AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬನ್ನೇರುಘಟ್ಟ ಪಾರ್ಕ್​ನಲ್ಲಿ ಪ್ರವಾಸಿಗರ ಪರದಾಟ

ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಬಿರುಗಾಳಿ ಸಹಿತ ಭಾರಿ (Bengaluru Rains) ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ, ಜಿಗಣಿ, ಚಂದಾಪುರ, ಅತ್ತಿಬೆಲೆ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿತ್ತು.

Bengaluru Rains: ಬೆಂಗಳೂರಿನ ಹಲವೆಡೆ ಬಿರುಗಾಳಿ ಸಹಿತ ಮಳೆ; ಬನ್ನೇರುಘಟ್ಟ ಪಾರ್ಕ್​ನಲ್ಲಿ ಪ್ರವಾಸಿಗರ ಪರದಾಟ
ಭಾರೀ ಮಳೆಯಯಿಂದ ಬೆಂಗಳೂರಿನ ಲಾಲ್​ಬಾಗ್ ರಸ್ತೆಯಲ್ಲಿ ಹರಿಯುತ್ತಿರುವ ನೀರು
Follow us
TV9 Web
| Updated By: Ganapathi Sharma

Updated on: Jul 03, 2023 | 8:36 PM

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಬಿರುಗಾಳಿ ಸಹಿತ ಭಾರಿ (Bengaluru Rains) ಮಳೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ, ಜಿಗಣಿ, ಚಂದಾಪುರ, ಅತ್ತಿಬೆಲೆ ಸೇರಿ ಹಲವೆಡೆ ವರುಣಾರ್ಭಟ ಜೋರಾಗಿತ್ತು. ಭಾರಿ ಮಳೆಗೆ ಬನ್ನೇರುಘಟ್ಟ ಪಾರ್ಕ್ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಬನ್ನೇರುಘಟ್ಟ ಪಾರ್ಕ್ ನೋಡಲು ಬಂದಿದ್ದ ಪ್ರವಾಸಿಗರು ಪರದಾಡುವಂತಾಯಿತು. ಪಾರ್ಕ್​​​ನ ಗೇಟ್, ಅಂಗಡಿ ಮುಂಗಟ್ಟುಗಳ ಬಳಿ ಜನ ಆಶ್ರಯ ಪಡೆದರು.

ಕಾರ್ಪೊರೇಷನ್ ವೃತ್ತ, ನಂಜಪ್ಪ ಸರ್ಕಲ್, ಗಿರಿನಗರ, ಆವಲಹಳ್ಳಿ, ಲಾಲ್​ಬಾಗ್ ರಸ್ತೆ ಸೇರಿದಂತೆ ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿಯೂ ಮಧ್ಯಾಹ್ನದಿಂದಲೇ ಭಾರೀ ಮಳೆಯಾಗಿದೆ.

ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಮಧ್ಯೆ, ರಾಜ್ಯದ ಕರಾವಳಿ ನಗರ ಮಂಗಳೂರಿನಲ್ಲಿ ಸೋಮವಾರ ಸಂಜೆ ಸತತ 2 ಗಂಟೆ ಧಾರಾಕಾರ ಮಳೆಯಾಗಿದೆ. ಮಂಗಳೂರಿನ ಪಂಪ್​ವೆಲ್​​ ವೃತ್ತ ಹಾಗೂ ಪಂಪ್​ವೆಲ್ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತಗೊಂಡಿದೆ.

ಇದನ್ನೂ ಓದಿ: IMD Latest Forecast: ಕರಾವಳಿ ಕರ್ನಾಟಕದಲ್ಲಿ ಈ ವಾರ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಬಣಕಲ್, ಚಾರ್ಮಾಡಿಘಾಟ್​​, ಕೊಟ್ಟಿಗೆಹಾರ, ಶೃಂಗೇರಿ, ಕಳಸ, ಎನ್​ಆರ್​​​ಪುರ ತಾಲೂಕಿನ ಹಲವೆಡೆ ವರ್ಷಧಾರೆಯಾಗಿದೆ. ಚಿಕ್ಕಮಗಳೂರು ನಗರ, ತರೀಕೆರೆ, ಕಡೂರಿನಲ್ಲಿ ತುಂತುರು ಮಳೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ