AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್

Bengaluru Bandh: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.

ನಾಳೆ ಬೆಂಗಳೂರು ಬಂದ್: ರ‍್ಯಾಲಿ, ಮೆರವಣಿಗೆಗಿಲ್ಲ ಅವಕಾಶ: ಹೈಕೋರ್ಟ್
ಹೈಕೋರ್ಟ್​
ರಮೇಶ್​ ಎಮ್​.
| Edited By: |

Updated on:Sep 25, 2023 | 5:58 PM

Share

ಬೆಂಗಳೂರು, ಸಪ್ಟೆಂಬರ್​​ 25: ನಾಳೆ ಬೆಂಗಳೂರು ಬಂದ್​​ಗೆ ಸಂಘಟನೆಗಳು ಕರೆ ನೀಡಲಾಗಿದ್ದು, ಪ್ರತಿಭಟನಾ ಮೆರವಣಿಗೆ, ರ‍್ಯಾಲಿ ನಡೆಸಲು ಹೈಕೋರ್ಟ್ ಅನುಮತಿ‌ ಕೊಟ್ಟಿಲ್ಲ. ಬಂದ್​ಗೆ ಕೈಗೊಂಡ ಕ್ರಮದ ಬಗ್ಗೆ ಸರ್ಕಾರದ ಮಾಹಿತಿ ಕೇಳಿದ ಹೈಕೋರ್ಟ್,​​ ಫ್ರೀಡಂಪಾರ್ಕ್​ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗೆ ಅವಕಾಶವಿದೆ. ಸಂಚಾರಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಪರ ಎಜಿ ಶಶಿಕಿರಣ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಆ ಮೂಲಕ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ (Ravikumar Kanchanahalli) ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಸಂಘಟನೆಗಳು ರಸ್ತೆ ಮೂಲಕ ಮೆರವಣಿಗೆ ನಡೆಸಲಿವೆ. ಜನಸಾಮಾನ್ಯರ ಪ್ರಯಾಣಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಅರ್ಜಿದಾರರ ಪರ ವಕೀಲ‌ ಜಿ.ಆರ್.ಮೋಹನ್​ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಹಾಗೂ ಸರ್ಕಾರಿ ಸ್ವತ್ತು ರಕ್ಷಣೆ ಸರ್ಕಾರದ ಕರ್ತವ್ಯವಾಗಿದ್ದು, ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ: ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

ತಮಿಳುನಾಡಿಗೆ ಕಾವೇರಿ ನೀರು ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ ಕರೆ ನೀಡಿದರೆ, ಹೋರಾಟಗಾರ ವಾಟಾಳ್​​ ನಾಗರಾಜ ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ ಕರೆ ನೀಡಿದ್ದಾರೆ.

ರಾಜ್ಯದಲ್ಲಿ ಒಂದೇ ವಾರದಲ್ಲಿ ಎರಡೆರೆಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಬಂದ್​ಗೆ ಬೆಂಬಲ ಸೂಚಿಸಿದ ರಾಜ್ಯ ಹೋಟೆಲ್ ಮಾಲೀಕರ ಸಂಘ

ರಾಜ್ಯ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಹೇಳಿಕೆ ನೀಡಿದ್ದು, ನಾಳೆ ಸಂಪೂರ್ಣವಾಗಿ ಹೋಟೆಲ್ ಬಂದ ಆಗಲಿವೆ. ನಾವು ನಾಳಿನ ಬಂದ್​ಗೆ ಬೆಂವಲ ಕೊಡುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:50 pm, Mon, 25 September 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!