AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿಯಲ್ಲಿದ್ದರು ಅಭಿವೃದ್ದಿ ಕಾಣದ ಸೇತುವೆ ಕಾಮಗಾರಿಗಳು

ರಾಷ್ಟ್ರೀಯ ಹೆದ್ದಾರಿ ಆದರೂ ಕುಂಟುತ್ತ ಸಾಗಿದೆ ಸೇತುವೆ ಕಾಮಗಾರಿ, ಓಡಾಡೋ ಜನರಿಗೆ ನೆಮ್ಮದಿಯೆ ಇಲ್ಲದಂತಾಗಿದೆ. ಇದರಿಂದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ ಟ್ರಾಫಿಕ್ ಜಾಮ್ ಆಗುತ್ತಿದ್ದು ವಾಹನ ಸವಾರರು ಗಂಟೆಗಟ್ಟಲೆ ನಿಂತು ಪ್ರಯಾಣ ಮಾಡಬೇಕಾದ ಸ್ಥಿತಿ ಎದುರಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿದ್ದರು  ಅಭಿವೃದ್ದಿ ಕಾಣದ  ಸೇತುವೆ ಕಾಮಗಾರಿಗಳು
ರಾಷ್ಟ್ರೀಯ ಹೆದ್ದಾರಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Nov 15, 2022 | 5:35 PM

Share

ಹಾವೇರಿ: ಜಿಲ್ಲೆಯ ಬ್ಯಾಡಗಿ(bydagi) ತಾಲೂಕಿನ ಮೋಟೆಬೆನ್ನೂರು ಮತ್ತು ಛತ್ರ ಗ್ರಾಮದ ಬಳಿ ರಸ್ತೆಯ ಪಕ್ಕಕ್ಕೆ ವಾಹನ ಪಲ್ಟಿ ಹೊಡೆದಿದೆ. ಅರ್ಧಕ್ಕೆ ನಿಂತಿರೋ ಸೇತುವೆ ಕಾಮಗಾರಿಯಿಂದ  ವಾಹನ ದಟ್ಟಣೆ(traffic jam) ಆಗಿ ವಾಹನ ಸವಾರರು ಪರದಾಟ ಎದುರಿಸುತ್ತಿದ್ದಾರೆ. ಮೋಟೆಬೆನ್ನೂರು ಮತ್ತು ಛತ್ರ ಗ್ರಾಮದ ಬಳಿ ಹಾದು ಹೋಗಿರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(pune-banglore national highway) ಕಾಮಗಾರಿ ಬಹುತೇಕ ಮುಕ್ತಾಯದ ಹಂತಕ್ಕೆ ತಲುಪಿದೆ. ಆದರೆ ಎರಡೂ ಗ್ರಾಮಗಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಓಡಾಟಕ್ಕೆ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.  ಕಳೆದ ಹಲವು ತಿಂಗಳುಗಳಿಂದ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು ಹೀಗೆ ಆದರೆ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ.

ಎರಡೂ ಸೇತುವೆಗಳ ನಿರ್ಮಾಣ ಕಾಮಗಾರಿ ಕಾರಣಾಂತರಗಳಿಂದ ನೆನೆಗುದಿಗೆ ಬಿದ್ದಿದ್ದು. ಸೇತುವೆಗಳ ಬಳಿ ಸರ್ವೀಸ್ ರಸ್ತೆ ನಿರ್ಮಾಣವಾಗಿದ್ದರು ಕೂಡ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಈಗಾಗಲೆ ಸರ್ವೀಸ್ ರಸ್ತೆಗಳು ಕಿತ್ತು ಹೋಗಿದ್ದಾವೆ. ದೊಡ್ಡ ತಗ್ಗು ಗುಂಡಿಗಳು ನಿರ್ಮಾಣ ಆಗಿದ್ದಾವೆ. ಇದರಿಂದ ವಾಹನ ಸವಾರರು ಸಾಕಷ್ಟು ಪರದಾಡೋ ಪರಿಸ್ಥಿತಿ ಎದುರಾಗಿದೆ. ಆದಷ್ಟು ಬೇಗ ಹೆದ್ದಾರಿ ಪ್ರಾಧಿಕಾರ‌ ಹಾಗೂ ಜಿಲ್ಲಾಡಳಿತ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಎದುರಾಗಿರೋ ಸಮಸ್ಯೆಗಳನ್ನು ಪರಿಹರಿಸಿ, ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ.

ವಾಹನ ಸವಾರರೊಬ್ಬರು ಮಾತನಾಡಿ ಕಳೆದ ಹಲವು ತಿಂಗಳುಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೇತುವೆಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದಾವೆ. ಇದರಿಂದ ಪ್ರತಿದಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವಂತ ಜನರಿಗೆ ಧೂಳಿನಿಂದ ಸ್ನಾನವಾಗುತ್ತಿದೆ. ಇನ್ನು ಸರ್ವೀಸ್ ರಸ್ತೆಗಳಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು, ರಸ್ತೆಯಲ್ಲಿ ಅಪಘಾತಗಳು ಸಂಭವಿಸಿದ್ರೆ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್​ನಲ್ಲಿ ಕಾದು ಹೋಗುವ ಪರಿಸ್ಥಿತಿ ಎದುರಾಗಿದೆ.

ಸರ್ವೀಸ್ ರಸ್ತೆಗಳಲ್ಲಿ ಅಪಘಾತವಾದ ವಾಹನಗಳನ್ನು ತೆರೆವು ಮಾಡುವವರೆಗೂ ಹೆದ್ದಾರಿಯಲ್ಲಿ ಓಡಾಡುವ ವಾಹನಗಳು ರಸ್ತೆಯಲ್ಲಿಯೇ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ. ಇನ್ನು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗಂತೂ ರಸ್ತೆಯಿಂದ ಏಳುವ ಧೂಳಿನಿಂದ ಮುಂದೆ ಮತ್ತು ಹಿಂದೆ ಇರುವ ವಾಹನಗಳು ಕಾಣಿಸುವುದಿಲ್ಲ. ಸೇತುವೆಗಳ ಅಕ್ಕಪಕ್ಕದ ಗ್ರಾಮಗಳ ಜನರಂತೂ ಧೂಳಿನ ಹೊಡೆತಕ್ಕೆ ಸಿಕ್ಕು ತತ್ತರಿಸಿ ಹೋಗಿದ್ದಾರೆ. ಹದಗೆಟ್ಟ ಸರ್ವೀಸ್ ರಸ್ತೆಗಳಲ್ಲಿ ದಿನನಿತ್ಯ ಓಡಾಡುವ ವಾಹನಗಳು ಕೆಟ್ಟು ನಿಲ್ಲುತ್ತಿವೆ. ಆದಷ್ಟು ಬೇಗ ಸಂಬಂಧಿಸಿದವರು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿದರೆ ಹೆದ್ದಾರಿಯಲ್ಲಿ ಓಡಾಡುವ ವಾಹನ ಸವಾರರಿಗೆ ಹಾಗೂ ಹೆದ್ದಾರಿ ಪಕ್ಕದ ಗ್ರಾಮಗಳ ಜನರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಇನ್ನಷ್ಡು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವರದಿ: ಪ್ರಭುಗೌಡ.ಎನ್.ಪಾಟೀಲ ಟಿವಿ9 ಹಾವೇರಿ

Published On - 5:23 pm, Tue, 15 November 22

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್