AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್

Bengaluru Bandh: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್
ಹೈಕೋರ್ಟ್​
Ramesha M
| Edited By: |

Updated on:Sep 25, 2023 | 5:58 PM

Share

ಬೆಂಗಳೂರು, ಸಪ್ಟೆಂಬರ್​​ 25: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಪರ ಎಜಿ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ (Ravikumar Kanchanahalli) ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಅರ್ಜಿದಾರರ ಪರ ವಕೀಲ‌ ಜಿ.ಆರ್.ಮೋಹನ್​ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

ತಮಿಳುನಾಡಿಗೆ ಕಾವೇರಿ ನೀರು ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ ಕರೆ ನೀಡಿದರೆ, ಹೋರಾಟಗಾರ ವಾಟಾಳ್​​ ನಾಗರಾಜ ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರೆಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಬಂದ್​ಗೆ ಬೆಂಬಲ ಸೂಚಿಸಿದ ರಾಜ್ಯ ಹೋಟೆಲ್ ಮಾಲೀಕರ ಸಂಘ

ರಾಜ್ಯ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿಕೆ ನೀಡಿದ್ದು, ನಾಳೆ ಸಂಪೂರ್ಣವಾಗಿ ಹೋಟೆಲ್ ಬಂದ ಆಗಲಿವೆ. ನಾವು ನಾಳಿನ ಬಂದ್​ಗೆ ಬೆಂವಲ ಕೊಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Mon, 25 September 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ