AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ; ಹೆಚ್.ಡಿ.ಕುಮಾರಸ್ವಾಮಿ ಸಲಹೆ

ರಾಜ್ಯದಲ್ಲಿ ಯಾವುದೇ ಹಣಕಾಸು ಸಮಸ್ಯೆ ಎದುರಾಗಲ್ಲ. ಸರ್ಕಾರ ಹಣ ಹೊಂದಿಸಿ ನೆರವು ನೀಡಲು ಅವಕಾಶವಿದೆ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಹೊಂದಿಸಿದ್ದೆ. ನನಗೆ ಸಹಕಾರ ಇಲ್ಲದಿದ್ದರೂ ಹಣವನ್ನು ಹೊಂದಿಸಿದ್ದೆ. ರೈತರ ಸಾಲ ಮನ್ನಾ ಮಾಡಲು ಹಣವನ್ನು ಹೊಂದಿಸಿದ್ದೆ.

ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ; ಹೆಚ್.ಡಿ.ಕುಮಾರಸ್ವಾಮಿ ಸಲಹೆ
ಎಚ್​ ಡಿ ಕುಮಾರಸ್ವಾಮಿ
sandhya thejappa
|

Updated on:May 17, 2021 | 1:02 PM

Share

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಸಲಿ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ವಾರ ಅಲ್ಲದಿದ್ದರೆ ಒಂದು ತಿಂಗಳು ವಿಸ್ತರಣೆ ಮಾಡಲಿ. ಆದರೆ ರಾಜ್ಯ ಸರ್ಕಾರ ಬಡವರ್ಗಕ್ಕೆ ನೆರವು ನೀಡಬೇಕು. ಆಹಾರ ಪದಾರ್ಥಗಳನ್ನು ವಿತರಣೆ ಮಾಡಬೇಕು. ಈ ವರ್ಷ ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಿಬಿಡಿ. ಈ ವರ್ಷ ಪೂರ್ತಿ ನಿಗಮ ಮಂಡಳಿಗಳನ್ನು ರದ್ದು ಮಾಡಲಿ. ಇದರಿಂದ ಬರುವ ಹಣದಿಂದ ಬಡವರಿಗೆ ನೆರವು ನೀಡಲಿ ಎಂದು ರಾಜ್ಯ ಸರ್ಕಾರಕ್ಕೆ ಟಿವಿ 9 ಮೂಲಕ ಸಲಹೆ ನೀಡಿದರು.

ರಾಜ್ಯದಲ್ಲಿ ಯಾವುದೇ ಹಣಕಾಸು ಸಮಸ್ಯೆ ಎದುರಾಗಲ್ಲ. ಸರ್ಕಾರ ಹಣ ಹೊಂದಿಸಿ ನೆರವು ನೀಡಲು ಅವಕಾಶವಿದೆ. ನಾನು ಸಿಎಂ ಆಗಿದ್ದಾಗ 25 ಸಾವಿರ ಕೋಟಿ ಹೊಂದಿಸಿದ್ದೆ. ನನಗೆ ಸಹಕಾರ ಇಲ್ಲದಿದ್ದರೂ ಹಣವನ್ನು ಹೊಂದಿಸಿದ್ದೆ. ರೈತರ ಸಾಲ ಮನ್ನಾ ಮಾಡಲು ಹಣವನ್ನು ಹೊಂದಿಸಿದ್ದೆ. ಆದರೆ ಈಗ ಏಕೆ ಹಣ ಹೊಂದಿಸುವುದಕ್ಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ. ಜೊತೆಗೆ ಕಾಂಗ್ರೆಸ್​ನವರು ವ್ಯಾಕ್ಸಿನ್ ಬಗ್ಗೆ ಆರೋಪ ಮಾಡಿದ್ದರು. ಈಗ ಕಾಂಗ್ರೆಸ್​ನವರಿಂದಲೇ ವ್ಯಾಕ್ಸಿನ್ಗಾಗಿ ಪ್ರತಿಭಟನೆ ಮಾಡುತ್ತಾರೆ. ಕೊರೊನಾ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ಇನ್ನು ಲಾಕ್​ಡೌನ್​ ವಿಸ್ತರಣೆ ಬಗ್ಗೆ ಕುಮಾಸ್ವಾಮಿ ಟ್ವೀಟ್ ಕೂಡಾ ಮಾಡಿದ್ದಾರೆ. ಸರ್ಕಾರ ಲಾಕ್​ಡೌನ್​ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದೆ. ಲಾಕ್​ಡೌನ್​ ವಿಸ್ತರಿಸುವುದಾದರೆ ಅದು ಜನಹಿತದ ಲಾಕ್​ಡೌನ್​ ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್​ಡೌನ್​ನಲ್ಲಿರಲಿ. ಸರ್ವಪಕ್ಷಗಳ ಸಭೆಯಲ್ಲಿ ನಾವು ಸೂಚಿಸಿದ್ದೂ ‘ಜನಹಿತದ ಲಾಕ್​ಡೌನ್​’ ಕಲ್ಪನೆಯೇ ಆಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.

ನೆರೆಯ ರಾಜ್ಯಗಳಲ್ಲಿ ಲಾಕ್​ಡೌನ್​ ಹೇಗಿದೆ? ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್​ಡೌನ್​ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯ ಎಂದು ಟ್ವಿಟರ್​ನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಹರ್ಯಾಣದ ಹಿಸಾರ್​ನಲ್ಲಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ

ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು #Modiji_cancel12thboards ಹ್ಯಾಶ್​ಟ್ಯಾಗ್​; ಪ್ರಧಾನಿ ಮೋದಿಗೆ ಸಿಬಿಎಸ್​ಇ ಕ್ಲಾಸ್​ 12 ವಿದ್ಯಾರ್ಥಿಗಳ ಮೊರೆ

(HC Kumaraswamy said lockdown would continue for Corona control in Karnataka)

Published On - 1:02 pm, Mon, 17 May 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!