AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ.ಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ; ಮೂರು ತಿಂಗಳ ಗರ್ಭಿಣಿ ಆದ ಯುವತಿ, ಕೇಸ್ ದಾಖಲು

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಬಿ.ಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ; ಮೂರು ತಿಂಗಳ ಗರ್ಭಿಣಿ ಆದ ಯುವತಿ, ಕೇಸ್ ದಾಖಲು
ನಿಂಗಪ್ಪ
TV9 Web
| Edited By: |

Updated on:Jun 07, 2022 | 11:19 AM

Share

ಹಾವೇರಿ: ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಎಂದು ತ್ರಿಮೂರ್ತಿಗಳನ್ನು ನಾವು ಗುರುಗಳಿಗೆ ಹೋಲಿಸುತ್ತೇವೆ. ಆದ್ರೆ ಇಲ್ಲೊಬ್ಬ ಪ್ರಾಧ್ಯಾಪಕ ಗುರುವಿನ ಮೇಲಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ನಿಂಗಪ್ಪ ಕಲಕೋಟಿ ಎಂಬುವವರು ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿ ಪಾಠ ಹೇಳಿಕೊಡುವುದಾಗಿ ಮನೆಗೆ ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಒಂದೂವರೆ ವರ್ಷಗಳಿಂದ ವಿದ್ಯಾರ್ಥಿನಿ ಮೇಲೆ ಏಳೆಂಟು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪ ಕೇಳಿ ಬಂದಿದೆ. ಅಲ್ಲದೆ ಲೈಂಗಿನ ದೌರ್ಜನ್ಯ ಎಸಗಿದ್ದಲ್ಲದೆ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರಂತೆ. ಇದನ್ನೂ ಓದಿ: Karnataka vs Uttar Pradesh: ಯುಪಿ ಬೌಲಿಂಗ್ ಬಿರುಗಾಳಿಗೆ ಕರ್ನಾಟಕ ತತ್ತರ: ಮನೀಶ್ ಪಡೆ ಕೇವಲ 253 ರನ್​ಗೆ ಆಲೌಟ್

ಆರೋಪಿ ನಿಂಗಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಇವರು ಎಸಗಿದ ಕೃತ್ಯದಿಂದ ಇಪ್ಪತ್ತೆರಡು ವರ್ಷದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಕಲಕೋಟಿ ವಿರುದ್ಧ ವಿದ್ಯಾರ್ಥಿನಿಯಿಂದ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2)(N) ಮತ್ತು 506 ಅಡಿ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:18 am, Tue, 7 June 22

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ