AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ, ಲಾಂಛನದಲ್ಲಿ ಕೆಲವೊಂದು ಮಾರ್ಪಾಡು: ಡಾ. ಮಹೇಶ ಜೋಶಿ ಮಾಹಿತಿ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿಯಲ್ಲಿ ನಡೆಯಲಿದ್ದು, ನಗರದ ಆರ್​ಟಿಓ ಕಚೇರಿ ಬಳಿ ಇರುವ ಅಜ್ಜಯ್ಯನ ಗುಡಿ ಎದುರಿಗೆ ಸಮ್ಮೇಳನ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ.

86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ಥಳ ನಿಗದಿ, ಲಾಂಛನದಲ್ಲಿ ಕೆಲವೊಂದು ಮಾರ್ಪಾಡು: ಡಾ. ಮಹೇಶ ಜೋಶಿ ಮಾಹಿತಿ
ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಶಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 23, 2022 | 5:20 PM

Share

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8ರಂದು ಹಾವೇರಿಯಲ್ಲಿ ನಡೆಯಲಿದೆ. ನಗರದ ಆರ್​ಟಿಓ ಕಚೇರಿ ಬಳಿ ಇರುವ ಅಜ್ಜಯ್ಯನ ಗುಡಿ ಎದುರಿಗೆ ಸಮ್ಮೇಳನ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ (Mahesh Joshi) ಹೇಳಿದರು. ಕಳೆದ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಿದ್ದ ಲಾಂಛನದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ. ಭಾವಚಿತ್ರಗಳ ಬದಲು ಜಿಲ್ಲೆಯಲ್ಲಿನ ಐತಿಹಾಸಿಕ ಸ್ಥಳಗಳನ್ನು ಲಾಂಛನದಲ್ಲಿ ಹಾಕಲಾಗಿದೆ. ಹಾವೇರಿಯ ಅಸ್ಮಿತೆಯನ್ನು ತೋರಿಸುವುದನ್ನು ಲಾಂಛನದಲ್ಲಿ ಅಳವಡಿಸಲಾಗಿದೆ. ‘ಸಾಮರಸ್ಯದ ಭಾವ, ಕನ್ನಡದ ಜೀವ’ ಎಂದು ಘೋಷ ವಾಕ್ಯ ಕೂಡ ನೀಡಲಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 1ರಿಂದ ಕನ್ನಡ ರಥ ರಾಜ್ಯಾದ್ಯಂತ ಸಂಚಾರ

ಡಿಸೆಂಬರ್ 1ರಿಂದ ಕನ್ನಡ ರಥ ರಾಜ್ಯಾದ್ಯಂತ ಸಂಚಾರ ಮಾಡಲಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಿದ್ದಾಪುರದ ಭುವನೇಶ್ವರಿ ದೇವಸ್ಥಾನದಿಂದ ರಥ ಸಂಚಾರ ಆರಂಭಿಸಲಿದ್ದು, ರಾಜ್ಯದ 31 ಜಿಲ್ಲೆಗಳಲ್ಲಿ ಕನ್ನಡ ರಥ ಸಂಚರಿಸುತ್ತಿದೆ. ಭುವನೇಶ್ವರಿ ದೇವಸ್ಥಾನದಲ್ಲಿನ ದೀಪವನ್ನು ನಂದಾದೀಪದಂತೆ ಕನ್ನಡ ರಥದಲ್ಲಿಟ್ಟು ರಥಕ್ಕೆ ಚಾಲನೆ ನೀಡಲಾಗುವುದು. ಜನೇವರಿ 1ರಂದು ಕನ್ನಡ ರಥ ಹಾವೇರಿ ಜಿಲ್ಲೆಗೆ ಬರಲಿದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕನಕದಾಸರು, ಶಿಶುವಿನಹಾಳ ಶರೀಫರು ಮತ್ತು ಸರ್ವಜ್ಞರ ಹೆಸರಿನಲ್ಲಿ ವೇದಿಕೆಗಳ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಆಡಳಿತದಲ್ಲಿ ಕನ್ನಡ ಅನ್ನೋದು ಕಾನೂನಾಗಬೇಕು

ವಿಶೇಷವಾಗಿ ದಿ. ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ‘ನಾವಾಡುವ ನುಡಿಯೇ ಕನ್ನಡ ನುಡಿ’ ಕಾರ್ಯಕ್ರಮ ಮಾಡಲಾಗುತ್ತಿದೆ. ಇಡಿ ವಿಶ್ವದಲ್ಲಿರುವ ಕನ್ನಡ ಸಾಧಕರಿಗೆ 86 ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮೈಸೂರು ದಸರಾದಷ್ಟು ವಿಜೃಂಭಣೆಯಿಂದ ಸಮ್ಮೇಳನ ನಡೆಸಲು ಸಿದ್ಧತೆ ಮಾಡಲಾಗುತ್ತಿದೆ. ಎಲ್ಲ ಜಿಲ್ಲೆಗಳ ಸ್ತಬ್ಧಚಿತ್ರಗಳು ಸಮ್ಮೇಳನದಲ್ಲಿ ಪ್ರದರ್ಶನ ಆಗುವಂತೆ ವ್ಯವಸ್ಥೆ ಮಾಡುತ್ತಿದ್ದೇವೆ. ಆಡಳಿತದಲ್ಲಿ ಕನ್ನಡ ಅನ್ನೋದು ಕಾನೂನಾಗಬೇಕು. ಚಳಿಗಾಲದ ಅಧಿವೇಶನದಲ್ಲಿ ಇದಾಗಲಿದೆ ಅನ್ನೋ ವಿಶ್ವಾಸವಿದೆ. ಸಮ್ಮೇಳನಕ್ಕೆ ಪ್ರತಿನಿಧಿಗಳ ನೋಂದಣಿಗೆ ಆ್ಯಪ್​ ಸಿದ್ದವಾಗಿದ್ದು, ಆ ಮೂಲಕವೇ ಪ್ರತಿನಿಧಿಗಳ ನೋಂದಣಿ ಆಗಬೇಕು ಎಂದು ಡಾ. ಮಹೇಶ ಜೋಶಿ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:18 pm, Wed, 23 November 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!