Haveri News: ಟೊಮೆಟೊಗೆ ಭರ್ಜರಿ ಬೆಲೆ; ಕಳವು ಪತ್ತೆಗೆ ಸಿಸಿಟಿವಿ ಅಳವಡಿಸಿದ ಅಕ್ಕಿ ಆಲೂರ ವ್ಯಾಪಾರಿ

ಹಾವೇರಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 120 ರೂ. ಇದೆ. ಹಾಗಾಗಿ ಬಹಳಷ್ಟು ಕಳ್ಳತನ ಆಗುತ್ತಿದೆ. ಹತ್ತಾರು ಜನ ಒಮ್ಮೆಲೇ ಮಾರುಕಟ್ಟೆಗೆ ಬರುತ್ತಾರೆ. ಗೊತ್ತಾಗದಂತೆ ನಾಲ್ಕೈದು ಟೊಮೆಟೊ ತೆಗೆದುಕೊಂಡು ಹೋದರೂ ಮೂವತ್ತರಿಂದ ನಲವತ್ತು ರೂಪಾಯಿ ನಮಗೆ ನಷ್ಟ ಆಗುತ್ತದೆ ಎಂದಿದ್ದಾರೆ ವ್ಯಾಪಾರಿ ಕೃಷ್ಣಪ್ಪ.

Haveri News: ಟೊಮೆಟೊಗೆ ಭರ್ಜರಿ ಬೆಲೆ; ಕಳವು ಪತ್ತೆಗೆ ಸಿಸಿಟಿವಿ ಅಳವಡಿಸಿದ ಅಕ್ಕಿ ಆಲೂರ ವ್ಯಾಪಾರಿ
ಟೊಮೆಟೊ ಕಳವು ಪತ್ತೆಗೆ ಸಿಸಿಟಿವಿ ಅಳವಡಿಸಿದ ಅಕ್ಕಿ ಆಲೂರ ವ್ಯಾಪಾರಿ
Follow us
| Updated By: ಗಣಪತಿ ಶರ್ಮ

Updated on:Jul 04, 2023 | 6:18 PM

ಹಾವೇರಿ: ಕರ್ನಾಟಕದಲ್ಲಿ ಟೊಮೆಟೊ ದರ (Tomato Price) ನೂರರ ಗಡಿ ದಾಟಿರುವ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಕಳ್ಳತನದ ಭೀತಿ ಎದುರಾಗಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಸಿಸಿಟಿವಿ (CCTV Camera) ಅಳವಡಿಸಿ ಟೊಮೆಟೊ ಮಾರಾಟ ಮಾಡಲಾಗುತ್ತಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರ ಗ್ರಾಮದ ಮಾರುಕಟ್ಟೆಯಲ್ಲಿ ಕೃಷ್ಣಪ್ಪ ಎಂಬ ವ್ಯಾಪಾರಸ್ಥರು ಸಿಸಿಟಿವಿ ಅಳವಡಿಸಿ ಟೊಮೆಟೊ ಮಾರಾಟ ಮಾಡುತ್ತಿದ್ದಾರೆ.

ಸದ್ಯ ಹಾವೇರಿ ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೆಜಿಗೆ 120 ರೂ. ಇದೆ. ಹಾಗಾಗಿ ಬಹಳಷ್ಟು ಕಳ್ಳತನ ಆಗುತ್ತಿದೆ. ಹತ್ತಾರು ಜನ ಒಮ್ಮೆಲೇ ಮಾರುಕಟ್ಟೆಗೆ ಬರುತ್ತಾರೆ. ಗೊತ್ತಾಗದಂತೆ ನಾಲ್ಕೈದು ಟೊಮೆಟೊ ತೆಗೆದುಕೊಂಡು ಹೋದರೂ ಮೂವತ್ತರಿಂದ ನಲವತ್ತು ರೂಪಾಯಿ ನಮಗೆ ನಷ್ಟ ಆಗುತ್ತದೆ ಎಂದಿದ್ದಾರೆ ಕೃಷ್ಣಪ್ಪ.

ಜನರ ಜೊತೆ ಜಗಳ ಮಾಡುತ್ತಾ ಕುಳಿತುಕೊಳ್ಳಲು ಆಗುವುದಿಲ್ಲ. ಅದಕ್ಕಿಂತ ಸಿಸಿ ಕ್ಯಾಮರಾ ಅಳವಡಿಸಿದ್ರೆ ಸಮಸ್ಯೆ ಇರಲ್ಲ. ಹೀಗಾಗಿ ಸಿಸಿ ಕ್ಯಾಮರಾ ಅಳವಡಿಸಿ ಟೊಮೆಟೊ ಮಾರಾಟ ಮಾಡುತ್ತಿದ್ದೇನೆ ಎಂದು ಕೃಷ್ಣಪ್ಪ ತಿಳಿಸಿದ್ದಾರೆ.

ದೇಶದ ಪ್ರಮುಖ ನಗರಗಳಲ್ಲಿ ಟೊಮೆಟೊ ದರ ಕೆಜಿಗೆ 125-158 ರೂ.ಗಳ ನಡುವೆ ಇದೆ. ಕಳೆದ ವಾರ, ಸ್ಥಳೀಯ ಅಂಗಡಿಗಳಲ್ಲಿ ಟೊಮೆಟೊ ಬೆಲೆ ಮೊದಲು ಕೆಜಿಗೆ 100 ರೂಪಾಯಿ ಗಡಿ ದಾಟಿತ್ತು.

ಇದನ್ನೂ ಓದಿ: Tomato Price: ಕರ್ನಾಟಕದಲ್ಲಿ ದಶಕ ಬಾರಿಸಿದ ಟೊಮ್ಯಾಟೋ ದರ, ಇದಕ್ಕೆ ಕಾರಣ ಏನು?

ಏಪ್ರಿಲ್‌ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಉತ್ತರ ಭಾರತದಲ್ಲಿ ಬೆಳೆದು ನಿಂತ ಬೆಳೆಗಳು ನಾಶವಾಗಿದ್ದವು. ಇದು ಕೂಡ ಟೊಮೆಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಪರಿಣಾಮವಾಗಿ ಉತ್ತರದ ರಾಜ್ಯಗಳು ಕರ್ನಾಟಕದಂತಹ ದಕ್ಷಿಣದ ರಾಜ್ಯಗಳಿಂದ ಟೊಮೆಟೊವನ್ನು ಖರೀದಿಸಲು ಆರಂಭಿಸಿದವು. ಇದರಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿಯೂ ಟೊಮೆಟೊ ಬೆಲೆ ಏರಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Tue, 4 July 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​