AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಆತಂಕದಲ್ಲಿ ಹಾವೇರಿ ರೈತರು; ಒಣಗಿ ಹೋಗ್ತಿರುವ ಸಾವಿರಾರು ಹೆಕ್ಟರ್ ಬೆಳೆ

ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಾವೆರಿ ಜಿಲ್ಲೆಯಲ್ಲಿ ಬರದ ಆತಂಕ ಕಾಡುತ್ತಿದೆ. ಜಿಲ್ಲೆಯ ಜೀವ ನದಿಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮೂರು ಬಾರಿ ಬಿತ್ತನೆ ಮಾಡಿದ್ರು, ಫಸಲು ಮಾತ್ರ ಶೂನ್ಯ. ಈ ಹಿನ್ನಲೆ ರೈತರಿಗೆ ಮುಂದೇನೂ ಎಂಬ ಪ್ರಶ್ನೆ ಮೂಡಿದೆ.

ಬರದ ಆತಂಕದಲ್ಲಿ ಹಾವೇರಿ ರೈತರು; ಒಣಗಿ ಹೋಗ್ತಿರುವ ಸಾವಿರಾರು ಹೆಕ್ಟರ್ ಬೆಳೆ
ಹಾವೇರಿ ಜಿಲ್ಲೆಯಲ್ಲಿ ಬರದ ಛಾಯೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 27, 2023 | 3:09 PM

Share

ಹಾವೇರಿ, ಆ.27: ಹಳ್ಳದಂತೆ ಹರಿಯುತ್ತಿರುವ ಜೀವ ನದಿಗಳು, ಹಾಳಾಗಿರುವ ಮೆಕ್ಕೆ ಜೋಳ (Maize) ಬೆಳೆ. ಆತಂಕದಲ್ಲಿ ಕೈ ಕಟ್ಟಿ ಕೂತಿರುವ ಅನ್ನದಾತ. ಈ ದೃಶ್ಯ ಕಂಡು ಬಂದಿದ್ದು ಹಾವೇರಿ (Haveri) ಜಿಲ್ಲೆಯಲ್ಲಿ. ಹೌದು, ಕೃಷಿ ಪ್ರಧಾನ ಆಗಿರುವ ಜಿಲ್ಲೆಯಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ. ಜೂನ್ ಆರಂಭದಲ್ಲಿ ಆಗಬೇಕಾದ ಮಳೆ ಜುಲೈ ತಿಂಗಳಲ್ಲಿ ಆಗಿದಕ್ಕೆ ಎರಡನೆ ಬಾರಿ ಬಿತ್ತನೆ ಮಾಡಲಾಯಿತು. ಇನ್ನೇನು ಉತ್ತಮ ಮಳೆ ಆರಂಭವಾಗಿದೆ ಎಂದು ಸಾವಿರಾರು ರೂಪಾಯಿ ಖರ್ಚು ಮಾಡಿ ರಸ ಗೊಬ್ಬರ ಹಾಕಿದ್ದ ಅನ್ನದಾತನಿಗೆ ಉತ್ತಮ ಬೆಳೆ ಬರುವ ನಿರಿಕ್ಷೆ ಇತ್ತು. ಆದ್ರೆ, ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡಾ 80 ರಷ್ಟು ಕಡಿಮೆ ಆಗಿದ್ದರಿಂದ ರೈತನ ನಿರಿಕ್ಷೆ ಹುಸಿಯಾಗಿದ್ದು, ಕಷ್ಟ ಪಟ್ಟು ಬೆಳೆದ ಬೆಳೆ ಕಣ್ಣು ಮುಂದೇನೆ ಒಣಗಿ ಹೋಗುತ್ತಿವೆ.

ಈ ಕುರಿತು ಮಾತನಾಡಿದ ಹಾವೇರಿ ಕೃಷಿ ಜಂಟಿ ನಿರ್ದೆಶಕ ಮಂಜುನಾಥ್ ಅಂತರವಳ್ಳಿ ಅವರು ‘ ಹಾವೇರಿ ಜಿಲ್ಲೆಯಲ್ಲಿ ಶೇಕಡಾ 70 ರಷ್ಟು ಮೆಕ್ಕೆಜೋಳವನ್ನು ಹಾಕಲಾಗಿತ್ತು. ಆಗಸ್ಟ್​ ತಿಂಗಳಲ್ಲಿ 108 ಮಿಮೀ ಮಳೆಯಾಗಬೇಕಿತ್ತು. ಆದರೆ, 19 ಮಿಮೀ ಮಳೆಯಾಗಿದ್ದರಿಂದ ಬೆಳೆಗಳು ಕುಂಠಿತವಾಗಿದೆ. ಈ ಹಿನ್ನಲೆ ರೈತರು ಇರುವ ಬೆಳೆಯನ್ನು ಕಿತ್ತು, ಹೊಸ ಬೆಳೆ ಹಾಕಲು ಮುಂದಾಗುತ್ತಿದ್ದಾರೆ. ಆದರೆ, ಆದಷ್ಟು ರೈತರು ಹೊಸ ಬೆಳೆಯನ್ನು ಬೆಳೆಯದೇ ಇರುವ ಬೆಳೆಯನ್ನು ಉಳಿಸಿಕೊಳ್ಳೋಣಾ ಎನ್ನುತ್ತಿದ್ದಾರೆ.

ಇದನ್ನೂ ಓದಿ:Crop Insurance: ಇದೆಂಥ‌ ವಿಮೆ? ವಿಮಾ ಕಂತು ತುಂಬಿದ್ದು, ಬೆಳೆ ನಷ್ಟವಾಗಿದೆ ಎಂದರೂ ಪರಿಹಾರ ನೀಡಲು ಕಂಪನಿ ಹಿಂದೇಟು ಹಾಕುತ್ತಿರುವುದು ಯಾಕೆ?

ಇನ್ನು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಾವೇರಿ ಜಿಲ್ಲೆಯ ಎಲ್ಲ ನದಿಗಳು ಅಪಾಯದ ಮಟ್ಟ ಮಿರಿ ಹರಿದಿದ್ದವು. ಇನ್ನೇನು ವರ್ಷ ಪೂರ್ತಿ ನೀರಿನ ಸಮಸ್ಯೆ ಇರಲ್ಲ ಎಂದು ರೈತ ಆರಾಮ ಆಗಿದ್ದ. ಮಳೆ ಕೈ ಕೊಟ್ಟಿದಕ್ಕೆ ನದಿಗಳ ನೀರಿನ ಮಟ್ಟ ತೀರ ಕಡಿಮೆ ಆಗಿದೆ. ಜಮೀನನಲ್ಲಿನ ಬೋರವೇಲ್ ಬಾವಿಗಳ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಹದಿನೈದು ದಿನಗಳ ಕಾಲ ಮಳೆ ಬರದೆ ಇದ್ರೆ, ವರದಾ ನದಿಯಲ್ಲಿ ಪ್ರಾಣಿ ಪಕ್ಷಿಗಳಿಗೂ ಕುಡಿಯಲು ನೀರು ಸಿಗುವುದು ಕಷ್ಟ.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದಕ್ಕೆ ರೈತ ಸಮುದಾಯ ಸಂಕಷ್ಟದಲ್ಲಿದೆ. ಮುಂದೇನು ಮಾಡಬೇಕು ಎಂದು ತಿಳಿಯಲಾರದೆ ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದ್ದು, ನದಿಯಲ್ಲಿ ಹರಿದು ಹೋಗುತ್ತಿರುವ ನದಿಯನ್ನು ನಿಲ್ಲಿಸಲು ಜಾಕವೆಲ್​ಗಳಿಗೆ ಗೇಟ್​ಗಳನ್ನು ಹಾಕುವ ಕೆಲಸ ಆಗಬೇಕಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ