ಉಕ್ರೇನ್​ನಲ್ಲಿ ವಿದ್ಯಾರ್ಥಿ ನವೀನ್​ ಸಾವು; ನಿವಾಸದಲ್ಲಿ 3ನೇ ದಿನದ ಕಾರ್ಯ ನೆರವೇರಿಸಿದ ಕುಟುಂಬಸ್ಥರು

| Updated By: ganapathi bhat

Updated on: Mar 03, 2022 | 3:08 PM

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ 3ನೇ ದಿನದ ಕಾರ್ಯ ನೆರವೇರಿಸಲಾಗಿದೆ. ನವೀನ್ ಕುಟುಂಬಸ್ಥರು, ಮೃತ ನವೀನ್​ ಫೋಟೋಗೆ ಹೂವು ಹಾಕಿ ಪೂಜೆ ಸಲ್ಲಿಸಿದ್ದಾರೆ.

ಉಕ್ರೇನ್​ನಲ್ಲಿ ವಿದ್ಯಾರ್ಥಿ ನವೀನ್​ ಸಾವು; ನಿವಾಸದಲ್ಲಿ 3ನೇ ದಿನದ ಕಾರ್ಯ ನೆರವೇರಿಸಿದ ಕುಟುಂಬಸ್ಥರು
ಮೃತ ವಿದ್ಯಾರ್ಥಿ ನವೀನ್​
Follow us on

ಹಾವೇರಿ: ಉಕ್ರೇನ್​ನಲ್ಲಿ ಹಾವೇರಿ ವಿದ್ಯಾರ್ಥಿ ನವೀನ್​ ಸಾವು ಹಿನ್ನೆಲೆ ಚಳಗೇರಿಯ ನವೀನ್ ನಿವಾಸದಲ್ಲಿ 3ನೇ ದಿನದ ಕಾರ್ಯ ನಡೆಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ 3ನೇ ದಿನದ ಕಾರ್ಯ ನೆರವೇರಿಸಲಾಗಿದೆ. ನವೀನ್ ಕುಟುಂಬಸ್ಥರು, ಮೃತ ನವೀನ್​ ಫೋಟೋಗೆ ಹೂವು ಹಾಕಿ ಪೂಜೆ ಸಲ್ಲಿಸಿದ್ದಾರೆ.

ಇತ್ತ ಖಾರ್ಕಿವ್ ನಗರದಿಂದ ಮೃತ ನವೀನ್ ಸ್ನೇಹಿತ, ರಾಯಚೂರಿನ ಲಕ್ಷ್ಮೀನಾರಾಯಣ್ ಭಾರತಕ್ಕೆ ವಾಪಸ್ ಆಗಿದ್ದಾರೆ. ಹಾವೇರಿಯ ನವೀನ್, ನಾನು ಒಂದು ವರ್ಷ ಜೊತೆಗಿದ್ದೆವು. ನವೀನ್ ಮೃತದೇಹವನ್ನ ಭಾರತಕ್ಕೆ ತರುವುದು ಸುಲಭವಿಲ್ಲ. ಉಕ್ರೇನ್​ನ ಖಾರ್ಕಿವ್ ನಗರದಲ್ಲಿ ನನ್ನ ಸ್ನೇಹಿತರಿದ್ದಾರೆ. ಬಂಕರ್​ಗಳಲ್ಲಿರುವ ನನ್ನ ಸ್ನೇಹಿತರನ್ನ ರಕ್ಷಿಸಬೇಕಾಗಿದೆ. ಉಕ್ರೇನ್​ನ ಸೈನಿಕರು ನಮಗೆ ಸಹಾಯ ಮಾಡಿದ್ದಾರೆ. ಉಕ್ರೇನ್ ಸೈನಿಕರು ಭಾರತೀಯರನ್ನ ಒತ್ತೆಯಾಳಾಗಿ ಇಟ್ಟಿಲ್ಲ ಎಂದು ದೆಹಲಿಯಲ್ಲಿ ವಿದ್ಯಾರ್ಥಿ ಲಕ್ಷ್ಮೀನಾಯರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.

ಉಕ್ರೇನ್​ನಲ್ಲಿ ಸಿಲುಕಿರುವ ಮಗನನ್ನ ರಕ್ಷಿಸುವಂತೆ ಹಾಸನ ಜಿಲ್ಲಾಧಿಕಾರಿಗೆ ಗಗನ್‌ ಗೌಡ ಎಂಬವರ ಪೋಷಕರು ಮನವಿ ಮಾಡಿದ್ದಾರೆ. ಹಾಸನ ಜಿಲ್ಲಾಧಿಕಾರಿ ಕಚೇರಿ ಬಳಿ ಗಗನ್ ತಾಯಿ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ. ತಾಯಿ ಸುಜಾತ ಮಗ ಗಗನ್​ ಗೌಡ ಬಗ್ಗೆ ಕನವರಿಸುತ್ತಿದ್ದಾರೆ. ಕೆಲ ಕಾಲ ಪ್ರಜ್ಞೆ ತಪ್ಪಿದ್ದ ಗಗನ್ ಗೌಡ ತಾಯಿ ಸುಜಾತ ಮಗನನ್ನು ಸುರಕ್ಷಿತವಾಗಿ ಕರೆತರುವಂತೆ ಮನವಿ ಮಾಡಿದ್ದಾರೆ.

ರಷ್ಯಾ, ಉಕ್ರೇನ್​ ಯುದ್ಧದಲ್ಲಿ ನವೀನ್ ಮೃತಪಟ್ಟಿದ್ದು ದುರಂತ. ಬಹಳ ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಉಕ್ರೇನ್​ನಲ್ಲಿ ಇನ್ನೂ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಸಂಕಷ್ಟದಲ್ಲಿರುವವರನ್ನು ಕರೆತರುವಂತೆ ಶಂಕರಪ್ಪ ಹೇಳಿದ್ದಾರೆ. ಮೃತ ವಿದ್ಯಾರ್ಥಿ ನವೀನ್ ತಂದೆ ಶಂಕರಪ್ಪ ಒತ್ತಾಯಿಸಿದ್ದಾರೆ. ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ನವೀನ್​ ಮನೆಗೆ ಭೇಟಿ ವೇಳೆ ಮಾಜಿ ಸಚಿವ ಶಂಕರ್​ ಹೇಳಿಕೆ ನೀಡಿದ್ದಾರೆ. ನವೀನ್ ತಂದೆ, ಅಣ್ಣ, ಕುಟುಂಬಸ್ಥರಿಗೆ ಆರ್.ಶಂಕರ್ ಸಾಂತ್ವನ ಹೇಳಿದ್ದಾರೆ.

ಉಕ್ರೇನ್​ನಿಂದ ವಿದ್ಯಾರ್ಥಿ ನವೀನ್ ಮೃತದೇಹ ತರುವ ವಿಚಾರವಾಗಿ ವಿದೇಶಾಂಗ ಇಲಾಖೆ ಮೃತದೇಹ ತರುವ ಕೆಲಸ ಮಾಡ್ತಿದೆ. ಜೀವಂತವಾಗಿರುವವರನ್ನೇ ಏರ್​ಲಿಫ್ಟ್ ಮಾಡುವುದು ಕಷ್ಟ. ಸಾಧ್ಯವಾದರೆ ನವೀನ್ ಮೃತದೇಹ ತರುವ ಕೆಲಸ ಆಗಲಿದೆ. ವಿಮಾನದಲ್ಲಿ ಮೃತದೇಹ ತರಲು ಹೆಚ್ಚು ಜಾಗ‌ಬೇಕು. ಮೃತದೇಹದ ಜಾಗದಲ್ಲಿ 8 ರಿಂದ 10 ಜನ ಬರಬಹುದು ಎಂದು ಧಾರವಾಡದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​​ ಹೇಳಿದ್ದಾರೆ.

ಇದನ್ನೂ ಓದಿ: 694 ಕರ್ನಾಟಕದ ವಿದ್ಯಾರ್ಥಿಗಳ ಪೈಕಿ 86 ಜನ ಭಾರತಕ್ಕೆ ವಾಪಸ್, ಬೇಕಾಗಿರೋದು ಉಕ್ರೇನ್ ಒಳಗಡೆ ಸಹಾಯ ಎಂದು ಆಕ್ರೋಶ

ಇದನ್ನೂ ಓದಿ: Russia Ukraine War Live: ಉಕ್ರೇನ್​​ನಲ್ಲಿದ್ದ 20,000 ಭಾರತೀಯ ವಿದ್ಯಾರ್ಥಿಗಳ ಪೈಕಿ 17,000 ಜನ ಸುರಕ್ಷಿತ ಸ್ಥಳಕ್ಕೆ ಶಿಫ್ಟ್​

Published On - 1:04 pm, Thu, 3 March 22