Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ: ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಅವರು ರಾಷ್ಟ್ರ ರಾಜಕಾರಣಕ್ಕೆ ಹಾರುವುದು ಪಕ್ಕಾ ಆಗಿದೆ. ಕೊನೆಗೂ ಅಳೆದು ತೂಗಿ ಅವರು ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ಇನ್ನು ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ದರೆ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡ್ತಾರೆ ಎನ್ನುವುದನ್ನು ಕಾಂಗ್ರೆಸ್ ಶಾಸಕ ಎಚ್​ಸಿ ಬಾಲಕೃಷ್ಣ ವಿಡಂಬನಾತ್ಮಕವಾಗಿ ಹೇಳಿದ್ದಾರೆ. ಅಲ್ಲದೇ ಬಿಜೆಪಿ ನಾಯಕ ಯೋಗೇಶ್ವರ್​ಗೆ ಕಾಂಗ್ರೆಸ್​ಗೆ ಬರುವಂತೆ ಆಹ್ವಾನ ಕೊಟ್ಟಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ: ಯೋಗೇಶ್ವರ್​ಗೆ ಕಾಂಗ್ರೆಸ್ ಗಾಳ
ಬಾಲಕೃಷ್ಣ, ಸಿಪಿ ಯೋಗೇಶ್ವರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 26, 2024 | 4:50 PM

ರಾಮನಗರ, (ಮಾರ್ಚ್ 26): ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ (HD Kumaraswamy) ಕೊನೆಗೆ ಮಂಡ್ಯ ಲೋಕಸಭಾ (Mandya Loksabha) ಕ್ಷೇತ್ರದಿಂದ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದು, ಇನ್ನು ಕೆಲ ಹೊತ್ತಿನಲ್ಲೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಶಾಸಕ ಎಚ್​ಸಿ ಬಾಲಕೃಷ್ಣ ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದು, ಕುಮಾರಸ್ವಾಮಿ ಮಂಡ್ಯದಲ್ಲಿ ಗೆದ್ರೆ ಚನ್ನಪಟ್ಟಣದಲ್ಲಿ ನಿಖಿಲ್ ಪ್ರತಿಷ್ಠಾಪನೆ ಮಾಡಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ ಪರೋಕ್ಷವಾಗಿ ಬಿಜೆಪಿ ಕಾರ್ಯಕರ್ತರು ಮತ್ತು ಸಿ.ಪಿ.ಯೋಗೇಶ್ವರ್​ಗೆ (HC Balakrishna)​  ಕಾಂಗ್ರೆಸ್​​ಗೆ ಆಹ್ವಾನ ನೀಡಿದ್ದಾರೆ.

ಇಂದು (ಮಾರ್ಚ್ 26) ರಾಮನಗರದ ಮಾಗಡಿಯಲ್ಲಿ ಮಾತನಾಡಿದ ಎಚ್​ಸಿ ಬಾಲಕೃಷ್ಣ, ಚನ್ನಪಟ್ಟಣದಲ್ಲಿ ನಿಖಿಲ್ ನಿಲ್ಲಿಸಬೇಕು ಅಂತ ಕುಮಾರಸ್ವಾಮಿ ಹೋಂ ಮಿನಿಸ್ಟರ್ ಆದೇಶ ಆಗಿದೆ. ಅವರ ಮನೆಯಲ್ಲಿ ಏನು ನಡೆಯುತ್ತೆ ಅನ್ನೋದು ಗೊತ್ತಾಗುತ್ತೆ. ಇವರನ್ನ ಒದ್ದು ಓಡಿಸೋಣ ಎಂದು ಅವರು, ಅವರನ್ನ ಒದ್ದು ಓಡಿಸೋಣ ಅಂತ ಇವರು ನಿಂತಿದ್ದಾರೆ. ಕೊನೆಗೆ ಕಾರ್ಯಕರ್ತರ ಕಥೆ ಏನಾಗುತ್ತೋ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್, ಅಧಿಕೃತ ಘೋಷಣೆಯೊಂದೇ ಬಾಕಿ

ಸಿಪಿ ಯೋಗೇಶ್ವರ್​ಗೆ ಕಾಂಗ್ರೆಸ್​ಗೆ ಆಹ್ವಾನ

ಇವರೇನೋ ಎಲ್ಲೋ ಹೋಗಿ ಅಡ್ಜಸ್ಟ್ ಆಗುತ್ತಾರೆ. ಆದ್ರೆ, ಕಾರ್ಯಕರ್ತರ ಕಥೆ ಏನು.? ಕಾರ್ಯಕರ್ತರು ನಿಜವಾಗಿಯೂ ಬಲಿಪಶು ಆಗುತ್ತಾರೆ. ಈಗಲೇ ಚನ್ನಪಟ್ಟಣ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು. ಉಪಚುನಾವಣೆ ಆದ್ರೆ ಯೋಗೇಶ್ವರ್ ಗೆ ಟಿಕೆಟ್ ಸಿಗಲ್ಲ. ಈಗಲೇ ಅವರ ಕಾರ್ಯಕರ್ತರು ಕಾಂಗ್ರೆಸ್​ ಗೆ ಬನ್ನಿ, ನಿಮ್ಮ ನಾಯಕರು ಬಂದ್ರು ಒಳ್ಳೆಯದೇ, ಈಗಲೇ ಬಂದ್ರೆ ನಿಮ್ಮಲ್ಲೇ ಯಾರಾದ್ರೂ ಎಂಎಲ್ಎ ಆಗಬಹುದು ಎಂದು ಪರೋಕ್ಷವಾಗಿ ಸಿ.ಪಿ.ಯೋಗೇಶ್ವರ್​ ಅವರನ್ನು ಕಾಂಗ್ರೆಸ್​​ಗೆ ಆಹ್ವಾನ ನೀಡಿದರು.

ಡಿ‌ಕೆ ಬ್ರದರ್ಸ್ ರಕ್ತ ಚರಿತ್ರೆ ಉಳ್ಳವರು ಎಂಬ ಸಿಪಿ ಯೋಗೇಶ್ವರ ಹೇಳಿಕೆ‌ಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ಸಿಪಿ ಯೋಗೇಶ್ವರ್ ಗೆ ಅದರ ಅನುಭವ ಆಗಿದ್ಯಾ. ಕನಕಪುರ ಎಲ್ಲಾ ಓಡಾಡಿಕೊಂಡು ಬಂದಿದ್ದಾರೆ. ಎಲ್ಲಾದರು ಅನುಭವ ಆಗಿದ್ಯಾ.? ಅಪ ಪ್ರಚಾರ ಮಾಡಲು ಇತಿಮಿತಿ ಇರಬೇಕು. ಅವರಿಗೆ ತಲೆ ಕೆಟ್ಟುಹೋಗಿದೆ ಎಂದು ತಿರುಗೇಟು ನೀಡಿದರು.

ಅರೆ ಮಿಲಿಟರಿ ಪಡೆ ಬಂದು ಚುನಾವಣೆ ಮಾಡಬೇಕು ಎನ್ನುತ್ತಾರೆ. ಅಭಿವೃದ್ಧಿ ವಿಚಾರ ಮಾತಾಡಿ ಮತ ಗಿಟ್ಟಿಸಿಕೊಳ್ಳುತ್ತಿಲ್ಲ. ಅಪಪ್ರಚಾರ ಮಾಡಿ‌ ಮತ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜನ ಬುದ್ದಿವಂತರಿದ್ದಾರೆ. ಯಾರು ಅಭಿವೃದ್ಧಿ ಮಾಡ್ತಾರೆ ಎಂಬುದು ಗೊತ್ತು. ಜನ ಇದಕ್ಕೆ ಉತ್ತರ ಕೊಡುತ್ತಾರೆ. ನಾನು ಮುನಿರತ್ನ, ಸಿಪಿ ಯೋಗೇಶ್ವರ್ ಇಬ್ಬರಿಗೂ ಹೇಳುತ್ತೇನೆ ಅಭಿವೃದ್ಧಿ ಬಗ್ಗೆ ಚರ್ಚೆ ಆಗಲಿ. ಅವರು ಅಭ್ಯರ್ಥಿಯನ್ನು ಕರೆದುಕೊಂಡು ಬರುತ್ತಾರಾ ಕೇಳಿ ಎಂದು ಸವಾಲು ಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್