AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಯಾಕೆ ಗೊತ್ತಾ?

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಪ್ರತಿ ಖಾತೆಗೆ ರೈತರಿಗೆ ಕೇವಲ 2 ಸಾವಿರ ನೀಡುವುದನ್ನ ಬಿಟ್ಟು ಪ್ರತಿ ಎಕರೆಗೆ ಕನಿಷ್ಠ 15 ಸಾವಿರ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯ ಪ್ರತಿ ರೈತರಿಂದ ಒಂದು ಸಾವಿರ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ನೀಡುತ್ತೇವೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ರೈತರು.

ಸಿಎಂ ಸಿದ್ದರಾಮಯ್ಯ  ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಯಾಕೆ ಗೊತ್ತಾ?
ಸಿದ್ದರಾಮಯ್ಯ ಸರ್ಕಾರದ ಅಕೌಂಟಿಗೆ ನಾವೇ 1000 ರೂ ಹಾಕ್ತೇವೆ ಎಂದು ಸವಣೂರು ರೈತರ ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on: Dec 12, 2023 | 11:11 AM

ಹಾವೇರಿ, ಡಿಸೆಂಬರ್ 12: ರಾಜ್ಯದಲ್ಲಿ ಈ ಬಾರಿ ಭಾರೀ ಬರಗಾಲ. ಸರಕಾರ ಬರ ಘೋಷಣೆ ಮಾಡಿದೆ. ಸರಕಾರ ಪ್ರತಿ ರೈತನಿಗೆ ಮೊದಲ ಕಂತಿನಲ್ಲಿ ಎರಡು ಸಾವಿರ ರುಪಾಯಿ ಬರ ಪರಿಹಾರ ನೀಡುವದಾಗಿ ಘೋಷಣೆ ಮಾಡಿತ್ತು. ಅದಕ್ಕೆ ಇಲ್ಲಿನ ರೈತರು ( farmers) ಮಾಡಿದ್ದಾದರೂ ಎನು? ಅಂತಿರಾ ಈ ಸ್ಟೋರಿ ನೋಡಿ. ರಾಜ್ಯ ಸರಕಾರ (Siddaramaiah) ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರ ಘೊಷನೆ ಮಾಡಿ ಪ್ರತಿ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರುಪಾಯಿ ಪರಿಹಾರ ನೀಡುತ್ತಿದೆ. ಆದರೆ ಸರ್ಕಾರದ ಅಕೌಂಟಿಗೆ ನಾವೇ ಒಂದು ಸಾವಿರ ರುಪಾಯಿ ನೀಡುತ್ತೇವೆ ಎಂದು ಹಾವೇರಿ ಜಿಲ್ಲೆ ಸವಣೂರು (Savanur) ತಾಲೂಕಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

50ಕ್ಕೂ ಅಧಿಕ ರೈತರು ತಲಾ ಒಂದು ಸಾವಿರ ರುಪಾಯಿ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಪ್ರತಿ ಎಕರೆಗೆ ೨೦ ರಿಂದ 30 ಸಾವಿರ ರುಪಾಯಿ ಖರ್ಚು ಮಾಡಿದ್ದೇವೆ. ಅದರೆ ಸರ್ಕಾರ ಮಾತ್ರ ಎರಡು ಸಾವಿರ ರೂಪಾಯಿ ಬರ ಪರಿಹಾರ ನೀಡಿ ನಮ್ಮನ್ನು ಭಿಕ್ಷುರಂತೆ ಕಾಣುತ್ತಿದೆ. ಇದು ನಮಗೆ ಸಿದ್ದರಾಮಯ್ಯ ನೇತ್ರತ್ವದ ಸರಕಾರ ಅವಮಾನ ಮಾಡಿದಂತೆ. ನಮಗೆ 2 ಸಾವಿರ ರೂಪಾಯಿ ಪರಿಹಾರವೆಂದು ವಿಷ ಕುಡಿಯಲು ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ವರ್ಷ ರೈತರು ಎರಡರಿಂದ ಮೂರು ಬಾರಿ ಬಿತ್ತನೆ ಮಾಡಿದ್ದೇವೆ. ಪ್ರತಿ ಬಾರಿ ಬಿತ್ತನೆ ಮಾಡಿದಾಗ ಪ್ರತಿ ಎಕರೆಗೆ 20-30 ಸಾವಿರ ಖರ್ಚಾಗುತ್ತದೆ. ಆದ್ದರಿಂದ ರಾಜ್ಯ ಸರಕಾರ ಎಕರೆಗೆ 15 ಸಾವಿರ ನೀಡಬೇಕು, ಕೇಂದ್ರ ಸರಕಾರ 15 ಸಾವಿರ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಹಣದಲ್ಲಿ ಭರ್ಜರಿ ಊಟ ಮಾಡಲಿ ಅಂತಾ ನಾವೇ ಅವರಿಗೆ ದುದ್ದು ಕೊಡುತ್ತೇವೆ ಎಂದು ರೈತರೆಲ್ಲರೂ ನೂರು, ಐದನೂರು ರೂಪಾಯಿ ನೋಟು ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಸವಣೂರು ತಹಶೀಲ್ದಾರ್​ಗೆ ಈ ಸಂಬಂಧ ಮನವಿ ಸಲ್ಲಿಸಿದರು.

Also Read:  ಸವಣೂರು -ಇತ್ತೀಚೆಗೆ ಧರೆಗುರುಳಿದ್ದ ದೊಡ್ಡ ಹುಣಸೆ ಮರಕ್ಕೆ ಮತ್ತೆ ಕಳೆ ಬಂದಿದೆ, ಮಠ ಮತ್ತು ಜಿಲ್ಲಾಡಳಿತದ ಪ್ರಯತ್ನಕ್ಕೆ ಫಲ ಸಿಕ್ಕಿದೆ!

ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಪ್ರತಿ ಖಾತೆಗೆ ರೈತರಿಗೆ ಕೇವಲ 2 ಸಾವಿರ ನೀಡುವುದನ್ನ ಬಿಟ್ಟು ಪ್ರತಿ ಎಕರೆಗೆ ಕನಿಷ್ಠ 15 ಸಾವಿರ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯ ಪ್ರತಿ ರೈತರಿಂದ ಒಂದು ಸಾವಿರ ಸಂಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ನೀಡುತ್ತೇವೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ರೈತರು.

ವರದಿ: ರವಿ ಹೂಗಾರ, ಟಿವಿ9, ಹಾವೇರಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ