AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹಾವೇರಿಯಲ್ಲಿ ಅಪರಿಚಿತ ದುಷ್ಕರ್ಮಿಗಳು ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಕೂಡಲೇ ಗಾಯಾಳುವನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಈ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು
ಹಾವೇರಿ ಎಸ್​ಬಿಐ ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 10, 2023 | 7:30 PM

ಹಾವೇರಿ, ಆ.10: ಎಸ್​ಬಿಐ(SBI)ನಿವೃತ್ತ ಮ್ಯಾನೇಜರ್​ಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಹೌದು, ಹಾವೇರಿ(Haveri)ಯ ಬಸವೇಶ್ವರನಗರದಲ್ಲಿ ವಾಸಿಸುತ್ತಿದ್ದ  ನಿವೃತ್ತ ಬ್ಯಾಂಕ್​ ಮ್ಯಾನೇಜರ್​ ಜಯರಾಂ ಕೊಲ್ಲಾಪುರ ಅವರು ಬೈಕ್​ನಲ್ಲಿ ಪುತ್ರನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ್ದರು. ಈ ವೇಳೆ ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಅಪರಿಚಿತರು, ಅಡ್ಡಗಟ್ಟಿ ಜಯರಾಂ ಕೊಲ್ಲಾಪುರಗೆ 3 ಬಾರಿ ಚಾಕು ಇರಿದು, ಎಸ್ಕೇಪ್​ ಆಗಿದ್ದಾರೆ. ಕೂಡಲೇ ಗಾಯಾಳು ಜಯರಾಂ ಅವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾನುವಾರುಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬೀದರ್: ಜಾನುವಾರುಗಳನ್ನ ಕದ್ದು ಮಾರಾಟ ಮಾಡುತ್ತಿದ್ದ ವ್ಯಕ್ತೊಯೊರ್ವನನ್ನ ಬೀದರ್​ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೀದರ್​ನ ಜೈ ಭೀಮ್ ಬಡಾವಣೆಯ ಮನೆಯ ಮುಂದೆ ಕಟ್ಟಿದ್ದ ನಾಲ್ಕು ಜಾನುವಾರುಗಳನ್ನು ಕದ್ದುಕೊಂಡು ಹೋಗಿ ಮೈಲಾರ ಮಲ್ಲಣ್ಣ ಜಾನುವಾರು ಸಂತೆಯಲ್ಲಿ ಮಾರಾಟ ಮಾಡಿದ್ದಾನೆ. ಮಾರಾಟ ಮಾಡಿದ ಹಣವನ್ನು ತೆಗೆದುಕೊಂಡು ಬರುವಾಗ ಖಚಿತ ಮಾಹಿತಿ ಆದಾರದ ಮೇಲೆ ವ್ಯಕ್ತಿಯನ್ನ ಬಂಧಿಸಿದ್ದು, ಬಂಧಿತನಿಂದ 70 ಸಾವಿರ ರೂಪಾಯಿ ಹಣವನ್ನ ವಶಕ್ಕೆ ಪಡೆಯಲಾಗಿದೆ.
ಇನ್ನು ಈ ಕುರಿತು ಬೀದರ್ ನಗರದ ನ್ಯೂವ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಪೊಲೀಸರು ಜಾನುವಾರು ಕದಿಯುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದಾರೆ. ಜೊತೆಗೆ ಅವುಗಳನ್ನು ಸಾಗಿಸಿದ ಎರಡು ಗೂಡ್ಸ್​ ಆಟೋವನ್ನು ವಶಕ್ಕೆ ಪಡೆದಿದ್ದು, ಕಳ್ಳನನ್ನು ಜೈಲಿಗಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್​ ಸಿಬ್ಬಂದಿಗೆ ಎಸ್ಪಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್