AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ ರೈತನ ಜಮೀನಿನಲ್ಲಿ ದೇವರ ಅಸ್ಪಷ್ಟ ಮೂರ್ತಿಗಳು ಉದ್ಭವ? ಸ್ಥಳದಲ್ಲೇ ಮೌನವಾಗಿ ಬಿಡಾರ ಹೂಡಿದ ದಾವಣಗೆರೆ ಸ್ವಾಮೀಜಿ

ಗ್ರಾಮದ ಉಡಚಪ್ಪ ಕೊಡೆಪ್ಪನವರ ಎಂಬುವರ ಜಮೀನಿನಲ್ಲಿ ದೇವರ ಅಸ್ಪಷ್ಟ ಮೂರ್ತಿಗಳು ಉದ್ಭವವಾಗಿವೆಯಂತೆ. ಕಳೆದೊಂದು ವರ್ಷದಿಂದ ರೈತ ಉಡಚಪ್ಪ ಮತ್ತು ಆತನ ಪತ್ನಿ ಮಂಜವ್ವಳ ಕನಸಿನಲ್ಲಿ ಉಡಚಮ್ಮದೇವಿ ಬರುತ್ತಿದ್ದರಂತೆ.

ಹಾವೇರಿ ರೈತನ ಜಮೀನಿನಲ್ಲಿ ದೇವರ ಅಸ್ಪಷ್ಟ ಮೂರ್ತಿಗಳು ಉದ್ಭವ? ಸ್ಥಳದಲ್ಲೇ ಮೌನವಾಗಿ ಬಿಡಾರ ಹೂಡಿದ ದಾವಣಗೆರೆ ಸ್ವಾಮೀಜಿ
ಹಾವೇರಿ ರೈತನ ಜಮೀನಿನಲ್ಲಿ ದೇವರ ಅಸ್ಪಷ್ಟ ಮೂರ್ತಿಗಳು ಉದ್ಭವ?
TV9 Web
| Edited By: |

Updated on:Sep 14, 2021 | 12:40 PM

Share

ಹಾವೇರಿ: ರೈತರೊಬ್ಬರ ಜಮೀನಿನಲ್ಲಿ ದೇವರ ಉದ್ಭವ ಮೂರ್ತಿಗಳು ಪ್ರತ್ಯಕ್ಷವಾಗಿವೆ ಎಂಬ ವದಂತಿ ಹಬ್ಬಿದ್ದು ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಾದ್ಯಂತ ಹರಡಿದೆ. ವಿಗ್ರಹಗಳನ್ನು ನೋಡಲು ನೂರಾರು ಜನರು ಇಚ್ಚಂಗಿಯ ರೈತನ ಜಮೀನಿಗೆ ಬರುತ್ತಿದ್ದಾರೆ.

ಗ್ರಾಮದ ಉಡಚಪ್ಪ ಕೊಡೆಪ್ಪನವರ ಎಂಬುವರ ಜಮೀನಿನಲ್ಲಿ ದೇವರ ಅಸ್ಪಷ್ಟ ಮೂರ್ತಿಗಳು ಉದ್ಭವವಾಗಿವೆಯಂತೆ. ಕಳೆದೊಂದು ವರ್ಷದಿಂದ ರೈತ ಉಡಚಪ್ಪ ಮತ್ತು ಆತನ ಪತ್ನಿ ಮಂಜವ್ವಳ ಕನಸಿನಲ್ಲಿ ಉಡಚಮ್ಮದೇವಿ ಬರುತ್ತಿದ್ದರಂತೆ. ಇಪ್ಪತ್ತೊಂದು ದಿನಗಳ ಕಾಲ ಭಿಕ್ಷೆ ಬೇಡಿ ತನ್ನನ್ನ ಪೂಜಿಸಿದರೆ ಪ್ರತ್ಯಕ್ಷಳಾಗುತ್ತೇನೆ ಎಂದು ದೇವಿ ಕನಸಿನಲ್ಲಿ ಹೇಳಿದ್ದಳಂತೆ. ಅದರಂತೆ ರೈತ ಉಡಚಪ್ಪ ಮಳೆದ ಐದು ದಿನಗಳಿಂದ ಊರೂರು ಸುತ್ತಿ ಭಿಕ್ಷೆ ಬೇಡಿದ್ದನಂತೆ. ಆದ್ರೆ ಈಗ ಕೇವಲ ಐದೇ ದಿನಕ್ಕೆ ರೈತ ಉಡಚಪ್ಪನ ಜಮೀನಿನಲ್ಲಿ ಪಾರ್ವತಿ, ಪರಮೇಶ್ವರ, ಗಣೇಶ, ಉಡಚಮ್ಮ, ನಾಗವೇಣಿ, ಯಲ್ಲಮ್ಮಳ ಅಸ್ಪಷ್ಟ ಮೂರ್ತಿಗಳು ಗೋಚರಿಸಿವೆ.

ಮೂರ್ತಿಗಳು ಕಣ್ಣಿಗೆ ಬೀಳುತ್ತಿದ್ದಂತೆ ಜನ ಮರಳೋ ಜಾತ್ರೆ ಮರಳೋ ಎಂಬಂತೆ ಅಸ್ಪಷ್ಟ ಮೂರ್ತಿಗಳನ್ನ ನೋಡಿ ಪೂಜೆ ಮಾಡೋಕೆ ಜನರ ದಂಡೇ ಹರಿದು ಬರುತ್ತಿದೆ. ಇನ್ನು ದಾವಣಗೆರೆ ಜಿಲ್ಲೆ ಹರಪನಹಳ್ಳಿ ಮೂಲದ‌ ಓರ್ವ ಸ್ವಾಮೀಜಿ ಮೂರ್ತಿಗಳು ಗೋಚರವಾದ ಸ್ಥಳದಲ್ಲೇ ಬಿಡಾರ ಹೂಡಿದ್ದಾರೆ, ಅವರು ಯಾರೊಂದಿಗೂ ಮಾತನಾಡದೆ ಮೌನ ತಾಳಿದ್ದಾರೆ. ಮೂರ್ತಿಗಳನ್ನು ನೋಡಲು ಬಂದ ಜನರು ಇದು ಪವಾಡವೋ ಏನೋ ಎಂದು ಕೇಳಿದ್ರೆ ಕೈಸನ್ನೆ, ಬಾಯಿ ಸನ್ನೆ ಮೂಲಕವೆ ಮೌನವಾಗಿ ಸ್ವಾಮೀಜಿ ಉತ್ತರಿಸುತ್ತಿದ್ದಾರೆ. ಇದರಿಂದ ಜನ ಅಚ್ಚರಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಅನಧಿಕೃತ ಪ್ರಾರ್ಥನಾ ಮಂದಿರಗಳ ತೆರವು; 80 ವರ್ಷಕ್ಕೂ ಹಿಂದಿನ ಆಂಜನೇಯ ದೇವಸ್ಥಾನದ ಮೇಲೂ ಕಣ್ಣು

Published On - 12:38 pm, Tue, 14 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!