡಿದಾಗ ಪ್ರತಿ ಎಕರೆಗೆ 20-30 ಸಾವಿರ ಖರ್ಚಾಗುತ್ತದೆ. ಆದ್ದರಿಂದ ರಾಜ್ಯ ಸರಕಾರ ಎಕರೆಗೆ 15 ಸಾವಿರ ನೀಡಬೇಕು, ಕೇಂದ್ರ ಸರಕಾರ 15 ಸಾವಿರ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಹಣದಲ್ಲಿ ಭರ್ಜರಿ ಊಟ ಮಾಡಲಿ ಅಂತಾ ನಾವೇ ಅವರಿಗೆ ದುದ್ದು ಕೊಡುತ್ತೇವೆ ಎಂದು ರೈತರೆಲ್ಲರೂ ನೂರು, ಐದನೂರು ರೂಪಾಯಿ ನೋಟು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸವಣೂರು ತಹಶೀಲ್ದಾರ್​ಗೆ ಈ ಸಂಬಂಧ ಮನವಿ ಸಲ್ಲಿಸಿದರು.

Also Read:  ಸವಣೂರು -ಇತ್ತೀಚೆಗೆ ಧರೆಗುರುಳಿದ್ದ ದೊಡ್ಡ ಹುಣಸೆ ಮರಕ್ಕೆ ಮತ್ತೆ ಕಳೆ ಬಂದಿದೆ, ಮಠ ಮತ್ತು ಜಿಲ್ಲಾಡಳಿತದ ಪ್ರಯತ್ನಕ್ಕೆ ಫಲ ಸಿಕ್ಕಿದೆ!

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಪ್ರತಿ ಖಾತೆಗೆ ರೈತರಿಗೆ ಕೇವಲ 2 ಸಾವಿರ ನೀಡುವುದನ್ನ ಬಿಟ್ಟು ಪ್ರತಿ ಎಕರೆಗೆ ಕನಿಷ್ಠ 15 ಸಾವಿರ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯ ಪ್ರತಿ ರೈತರಿಂದ ಒಂದು ಸಾವಿರ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ನೀಡುತ್ತೇವೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ರೈತರು.

ವರದಿ: ರವಿ ಹೂಗಾರ, ಟಿವಿ9, ಹಾವೇರಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ