AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ-ಧರ್ಮ ಬಿಟ್ಟು ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದವಳ ದುರಂತ ಅಂತ್ಯ! ಪತಿಯೇ ಕೊಂದು ಕೆರೆಗೆ ಎಸೆದ್ನಾ?

ಬ್ಯಾಡಗಿ ತಾಲೂಕಿನ ಕಳಗೊಂಡ ಗ್ರಾಮದ ತನುಜಾ ಅನ್ನೋ ಯುವತಿ ಅದೇ ಗ್ರಾಮದ ಬಸವರಾಜ ಬಸಾಪುರ ಅನ್ನೋ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ಲು. ಹೀಗೆ ಮದುವೆಯಾದವಳು ನಿನ್ನೆ ಕಾಗಿನೆಲೆ ಕೆರೆಯಲ್ಲಿ ಶವವಾಗಿದ್ಲು.

ಜಾತಿ-ಧರ್ಮ ಬಿಟ್ಟು ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದವಳ ದುರಂತ ಅಂತ್ಯ! ಪತಿಯೇ ಕೊಂದು ಕೆರೆಗೆ ಎಸೆದ್ನಾ?
ಜಾತಿ-ಧರ್ಮ ಬಿಟ್ಟು ಕುಟುಂಬಸ್ಥರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದವಳ ದುರಂತ ಅಂತ್ಯ! ಪತಿಯೇ ಕೊಂದು ಕೆರೆಗೆ ಎಸೆದ್ನಾ?
TV9 Web
| Updated By: ಆಯೇಷಾ ಬಾನು|

Updated on: Feb 02, 2022 | 1:01 PM

Share

ಹಾವೇರಿ: ಪ್ರೀತಿ ಜಾತಿಯನ್ನು ಮೀರಿದ್ದು. ಪ್ರೀತಿ ಹುಟ್ಟುವಾಗ ಜಾತಿ, ಧರ್ಮ ನೋಡಿ ಹುಟ್ಟಲ್ಲ. ಆದ್ರೆ ಸಮಾಜದಲ್ಲಿ ಮದುವೆ ಆಗಲು, ಪ್ರೀತಿ ಮಾಡಲು ಜಾತಿ ಅತಿ ಮುಖ್ಯ. ಇಲ್ಲೊಂದು ಜೋಡಿಗೆ ಜಾತಿ ಬೇರೆ ಬೇರೆಯಾದ್ರೂ ಅವರ ಪ್ರೀತಿಗೆ ಜಾತಿ ಅಡ್ಡಿಯಾಗಿರಲಿಲ್ಲ. ಮನೆಯವರ ವಿರೋಧದ ನಡುವೆಯೂ ಆಕೆ ಆತನನ್ನ ಮದುವೆಯಾಗಿದ್ಲು. ಹೀಗೆ ಹತ್ತಾರು ಕನಸು ಕಂಡು ಲವ್‌ ಮ್ಯಾರೇಜ್‌(Love Marriage) ಆಗಿದ್ದ ಯುವತಿ ನಿನ್ನೆ ಶವವಾಗಿದ್ದಾಳೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆ ಪೊಲೀಸ್‌ ಠಾಣೆ ಮುಂದೆ ನಿನ್ನೆ ಬಿಗ್‌ ಹೈಡ್ರಾಮಾವೇ ನಡೆದಿತ್ತು. ರೊಚ್ಚಿಗೆದ್ದ ಜನ ಠಾಣೆಗೆ ನುಗ್ಗಿದ್ರು. ಆಕ್ರೋಶಗೊಂಡಿದ್ರು. ಅಷ್ಟಕ್ಕೂ ಇವರ ಆಕ್ರೋಶಕ್ಕೆ ಕಾರಣವೇ ಯುವತಿಯ ಸಾವು.

ಬ್ಯಾಡಗಿ ತಾಲೂಕಿನ ಕಳಗೊಂಡ ಗ್ರಾಮದ ತನುಜಾ ಅನ್ನೋ ಯುವತಿ ಅದೇ ಗ್ರಾಮದ ಬಸವರಾಜ ಬಸಾಪುರ ಅನ್ನೋ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ಲು. ಹೀಗೆ ಮದುವೆಯಾದವಳು ನಿನ್ನೆ ಕಾಗಿನೆಲೆ ಕೆರೆಯಲ್ಲಿ ಶವವಾಗಿದ್ಲು. ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ತನುಜಾಳನ್ನ ಗಂಡನ ಮನೆಯವರೆ ಕೊಂದು ಕೆರೆಗೆ ಎಸೆದಿದ್ದಾರೆ ಅಂತಾ ತನುಜಾ ಪೋಷಕರು ಆರೋಪಿಸುತ್ತಿದ್ದಾರೆ .

ಇನ್ನು ಜನವರಿ 28 ರಂದೇ ತನುಜಾ ಕಾಣೆಯಾಗಿದ್ಲು. ಈ ಸಂಬಂಧ ಕಾಗಿನೆಲೆ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ಕೂಡಾ ದಾಖಲಾಗಿತ್ತು. ಈ ವಿಷ್ಯ ತನುಜಾ ಪೋಷಕರಿಗೆ ಗೊತ್ತಾಗಿತ್ತು. ಹೀಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ರು. ಹೀಗಿರುವಾಗ್ಲೇ ನಿನ್ನೆ ಕಾಗಿನೆಲೆ ಕೆರೆಯಲ್ಲಿ ಮಹಿಳೆಯ ಶವ ತೇಲಾಡ್ತಿರೋದು ಕಂಡಿದೆ. ಹತ್ತಿರಕ್ಕೆ ಹೋಗಿ ನೋಡಿದ್ರೆ ಅದು ತನುಜಾಳದ್ದೇ ಅನ್ನೋದು ಗೊತ್ತಾಗಿದೆ. ಜನವರಿ 28 ರಂದೇ ತನುಜಾಳನ್ನ ಕಾಗಿನೆಲೆ ಪಾರ್ಕ್‌ಗೆ ಕರೆದುಕೊಂಡು ಹೋಗಿದ್ದ ಪತಿ ಬಸವರಾಜ್‌ ಅಲ್ಲಿ ಮಾನಸಿಕ ಹಿಂಸೆ ನೀಡಿದ್ದಾನೆ. ಬಳಿಕ ಕೊಂದು ಶವವನ್ನ ಕೆರೆಗೆ ಎಸೆದಿದ್ದಾನೆ ಅನ್ನೋದು ಆಕೆಯ ಪೋಷಕರ ಆರೋಪ. ಅಷ್ಟಕ್ಕೂ ಸತ್ತವಳ ಕಾಲಲ್ಲಿ ಇದ್ದ ಚಪ್ಪಲಿಗಳು ಕೂಡಾ ಹಾಗೇ ಇದ್ವು. ಆಕೆ ಒಂದಿಷ್ಟು ಒದ್ದಾಡದೇ ಪ್ರಾಣ ಬಿಟ್ಟಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಇಷ್ಟೆಲ್ಲಾ ಆಗಿದ್ರೂ ಶವದ ಬಳಿ ಆಕೆಯ ಪತಿಯಾಗ್ಲಿ, ಪತಿ ಮನೆಯವರಾಗ್ಲಿ ಬಂದಿರಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಮೃತಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ರು.

ಸದ್ಯ ಕಾಗಿನೆಲೆ ಪೊಲೀಸರು ಮೃತ ಮನುಜಾಳ ಪತಿ ಬಸವರಾಜ ಹಾಗೂ ಆತನ ಮನೆಯವರು ಸೇರಿದಂತೆ ಒಟ್ಟು ಐವರ ವಿರುದ್ದ ಕೇಸ್‌ ದಾಖಲಿಸಿಕೊಂಡಿದ್ದಾರೆ. ಬಸವರಾಜ ಸೇರಿದಂತೆ ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.

ವರದಿ: ಪ್ರಭುಗೌಡ.ಎನ್.ಪಾಟೀಲ, ಟಿವಿ9 ಹಾವೇರಿ.

ಇದನ್ನೂ ಓದಿ: ‘ಶಾರ್ಟ್​’ & ಸ್ವೀಟ್​ ಲವ್​ ಮ್ಯಾರೇಜ್​! ಉದ್ಯಾನ ನಗರಿಯಲ್ಲಿ ಸಪ್ತಪದಿ ತುಳಿದ ಅಪರೂಪದ ಜೋಡಿ..

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ