Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಯುವತಿ ಮನೆಯವರಿಂದ ಮಾನಸಿಕ ಕಿರುಕುಳ ಆರೋಪ; ವಿಷ ಸೇವಿಸಿ ಯುವಕ ಆತ್ಮಹತ್ಯೆ

ಮದುವೆಯಾಗುವಂತೆ ಯುವತಿ, ಆಕೆ ಪೋಷಕರು ಕಿರುಕುಳ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡ ಪ್ರಸನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾವೇರಿ: ಯುವತಿ ಮನೆಯವರಿಂದ ಮಾನಸಿಕ ಕಿರುಕುಳ ಆರೋಪ; ವಿಷ ಸೇವಿಸಿ ಯುವಕ ಆತ್ಮಹತ್ಯೆ
ಪ್ರಸನ್ನ ಲಮಾಣಿ(20)
Follow us
TV9 Web
| Updated By: preethi shettigar

Updated on:Jan 14, 2022 | 10:41 AM

ಹಾವೇರಿ: ಮದುವೆಯಾಗುವಂತೆ ಯುವತಿ ಮನೆಯವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬನ್ನಿಹಟ್ಟಿ ತಾಂಡಾದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಟರಮನ್ ಆಗಿ ಕೆಲಸ‌ ಮಾಡುತ್ತಿದ್ದ ಪ್ರಸನ್ನ ಲಮಾಣಿ(20)ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಮದುವೆಯಾಗುವಂತೆ ಯುವತಿ, ಆಕೆ ಪೋಷಕರು ಕಿರುಕುಳ ನೀಡುತ್ತಿದ್ದರು. ಅಷ್ಟೇ ಅಲ್ಲದೇ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿ ವಾಟ್ಸಾಪ್‌ನಲ್ಲಿ ಸ್ಟೇಟಸ್ ಹಾಕಿಕೊಂಡ ಪ್ರಸನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಗನ ಸಾವಿನಿಂದ ನೊಂದ ಪೋಷಕರು ಸದ್ಯ ಯುವತಿ ಸೇರಿದಂತೆ ಮೂವರ ವಿರುದ್ಧ ಹಿರೇಕೆರೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಕಳೆದ ಒಂದು ವರ್ಷದ ಹಿಂದೆ ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಪ್ರಸನ್ನ ಬಿಡುಗಡೆಯಾಗಿದ್ದ. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಯುವತಿಯನ್ನು ಮದುವೆ ಆಗು ಎಂದು ಯುವತಿ ಹಾಗೂ ಆಕೆಯ ಮನೆಯವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಯುವತಿ ಮದುವೆಯಾಗು, ಆಕೆಯನ್ನು ಕರೆದುಕೊಂಡು ಹೋಗದಿದ್ದರೆ ಜೀವಸಹಿತ ಬಿಡುವುದಿಲ್ಲ ಎಂದು ಯುವತಿ ಮನೆಯವರು ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದು, ತನ್ನ ಸಾವಿಗೆ ಯುವತಿಯೇ ಕಾರಣ ಎಂದು ವಾಟ್ಸಾಪ್​ ಸ್ಟೇಟಸ್​ನಲ್ಲಿ ಯುವತಿಯ ಹೆಸರು ಮತ್ತು ಆಕೆಯೊಂದಿಗೆ ಇದ್ದ ಫೋಟೋಗಳನ್ನು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: Crime News: ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ, ಕಳ್ಳತನ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಮಹಿಳೆಯರು

ಆನ್‌ಲೈನ್ ವ್ಯಸನದಿಂದ ಬಾಲಕ ಆತ್ಮಹತ್ಯೆ; ಆನ್‌ಲೈನ್ ಗೇಮ್‌ ನಿಯಂತ್ರಿಸಲು ಕಾನೂನು ರೂಪಿಸಿದ ಮಧ್ಯಪ್ರದೇಶ ಸರ್ಕಾರ

Published On - 10:32 am, Fri, 14 January 22

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ