ಐತಿಹಾಸಿಕ ಮಹತ್ವ ಪಡೆದಿರುವ ಮಾಲತೇಶ ದೇವಸ್ಥಾನ; ದೇವರ ಕಾರ್ಣಿಕವೇ ವರ್ಷದ ಭವಿಷ್ಯವಾಣಿ

ಮಾಲತೇಶ ದೇವಸ್ಥಾನದಲ್ಲಿ ಕಾರ್ಣಿಕೋತ್ಸವ ಸಮಯದಲ್ಲಿ ಪವಾಡಗಳು ನಡೆಯುತ್ತವೆ. ಭಕ್ತರು ದೇವಸ್ಥಾನದಲ್ಲಿ ಬಾರುಕೋಲು ಸೇವೆ, ಪಡ್ಡಲಗಿ ಸೇವೆ ಸಲ್ಲಿಸ್ತಾರೆ. ಸರಪಳಿ ಪವಾಡ ಕೂಡ ಇಲ್ಲಿ ನಡೆಯುತ್ತದೆ. ಹಲವರು ಹಲವು ರೀತಿಯ ಇಷ್ಟಾರ್ಥ ಸಿದ್ಧಿಗಾಗಿ ಮಾಲತೇಶ ದೇವರ ಮೊರೆ ಹೋಗುತ್ತಾರೆ.

ಐತಿಹಾಸಿಕ ಮಹತ್ವ ಪಡೆದಿರುವ ಮಾಲತೇಶ ದೇವಸ್ಥಾನ; ದೇವರ ಕಾರ್ಣಿಕವೇ ವರ್ಷದ ಭವಿಷ್ಯವಾಣಿ
ಮಾಲತೇಶ ದೇವಸ್ಥಾನ
Follow us
| Updated By: preethi shettigar

Updated on: Sep 03, 2021 | 11:29 AM

ಹಾವೇರಿ: ಐತಿಹಾಸಿಕವಾಗಿ ಮಹತ್ವ ಪಡೆದಿರುವ ಮಾಲತೇಶ ದೇವಸ್ಥಾನಕ್ಕೆ ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಭಕ್ತರ ದಂಡೆ ಆಗಮಿಸುತ್ತದೆ. ಪ್ರತಿವರ್ಷ ಆಯುಧ ಪೂಜೆ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಇಲ್ಲಿನ ಜನರು‌ ನಂಬಿಕೊಂಡು ಬಂದಿದ್ದಾರೆ. ಕೇವಲ ರಾಜ್ಯ ಮಾತ್ರವಲ್ಲ ದೇಶದ ಬೇರೆ ಬೇರೆ ರಾಜ್ಯಗಳ ಜನರು ಇಲ್ಲಿಗೆ ಬಂದು ದರ್ಶನ ಪಡೆಯುತ್ತಾರೆ. ಹಾಗಿದ್ದರೆ ಈ ದೇವಸ್ಥಾನದ ವಿಶೇಷತೆ ಏನು ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ.

ದೇವರಗುಡ್ಡ, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಐತಿಹಾಸಿಕ ಮಾಲತೇಶ ದೇವಸ್ಥಾನವನ್ನು ಹೊಂದಿರುವ ಗ್ರಾಮ. ರಾಣೆಬೆನ್ನೂರು ತಾಲೂಕು ಕೇಂದ್ರದಿಂದ ಹತ್ತು ಕಿ.ಮೀ ಮತ್ತು ಹಾವೇರಿ ಜಿಲ್ಲಾ ಕೇಂದ್ರದಿಂದ ಇಪ್ಪತ್ತೈದು ಕಿ.ಮೀ ದೂರದಲ್ಲಿರುವ ದೇವರಗುಡ್ಡದ ಮಾಲತೇಶ ಸಾಕಷ್ಟು ಪ್ರಸಿದ್ಧಿ ಪಡೆದಿರುವ ದೇವಸ್ಥಾನಗಳಲ್ಲಿ ಒಂದಾಗಿದೆ. ನೂರಾರು ವರ್ಷಗಳ‌ ಹಿಂದೆಯೇ ಈ ದೇವಸ್ಥಾನ ನಿರ್ಮಾಣವಾಗಿದೆ. ಮಾಲತೇಶ ದೇವರನ್ನು ಮಾಲಕಾಂಶ, ಮೈಲಾರಲಿಂಗೇಶ, ಗುಡದಯ್ಯ ಎಂತಲೂ ಕರೆಯುತ್ತಾರೆ.

ಮಾಲತೇಶಸ್ವಾಮಿಗೆ ಲಕ್ಷಾಂತರ ಸಂಖ್ಯೆಯ ಭಕ್ತರಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೆ ಬೇರೆ ಬೇರೆ ರಾಜ್ಯಗಳಿಂದಲೂ ಇಲ್ಲಿಗೆ ಭಕ್ತರು ಬರುತ್ತಾರೆ. ಹುಣ್ಣಿಮೆ, ಭಾನುವಾರ ಸೇರಿದಂತೆ ವಿಶೇಷ ದಿನಗಳಲ್ಲಂತೂ ಇಲ್ಲಿಗೆ ಭಕ್ತರ ದಂಡೆ ಆಗಮಿಸುತ್ತದೆ. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳ ಸಂದರ್ಭಗಳಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕಗಳು ನಡೆಯುತ್ತವೆ.

ಮಾಲತೇಶ ದೇವರ ಕಾರ್ಣಿಕವಾಣಿ ಪ್ರತಿವರ್ಷ ಆಯುಧ ಪೂಜೆ ಸಮಯದಲ್ಲಿ ಮಾಲತೇಶ ದೇವರ ಕಾರ್ಣಿಕವಾಣಿ ಆಗುತ್ತದೆ. ಕಾರ್ಣಿಕವಾಣಿವನ್ನು ವರ್ಷದ ಭವಿಷ್ಯವಾಣಿ ಎಂತಲೆ ಸುಮಾರು ವರ್ಷಗಳಿಂದ ನಂಬಿಕೊಂಡು ಬರಲಾಗಿದೆ. ಕಾರ್ಣಿಕ ಗೊರವಯ್ಯ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಬಿಲ್ಲನ್ನೇರಿ ಕಾರ್ಣಿಕವಾಣಿವನ್ನು ನುಡಿಯುತ್ತಾನೆ. ಕಾರ್ಣಿಕವಾಣಿಯ ಆಧಾರದ ಮೇಲೆ ರೈತರು ವರ್ಷದ ಮಳೆ, ಬೆಳೆ ನಿರ್ಧರಿಸುತ್ತಾರೆ. ಮಾಲತೇಶನ ಕಾರ್ಣಿಕವಾಣಿ ಆಲಿಸುವುದಕ್ಕೆ ಅಂತಲೆ ಆಯುಧ ಪೂಜೆ ಸಮಯದಲ್ಲಿ ಲಕ್ಷಾಂತರ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾರ್ಣಿಕವಾಣಿವನ್ನು ಕೇಳಿ ಮನೆಗೆ ವಾಪಸ್ ಆಗುತ್ತಾರೆ.

malthesh temple

ಮಾಲತೇಶ ದೇವರ ಕಾರ್ಣಿಕವಾಣಿ

ಮಾಲತೇಶ ದೇವಸ್ಥಾನದಲ್ಲಿ ಕಾರ್ಣಿಕೋತ್ಸವ ಸಮಯದಲ್ಲಿ ಪವಾಡಗಳು ನಡೆಯುತ್ತವೆ. ಭಕ್ತರು ದೇವಸ್ಥಾನದಲ್ಲಿ ಬಾರುಕೋಲು ಸೇವೆ, ಪಡ್ಡಲಗಿ ಸೇವೆ ಸಲ್ಲಿಸುತ್ತಾರೆ. ಸರಪಳಿ ಪವಾಡ ಕೂಡ ಇಲ್ಲಿ ನಡೆಯುತ್ತದೆ. ಹಲವರು ಹಲವು ರೀತಿಯ ಇಷ್ಟಾರ್ಥ ಸಿದ್ಧಿಗಾಗಿ ಮಾಲತೇಶ ದೇವರ ಮೊರೆ ಹೋಗುತ್ತಾರೆ. ಹೀಗೆ ಮಾಲತೇಶ ಸ್ವಾಮಿಯ ಮೊರೆ ಹೋದ ಜನರು ಇಷ್ಟಾರ್ಥಗಳು ಸಿದ್ಧಿಸಿದ ಮೇಲೆ ತಮ್ಮ ತಮ್ಮ ಇಚ್ಛೆಗನುಸಾರ ಹರಕೆ ತೀರಿಸುತ್ತಾರೆ.

ದೇವಸ್ಥಾನದ ಆವರಣದಲ್ಲಿ ದೊಡ್ಡದಾದ ಪಾದರಕ್ಷೆಗಳನ್ನು ಇರಿಸಲಾಗಿದೆ. ಅವುಗಳನ್ನು ಮಾಲತೇಶಸ್ವಾಮಿಯ ಪಾದರಕ್ಷೆಗಳು ಎಂತಲೆ ನಂಬಿಕೊಂಡು ಬರಲಾಗಿದೆ. ರಾತ್ರಿ ವೇಳೆಯಲ್ಲಿ ಮಾಲತೇಶಸ್ವಾಮಿ ಈ ಪಾದರಕ್ಷೆಗಳನ್ನು ಧರಿಸಿಕೊಂಡು ಓಡಾಡುತ್ತಾನೆ ಎಂಬ ನಂಬಿಕೆ ಇದೆ. ದೇವಸ್ಥಾನಕ್ಕೆ ಬರುವ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಮಾಲತೇಶಸ್ವಾಮಿಯ ಪಾದರಕ್ಷೆಗಳನ್ನು ತಲೆ ಮೇಲೆ ಇಟ್ಟುಕೊಳ್ಳುತ್ತಾರೆ. ಮತ್ತೆ ಕೆಲವರು ಅವುಗಳನ್ನು ಮುಟ್ಟಿ, ಎತ್ತಿ ನಮಸ್ಕರಿಸುತ್ತಾರೆ. ಹೀಗೆ ಹಲವು ವಿಶೇಷತೆಗಳನ್ನು ಹೊಂದಿರುವ ಮಾಲತೇಶಸ್ವಾಮಿ ಭಕ್ತರ ಪಾಲಿನ ಆರಾಧ್ಯ ದೈವವಾಗಿದ್ದಾನೆ. ಮಾಲತೇಶಸ್ವಾಮಿಯ ಮೇಲಿನ ಭಕ್ತಿಯಿಂದ ಲಕ್ಷಾಂತರ ಸಂಖ್ಯೆಯ ಜನರು ದೇವಸ್ಥಾನಕ್ಕೆ ಆಗಮಿಸಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾಲತೇಶಸ್ವಾಮಿಯ ಭಕ್ತಿಗೆ ಪಾತ್ರರಾಗ್ತಾರೆ.

ವರದಿ: ಪ್ರಭುಗೌಡ.ಎನ್.ಪಾಟೀಲ

ಇದನ್ನೂ ಓದಿ: ದಟ್ಟವಾದ ಅರಣ್ಯ ಪ್ರದೇಶದಲ್ಲೊಂದು ಗುಪ್ತಲಿಂಗ ದೇವಸ್ಥಾನ; ಈ ಲಿಂಗದ ಬಳಿ ಬರುವ ನೀರಿಗಿದೆ ಔಷಧೀಯ ಗುಣ

ದುರ್ಗಾಂಬಾ ದೇವಸ್ಥಾನದ ಗಂಟೆಗಳೇ ನ್ಯಾಯ ಪಂಚಾಯಿತಿ ಸಂಕೇತ; ಇಂದಿಗೂ ಪುರಾಣ ಪ್ರಸಿದ್ಧ ಸನ್ನಿವೇಶಗಳು ಜೀವಂತ

ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ