ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್

Bengaluru Bandh: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್
ಹೈಕೋರ್ಟ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 25, 2023 | 5:58 PM

ಬೆಂಗಳೂರು, ಸಪ್ಟೆಂಬರ್​​ 25: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಪರ ಎಜಿ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ (Ravikumar Kanchanahalli) ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಅರ್ಜಿದಾರರ ಪರ ವಕೀಲ‌ ಜಿ.ಆರ್.ಮೋಹನ್​ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

ತಮಿಳುನಾಡಿಗೆ ಕಾವೇರಿ ನೀರು ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ ಕರೆ ನೀಡಿದರೆ, ಹೋರಾಟಗಾರ ವಾಟಾಳ್​​ ನಾಗರಾಜ ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರೆಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಬಂದ್​ಗೆ ಬೆಂಬಲ ಸೂಚಿಸಿದ ರಾಜ್ಯ ಹೋಟೆಲ್ ಮಾಲೀಕರ ಸಂಘ

ರಾಜ್ಯ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿಕೆ ನೀಡಿದ್ದು, ನಾಳೆ ಸಂಪೂರ್ಣವಾಗಿ ಹೋಟೆಲ್ ಬಂದ ಆಗಲಿವೆ. ನಾವು ನಾಳಿನ ಬಂದ್​ಗೆ ಬೆಂವಲ ಕೊಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Mon, 25 September 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ