AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಆತಂಕದಲ್ಲಿ ಹಾವೇರಿ ರೈತರು; ಒಣಗಿ ಹೋಗ್ತಿರುವ ಸಾವಿರಾರು ಹೆಕ್ಟರ್ ಬೆಳೆ

ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಾವೆರಿ ಜಿಲ್ಲೆಯಲ್ಲಿ ಬರದ ಆತಂಕ ಕಾಡುತ್ತಿದೆ. ಜಿಲ್ಲೆಯ ಜೀವ ನದಿಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮೂರು ಬಾರಿ ಬಿತ್ತನೆ ಮಾಡಿದ್ರು, ಫಸಲು ಮಾತ್ರ ಶೂನ್ಯ. ಈ ಹಿನ್ನಲೆ ರೈತರಿಗೆ ಮುಂದೇನೂ ಎಂಬ ಪ್ರಶ್ನೆ ಮೂಡಿದೆ.

ಬರದ ಆತಂಕದಲ್ಲಿ ಹಾವೇರಿ ರೈತರು; ಒಣಗಿ ಹೋಗ್ತಿರುವ ಸಾವಿರಾರು ಹೆಕ್ಟರ್ ಬೆಳೆ
ಹಾವೇರಿ ಜಿಲ್ಲೆಯಲ್ಲಿ ಬರದ ಛಾಯೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 27, 2023 | 3:09 PM

Share

ಹಾವೇರಿ, ಆ.27: ಹಳ್ಳದಂತೆ ಹರಿಯುತ್ತಿರುವ ಜೀವ ನದಿಗಳು, ಹಾಳಾಗಿರುವ ಮೆಕ್ಕೆ ಜೋಳ (Maize) ಬೆಳೆ. ಆತಂಕದಲ್ಲಿ ಕೈ ಕಟ್ಟಿ ಕೂತಿರುವ ಅನ್ನದಾತ. ಈ ದೃಶ್ಯ ಕಂಡು ಬಂದಿದ್ದು ಹಾವೇರಿ (Haveri) ಜಿಲ್ಲೆಯಲ್ಲಿ. ಹೌದು, ಕೃಷಿ ಪ್ರಧಾನ ಆಗಿರುವ ಜಿಲ್ಲೆಯಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ. ಜೂನ್ ಆರಂಭದಲ್ಲಿ ಆಗಬೇಕಾದ ಮಳೆ ಜುಲೈ ತಿಂಗಳಲ್ಲಿ ಆಗಿದಕ್ಕೆ ಎರಡನೆ ಬಾರಿ ಬಿತ್ತನೆ ಮಾಡಲಾಯಿತು. ಇನ್ನೇನು ಉತ್ತಮ ಮಳೆ ಆರಂಭವಾಗಿದೆ ಎಂದು ಸಾವಿರಾರು ರೂಪಾಯಿ ಖರ್ಚು ಮಾಡಿ ರಸ ಗೊಬ್ಬರ ಹಾಕಿದ್ದ ಅನ್ನದಾತನಿಗೆ ಉತ್ತಮ ಬೆಳೆ ಬರುವ ನಿರಿಕ್ಷೆ ಇತ್ತು. ಆದ್ರೆ, ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡಾ 80 ರಷ್ಟು ಕಡಿಮೆ ಆಗಿದ್ದರಿಂದ ರೈತನ ನಿರಿಕ್ಷೆ ಹುಸಿಯಾಗಿದ್ದು, ಕಷ್ಟ ಪಟ್ಟು ಬೆಳೆದ ಬೆಳೆ ಕಣ್ಣು ಮುಂದೇನೆ ಒಣಗಿ ಹೋಗುತ್ತಿವೆ.

ಈ ಕುರಿತು ಮಾತನಾಡಿದ ಹಾವೇರಿ ಕೃಷಿ ಜಂಟಿ ನಿರ್ದೆಶಕ ಮಂಜುನಾಥ್ ಅಂತರವಳ್ಳಿ ಅವರು ‘ ಹಾವೇರಿ ಜಿಲ್ಲೆಯಲ್ಲಿ ಶೇಕಡಾ 70 ರಷ್ಟು ಮೆಕ್ಕೆಜೋಳವನ್ನು ಹಾಕಲಾಗಿತ್ತು. ಆಗಸ್ಟ್​ ತಿಂಗಳಲ್ಲಿ 108 ಮಿಮೀ ಮಳೆಯಾಗಬೇಕಿತ್ತು. ಆದರೆ, 19 ಮಿಮೀ ಮಳೆಯಾಗಿದ್ದರಿಂದ ಬೆಳೆಗಳು ಕುಂಠಿತವಾಗಿದೆ. ಈ ಹಿನ್ನಲೆ ರೈತರು ಇರುವ ಬೆಳೆಯನ್ನು ಕಿತ್ತು, ಹೊಸ ಬೆಳೆ ಹಾಕಲು ಮುಂದಾಗುತ್ತಿದ್ದಾರೆ. ಆದರೆ, ಆದಷ್ಟು ರೈತರು ಹೊಸ ಬೆಳೆಯನ್ನು ಬೆಳೆಯದೇ ಇರುವ ಬೆಳೆಯನ್ನು ಉಳಿಸಿಕೊಳ್ಳೋಣಾ ಎನ್ನುತ್ತಿದ್ದಾರೆ.

ಇದನ್ನೂ ಓದಿ:Crop Insurance: ಇದೆಂಥ‌ ವಿಮೆ? ವಿಮಾ ಕಂತು ತುಂಬಿದ್ದು, ಬೆಳೆ ನಷ್ಟವಾಗಿದೆ ಎಂದರೂ ಪರಿಹಾರ ನೀಡಲು ಕಂಪನಿ ಹಿಂದೇಟು ಹಾಕುತ್ತಿರುವುದು ಯಾಕೆ?

ಇನ್ನು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಹಾವೇರಿ ಜಿಲ್ಲೆಯ ಎಲ್ಲ ನದಿಗಳು ಅಪಾಯದ ಮಟ್ಟ ಮಿರಿ ಹರಿದಿದ್ದವು. ಇನ್ನೇನು ವರ್ಷ ಪೂರ್ತಿ ನೀರಿನ ಸಮಸ್ಯೆ ಇರಲ್ಲ ಎಂದು ರೈತ ಆರಾಮ ಆಗಿದ್ದ. ಮಳೆ ಕೈ ಕೊಟ್ಟಿದಕ್ಕೆ ನದಿಗಳ ನೀರಿನ ಮಟ್ಟ ತೀರ ಕಡಿಮೆ ಆಗಿದೆ. ಜಮೀನನಲ್ಲಿನ ಬೋರವೇಲ್ ಬಾವಿಗಳ ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಹದಿನೈದು ದಿನಗಳ ಕಾಲ ಮಳೆ ಬರದೆ ಇದ್ರೆ, ವರದಾ ನದಿಯಲ್ಲಿ ಪ್ರಾಣಿ ಪಕ್ಷಿಗಳಿಗೂ ಕುಡಿಯಲು ನೀರು ಸಿಗುವುದು ಕಷ್ಟ.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದಕ್ಕೆ ರೈತ ಸಮುದಾಯ ಸಂಕಷ್ಟದಲ್ಲಿದೆ. ಮುಂದೇನು ಮಾಡಬೇಕು ಎಂದು ತಿಳಿಯಲಾರದೆ ಕೈ ಕಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದ್ದು, ನದಿಯಲ್ಲಿ ಹರಿದು ಹೋಗುತ್ತಿರುವ ನದಿಯನ್ನು ನಿಲ್ಲಿಸಲು ಜಾಕವೆಲ್​ಗಳಿಗೆ ಗೇಟ್​ಗಳನ್ನು ಹಾಕುವ ಕೆಲಸ ಆಗಬೇಕಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್