AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಲ್ಲಿ ವಿದ್ಯಾರ್ಥಿ ನವೀನ್​ ಸಾವು; ನಿವಾಸದಲ್ಲಿ 3ನೇ ದಿನದ ಕಾರ್ಯ ನೆರವೇರಿಸಿದ ಕುಟುಂಬಸ್ಥರು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ 3ನೇ ದಿನದ ಕಾರ್ಯ ನೆರವೇರಿಸಲಾಗಿದೆ. ನವೀನ್ ಕುಟುಂಬಸ್ಥರು, ಮೃತ ನವೀನ್​ ಫೋಟೋಗೆ ಹೂವು ಹಾಕಿ ಪೂಜೆ ಸಲ್ಲಿಸಿದ್ದಾರೆ.

ಉಕ್ರೇನ್​ನಲ್ಲಿ ವಿದ್ಯಾರ್ಥಿ ನವೀನ್​ ಸಾವು; ನಿವಾಸದಲ್ಲಿ 3ನೇ ದಿನದ ಕಾರ್ಯ ನೆರವೇರಿಸಿದ ಕುಟುಂಬಸ್ಥರು
ಮೃತ ವಿದ್ಯಾರ್ಥಿ ನವೀನ್​
TV9 Web
| Edited By: |

Updated on:Mar 03, 2022 | 3:08 PM

Share

ಹಾವೇರಿ: ಉಕ್ರೇನ್​ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್​ ಸಾವು ಹಿನ್ನೆಲೆ ಚಳಗೇರಿಯ ನವೀನ್ ನಿವಾಸದಲ್ಲಿ 3ನೇ ದಿನದ ಕಾರ್ಯ ನಡೆಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ 3ನೇ ದಿನದ ಕಾರ್ಯ ನೆರವೇರಿಸಲಾಗಿದೆ. ನವೀನ್ ಕುಟುಂಬಸ್ಥರು, ಮೃತ ನವೀನ್​ ಫೋಟೋಗೆ ಹೂವು ಹಾಕಿ ಪೂಜೆ ಸಲ್ಲಿಸಿದ್ದಾರೆ.

ಇತ್ತ ಖಾರ್ಕಿವ್ ನಗರದಿಂದ ಮೃತ ನವೀನ್ ಸ್ನೇಹಿತ, ರಾಯಚೂರಿನ ಲಕ್ಷ್ಮೀನಾರಾಯಣ್ ಭಾರತಕ್ಕೆ ವಾಪಸ್ ಆಗಿದ್ದಾರೆ. ಹಾವೇರಿಯ ನವೀನ್, ನಾನು ಒಂದು ವರ್ಷ ಜೊತೆಗಿದ್ದೆವು. ನವೀನ್ ಮೃತದೇಹವನ್ನ ಭಾರತಕ್ಕೆ ತರುವುದು ಸುಲಭವಿಲ್ಲ. ಉಕ್ರೇನ್​ನ ಖಾರ್ಕಿವ್ ನಗರದಲ್ಲಿ ನನ್ನ ಸ್ನೇಹಿತರಿದ್ದಾರೆ. ಬಂಕರ್​ಗಳಲ್ಲಿರುವ ನನ್ನ ಸ್ನೇಹಿತರನ್ನ ರಕ್ಷಿಸಬೇಕಾಗಿದೆ. ಉಕ್ರೇನ್​ನ ಸೈನಿಕರು ನಮಗೆ ಸಹಾಯ ಮಾಡಿದ್ದಾರೆ. ಉಕ್ರೇನ್ ಸೈನಿಕರು ಭಾರತೀಯರನ್ನ ಒತ್ತೆಯಾಳಾಗಿ ಇಟ್ಟಿಲ್ಲ ಎಂದು ದೆಹಲಿಯಲ್ಲಿ ವಿದ್ಯಾರ್ಥಿ ಲಕ್ಷ್ಮೀನಾಯರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

ಉಕ್ರೇನ್​ನಲ್ಲಿ ಸಿಲುಕಿರುವ ಮಗನನ್ನ ರಕ್ಷಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಗಗನ್‌ ಗೌಡ ಎಂಬವರ ಪೋಷಕರು ಮನವಿ ಮಾಡಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿ ಬಳಿ ಗಗನ್ ತಾಯಿ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ. ತಾಯಿ ಸುಜಾತ ಮಗ ಗಗನ್​ ಗೌಡ ಬಗ್ಗೆ ಕನವರಿಸುತ್ತಿದ್ದಾರೆ. ಕೆಲ ಕಾಲ ಪ್ರಜ್ಞೆ ತಪ್ಪಿದ್ದ ಗಗನ್ ಗೌಡ ತಾಯಿ ಸುಜಾತ ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಮನವಿ ಮಾಡಿದ್ದಾರೆ.

ರಷ್ಯಾ, ಉಕ್ರೇನ್​ ಯುದ್ಧದಲ್ಲಿ ನವೀನ್ ಮೃತಪಟ್ಟಿದ್ದು ದುರಂತ. ಬಹಳ ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಉಕ್ರೇನ್​ನಲ್ಲಿ ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಸಂಕಷ್ಟದಲ್ಲಿರುವವರನ್ನು ಕರೆತರುವಂತೆ ಶಂಕರಪ್ಪ ಹೇಳಿದ್ದಾರೆ. ಮೃತ ವಿದ್ಯಾರ್ಥಿ ನವೀನ್ ತಂದೆ ಶಂಕರಪ್ಪ ಒತ್ತಾಯಿಸಿದ್ದಾರೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ನವೀನ್​ ಮನೆಗೆ ಭೇಟಿ ವೇಳೆ ಮಾಜಿ ಸಚಿವ ಶಂಕರ್​ ಹೇಳಿಕೆ ನೀಡಿದ್ದಾರೆ. ನವೀನ್ ತಂದೆ, ಅಣ್ಣ, ಕುಟುಂಬಸ್ಥರಿಗೆ ಆರ್.ಶಂಕರ್ ಸಾಂತ್ವನ ಹೇಳಿದ್ದಾರೆ.

ಉಕ್ರೇನ್​ನಿಂದ ವಿದ್ಯಾರ್ಥಿ ನವೀನ್ ಮೃತದೇಹ ತರುವ ವಿಚಾರವಾಗಿ ವಿದೇಶಾಂಗ ಇಲಾಖೆ ಮೃತದೇಹ ತರುವ ಕೆಲಸ ಮಾಡ್ತಿದೆ. ಜೀವಂತವಾಗಿರುವವರನ್ನೇ ಏರ್​ಲಿಫ್ಟ್ ಮಾಡುವುದು ಕಷ್ಟ. ಸಾಧ್ಯವಾದರೆ ನವೀನ್ ಮೃತದೇಹ ತರುವ ಕೆಲಸ ಆಗಲಿದೆ. ವಿಮಾನದಲ್ಲಿ ಮೃತದೇಹ ತರಲು ಹೆಚ್ಚು ಜಾಗ‌ಬೇಕು. ಮೃತದೇಹದ ಜಾಗದಲ್ಲಿ 8 ರಿಂದ 10 ಜನ ಬರಬಹುದು ಎಂದು ಧಾರವಾಡದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​​ ಹೇಳಿದ್ದಾರೆ.

ಇದನ್ನೂ ಓದಿ: 694 ಕರ್ನಾಟಕದ ವಿದ್ಯಾರ್ಥಿಗಳ ಪೈಕಿ 86 ಜನ ಭಾರತಕ್ಕೆ ವಾಪಸ್, ಬೇಕಾಗಿರೋದು ಉಕ್ರೇನ್ ಒಳಗಡೆ ಸಹಾಯ ಎಂದು ಆಕ್ರೋಶ

ಇದನ್ನೂ ಓದಿ: Russia Ukraine War Live: ಉಕ್ರೇನ್​​ನಲ್ಲಿದ್ದ 20,000 ಭಾರತೀಯ ವಿದ್ಯಾರ್ಥಿಗಳ ಪೈಕಿ 17,000 ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್​

Published On - 1:04 pm, Thu, 3 March 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್