AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಬೈ ಎಲೆಕ್ಷನ್​: ಟಿಕೆಟ್​​ಗಾಗಿ ಕಾಂಗ್ರೆಸ್​​ನಲ್ಲಿ ಮುಸ್ಲಿಂ-ಲಿಂಗಾಯತ ಜಂಗೀ ಕುಸ್ತಿ !

ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇದೇ ನವೆಂಬರ್ 13ಕ್ಕೆ ಮೂರು ಅಖಾಡದಲ್ಲೂ ಮತದಾನ ನಡೆಯಲಿದೆ. ನಾಡಿದ್ದು ಶುಕ್ರವಾರದಿಂದ ನಾಮಿನೇಷನ್ ಪ್ರಕ್ರಿಯೆ ಶುರುವಾಗಲಿದೆ. ಯಾವ ಕ್ಷೇತ್ರದಿಂದ ಯಾರು ಕಣಕ್ಕಿಳಿತಾರೆ ಎನ್ನುವುದೇ ನಿಗೂಢವಾಗಿದೆ. ಅದರಲ್ಲೂ ಶಿಗ್ಗಾಂವಿ ಕಾಂಗ್ರೆಸ್​ ಟಿಕೆಟ್​ಗಾಗಿ ಮುಸ್ಲಿಂ ವರ್ಸಸ್ ಲಿಂಗಾಯತ ನಡುವೆ ಪೈಪೋಟಿ ನಡೆದಿದೆ.

ಶಿಗ್ಗಾಂವಿ ಬೈ ಎಲೆಕ್ಷನ್​: ಟಿಕೆಟ್​​ಗಾಗಿ ಕಾಂಗ್ರೆಸ್​​ನಲ್ಲಿ ಮುಸ್ಲಿಂ-ಲಿಂಗಾಯತ ಜಂಗೀ ಕುಸ್ತಿ !
ಕಾಂಗ್ರೆಸ್‌
ರಮೇಶ್ ಬಿ. ಜವಳಗೇರಾ
|

Updated on: Oct 16, 2024 | 10:21 PM

Share

ಹಾವೇರಿ, (ಅಕ್ಟೋಬರ್ 16): ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಆದ್ರೆ, ಕಾಂಗ್ರೆಸ್​​ ಮತ್ತು ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದ್ದು, ಯಾರಿಗೆ ಕೊಡಬೇಕೆನ್ನುವುದೇ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಅದರಲ್ಲೂ ಕಾಂಗ್ರೆಸ್​ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ನೋಡಿದರೆ ಹನುಮಂತನ ಬಾಲದಂತಿದೆ. ಮುಸ್ಲಿಂ ಸಮುದಾಯದ ಇಬ್ಬರು ಟಿಕೆಟ್​ಗೆ ಬೇಡಿಕೆ ಇಟ್ಟಿದ್ದರೆ, ಮತ್ತೊಂದು ಲಿಂಗಾಯತ ಸಮುದಾಯದವರ ಸಹ ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಸಂಬಂಧ ಟಿಕೆಟ್ ಆಕಾಂಕ್ಷಿಗಳು ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದಾರೆ.

ಬೆಂಗಳೂರಿನಲ್ಲಿ ಬೀಡುಬಿಟ್ಟ ಟಿಕೆಟ್ ಆಕಾಂಕ್ಷಿಗಳು

ಹೌದು…..ಅಜ್ಜಂಫೀರ್ ಖಾದ್ರಿ, ಯಾಸೀರ್ ಖಾನ್ ಪಠಾಣ್, ಸಂಜೀವ್ ನೀರಲಗಿ , ಸೋಮಣ್ಣ ಬೇವಿನಮರದ ಸೇರಿದಂತೆ ಹಲವರು ಟಿಕೆಟ್​ಗಾಗಿ ಬೆಂಗಳೂರಲ್ಲಿ ಬೀಡುಬಿಟ್ಟಿದ್ದು, ಟಿಕೆಟ್​ಗಾಗಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿದಂತೆ ತಮ್ಮ ಅಪ್ತ ಸಚಿವರ ದುಂಬಾಲು ಬಿದ್ದಿದ್ದಾರೆ. ಹೀಗಾಗಿ ಯಾರಿಗೆ ಟಿಕೆಟ್​ ನೀಡಬೇಕೆಂದು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು​ ಗೊಂದಲಕ್ಕೀಡಾಗಿದ್ದು, ಯಾರಿಗೆ ಕೊಟ್ಟರೆ ಈ ಬಾರಿ ಗೆಲ್ಲಬಹುದು ಎನ್ನುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಹಾಗೇ ಭಿನ್ನಮತ ಭುಗಿಲೇಳದಂತೆ ಅಭ್ಯರ್ಥಿ ಆಯ್ಕೆ ಮಾಡಬೇಕಾಗಿರುವುದು ಕಾಂಗ್ರೆಸ್​ ನಾಯಕರಿಗೆ ದೊಡ್ಡ ಸವಾಲ್ ಆಗಿದ್ದು, ಇದನ್ನು ಹೇಗೆ ನಿಭಾಯಿಸುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

ಮುಸ್ಲಿಂ ವರ್ಸಸ್ ಲಿಂಗಾಯತ

ಈಗಾಗಲೇ ಶಿಗ್ಗಾಂವಿಯಲ್ಲಿ 5 ಬಾರಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದರೂ ಸಹ ಸೋಲಾಗಿದೆ. ಈಗ ಆರನೇ ಬಾರಿಗೂ ಸಹ ತಮಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದೆ. 5 ಸಲ ಸೋತರೇನು? ಇದು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರ. ಹಾಗಾಗಿ ನಮಗೆ ಟಿಕೆಟ್ ನೀಡಬೇಕೆಂದು ಮುಸ್ಲಿಂ ಟಿಕೆಟ್ ಆಕಾಂಕ್ಷಿಗಳು ಬಿಗಿಪಟ್ಟು ಹಿಡಿದಿದ್ದು, ಮುಸ್ಲಿಂ ಸಮುದಾಯದ ಟಿಕೆಟ್​ ಆಕಾಂಕ್ಷಿಗಳಾದ ಮಾಜಿ‌ ಶಾಸಕ‌ ಅಜ್ಜಂಫೀರ್ ಖಾದ್ರಿ ಮತ್ತು ಯಾಸೀರ್ ಖಾನ್ ಫಠಾಣ್ ನಡುವೆ ಫೈಪೋಟಿ ನಡೆದಿದೆ.

ಇತ್ತ ಈ ಬಾರಿ ಲಿಂಗಾಯತರಿಗೆ ಅವಕಾಶ ಕೊಡಿ ಎಂದು ಲಿಂಗಾಯತ ಟಿಕೆಟ್ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದಾರೆ. ಲಿಂಗಾಯತರಲ್ಲಿ ಸೋಮಣ್ಣ ಬೇವಿನಮರದ, ಸಂಜೀವ್ ನೀರಲಗಿ ನಡುವೆ ಟಿಕೆಟ್ ಪೈಪೋಟಿ ಇದೆ. ಮುಸ್ಲಿರಿಗೆ ಮಣೆ ಹಾಕಿದರೆ ಲಿಂಗಾಯತ ಮತಗಳು ಕೈ ಕೊಡಲಿವೆ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್​ ನೀಡಬೇಕೆಂದು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ನಾಯಕರು ಲೆಕ್ಕಾಚಾರ ಹಾಕುತ್ತಿದ್ದಾರೆ.

ಜಾತಿವಾರು ಲೆಕ್ಕಾಚಾರ

  • ಒಟ್ಟು ಮತದಾರರ ಸಂಖ್ಯೆ- 2,26,079
  • ಪುರುಷರು- 1,16,588
  • ಮಹಿಳೆಯರು- 1,09480
  • ಇತರೇ- 11
  • ಲಿಂಗಾಯತರು- 80000
  • ಮುಸ್ಲಿಂ – 55 000
  • ಕುರುಬ – 25000
  • ಎಸ್ ಸಿ- 30, 000
  • ಎಸ್ಟಿ-22,000
  • ಬ್ರಾಹ್ಮಣ ,ದೈವಜ್ಞ ಸಮಾಜ- 3000
  • ಇತರೆ-12,000 ಮತಗಳು

Follow Us
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ