AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಉಪಚುನಾವಣೆ: ಸಂತರ ನಾಡಿನಲ್ಲಿ ಉಪಚುನಾವಣೆ ಕಾವು, ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ಕಾಂಗ್ರೆಸ್ ತಂತ್ರ

ಶಿಗ್ಗಾಂವಿಯಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಆಡಳಿತಾರೂಢ ಕಾಂಗ್ರೆಸ್ ಈ ಬಾರಿ ಬಿಜೆಪಿ ಭದ್ರಕೋಟೆಯನ್ನು ಛಿದ್ರ ಮಾಡಿ ಅಧಿಕಾರ ಹಿಡಿಯಲು ನಾನಾ ರಣತಂತ್ರಗಳನ್ನು ರೂಪಿಸುತ್ತಿದೆ. ಕಾಂಗ್ರೆಸ್ ಬಂಡಾಯ ಶಮನವಾಗಿದೆ. ಇತ್ತ ಬಿಜೆಪಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಪುತ್ರ ಭರತ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

ಶಿಗ್ಗಾಂವಿ ಉಪಚುನಾವಣೆ: ಸಂತರ ನಾಡಿನಲ್ಲಿ ಉಪಚುನಾವಣೆ ಕಾವು, ಬಿಜೆಪಿ ಭದ್ರಕೋಟೆ ಛಿದ್ರ ಮಾಡಲು ಕಾಂಗ್ರೆಸ್ ತಂತ್ರ
ಅಜ್ಜಂಪೀರ ಖಾದ್ರಿ
Ganapathi Sharma
|

Updated on:Oct 31, 2024 | 10:30 AM

Share

ಹಾವೇರಿ, ಅಕ್ಟೋಬರ್ 31: ಶಿಗ್ಗಾಂವಿ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರ ಪ್ರಾರಂಭಿಸಿವೆ. ಅಧಿಕೃತವಾಗಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಆಗುತ್ತಿದ್ದಂತೆಯೇ ಬಂಡಾಯ ಅಭ್ಯರ್ಥಿಯಾಗಿ ಖಾದ್ರಿ ನಾಮಪತ್ರ ಸಲ್ಲಿಸಿದ್ದರು. ಅದರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ನೇತ್ರತ್ವದಲ್ಲಿ ಸಂಧಾನ ಕಾರ್ಯ ಯಶಸ್ವಿಯಾಗಿದೆ. ಸಚಿವ ಜಮೀರ್ ಅಹ್ಮದ್ ನೇತ್ರತ್ವದಲ್ಲಿ ಪೊಲೀಸ್ ಮತ್ತು ಬಿಎಸ್ಏಫ್ ಯೋಧರ ಬಿಗಿ ಭದ್ರತೆಯಲ್ಲಿ ಖಾದ್ರಿ ತಹಶಿಲ್ದಾರ ಕಚೇರಿಗೆ ಕರೆದುಕೊಂಡು ಬಂದು ನಾಮಪತ್ರ ವಾಪಸು ಪಡೆದುಕೊಂಡರು. ಅದರೂ ಕಾರ್ಯಕರ್ತರು ಅಸಮಾಧಾನ ಹೊರ ಹಾಕಿದ್ದು, ಗೆಲ್ಲುವ ವ್ಯಕ್ತಿಗೆ ಟಿಕೆಟ್ ಕೊಡುವುದು ಬಿಟ್ಟು ಬೇರೆ ವ್ಯಕ್ತಿ ಟಿಕೆಟ್ ನೀಡಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಖಾದ್ರಿ ಸೂಕ್ತವಾದ ಸ್ಥಾನಮಾನ ಕೊಡುವಂತೆ ಆಗ್ರಹಿಸಿದ್ದರು. ಜೊತೆಗೆ ಸಿದ್ದರಾಮಯ್ಯ, ಡಿಕೆಶಿ ಮತ್ತು ಜಮೀರ ಅಹ್ಮದ್ ಮತ್ತು ಮುಖಂಡರ ಮಾತಿಗೆ ಬೆಲೆಕೊಟ್ಟು ವಾಪಸು ತೆಗೆದುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷ ಈ ಸಲ ಗೆಲ್ಲಬೇಕು. ಯಾವುದೇ ಷರತ್ತು ಇಲ್ಲದೆ ನಾಮಪತ್ರ ವಾಪಸು ಪಡೆದುಕೊಂಡಿದ್ದೇನೆ ಎಂದಿದ್ದಾರೆ.

ಬಂಡಾಯ ಶಮನವಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ತಂದಿದೆ. ಅಜ್ಜಂಪೀರ ಖಾದ್ರಿ ಮತ್ತು ಯಾಸೀರ ಖಾನ್ ಪಠಾಣ್, ಜಮೀರ್ ಅಹ್ಮದ್ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಇತ್ತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಲ್ಕು ಬಾರಿ‌ ಸತತ ಗೆಲವು ಪಡೆದಿದ್ದ ಅನುಭವದ ಮೇಲೆ ಕ್ಷೇತ್ರದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಓಡಾಡುತ್ತಿದ್ದಾರೆ. ಭರತ್ ಬೊಮ್ಮಾಯಿ ತಾಯಿ ಚನ್ನಮ್ಮ ಕೂಡಾ ಮಹಿಳಾ ಮತದಾರನ್ನ ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ.

ಕಾಂಗ್ರೆಸ್​ನಿಂದ ಸಚಿವ ಜಮೀರ್ ಅಹ್ಮದ್ ಕಳೆದ ಚುನಾವಣೆಯಲ್ಲಿ ಏನು ಮಾಡಿದ್ದಾರೆ ಎಂಬುದು ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅವರ ಗುರಿ ನನ್ನ ಮಗನನ್ನು ಸೋಲಿಸುವುದು ಅಷ್ಟೆ. ಆದರೆ ಜನತೆ ಗುರಿ ನನ್ನ ಮಗನನ್ನು ಗೆಲ್ಲಿಸುವುದು ಎಂದು ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಶಿಗ್ಗಾಂವಿ ಬಂಡಾಯ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ, ನಿಟ್ಟುಸಿರುಬಿಟ್ಟ ಕಾಂಗ್ರೆಸ್​

ಒಟ್ಟಿನಲ್ಲಿ ಕಾಂಗ್ರೆಸ್ ನಲ್ಲಿ ಬಂಡಾಯ ಶಮನವಾಗಿದ್ದು, ಖಾದ್ರಿ ನಾಮಪತ್ರ ವಾಪಸು ಪಡೆದುಕೊಂಡು ಪ್ರಚಾರ ಕಾರ್ಯದಲ್ಲಿ ತೋಡಗಿಕೊಂಡಿದ್ದಾರೆ. ಇತ್ತ ಬಿಜೆಪಿ ಕೂಡಾ ಆಡಳಿತ ವಿರೋಧಿ ಅಲೆಯ ವಿರುದ್ಧ ಈಜಿ ಭದ್ರಕೋಟೆಯನ್ನ ಉಳಿಸಿಕೊಳ್ಳಲು ರಣತಂತ್ರವನ್ನು ರೂಪಿಸುತ್ತಿದೆ.

ವರದಿ: ಅಣ್ಣಪ್ಪ ಬಾರ್ಕಿ ‘ಟಿವಿ9’

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:29 am, Thu, 31 October 24

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!