ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿ ನೀಡಿದ ದೇವೇಗೌಡ

ಬೆಂಗಳೂರು: ಇತ್ತೀಚೆಗೆ ಅರವತ್ತಾರನೇ ದಾಂಪತ್ಯ ವಸಂತಕ್ಕೆ ಕಾಲಿಟ್ಟ ಮಣ್ಣಿನ ಮಗ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯಸಭೆ ಮೂಲಕ ಸಂಸತ್ತನ್ನು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದಾರೆ. ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ಹೊಸ ರಾಜಕೀಯ ಶುರುವಾಗಿದೆ. ರಾಷ್ಟ್ರ ರಾಜಕೀಯದ ಅಖಾಡಕ್ಕೆ ಇಳಿಯಲು ಮತ್ತೊಮ್ಮೆ ದೇವೇಗೌಡರು ರೆಡಿಯಾಗಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್​ಡಿಡಿ ಕಣಕ್ಕಿಳಿಯಲಿದ್ದಾರೆ. ಜೂನ್ 25ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ಹಾಗಾಗಿ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ […]

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿ ನೀಡಿದ ದೇವೇಗೌಡ
ಸಾಧು ಶ್ರೀನಾಥ್​

Updated on: May 26, 2020 | 5:54 PM

ಬೆಂಗಳೂರು: ಇತ್ತೀಚೆಗೆ ಅರವತ್ತಾರನೇ ದಾಂಪತ್ಯ ವಸಂತಕ್ಕೆ ಕಾಲಿಟ್ಟ ಮಣ್ಣಿನ ಮಗ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರಾಜ್ಯಸಭೆ ಮೂಲಕ ಸಂಸತ್ತನ್ನು ಪ್ರವೇಶಿಸಲು ಹಸಿರು ನಿಶಾನೆ ನೀಡಿದ್ದಾರೆ. ಮೇಲ್ಮನೆ ಮೇಲಾಟಕ್ಕೆ ಮತ್ತೆ ತೆರೆಮರೆಯಲ್ಲಿ ಹಳೇ ದೋಸ್ತಿಗಳ ಹೊಸ ರಾಜಕೀಯ ಶುರುವಾಗಿದೆ.

ರಾಷ್ಟ್ರ ರಾಜಕೀಯದ ಅಖಾಡಕ್ಕೆ ಇಳಿಯಲು ಮತ್ತೊಮ್ಮೆ ದೇವೇಗೌಡರು ರೆಡಿಯಾಗಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್​ಡಿಡಿ ಕಣಕ್ಕಿಳಿಯಲಿದ್ದಾರೆ.

ಜೂನ್ 25ರಂದು ಕುಪೇಂದ್ರ ರೆಡ್ಡಿ ಸ್ಥಾನ ತೆರವಾಗಲಿದೆ. ಹಾಗಾಗಿ ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಗೌಡರ ಮನೆಯಲ್ಲಿ ನಡೆದ ಗೌಪ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯಸಭೆಗೆ ಆಯ್ಕೆ ಆಗಲು 48 ಶಾಸಕರ ಬೆಂಬಲ ಬೇಕು. ಆದರೆ ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಬಲ ಕೇವಲ 34 ಇದೆ. ಉಳಿದ 14 ಕಾಂಗ್ರೆಸ್ ಶಾಸಕರ ಬೆಂಬಲ ಪಡೆಯಲು ಜೆಡಿಎಸ್ ತೀರ್ಮಾನಿಸಿದೆ. ಈ ದಿಸೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಜತೆಗೂ ದೇವೇಗೌಡರು ಮಾತುಕತೆ ನಡೆಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಹೆಚ್.ಡಿ.ದೇವೇಗೌಡರು ಪರಾಭವಗೊಂಡಿದ್ದರು.

 

Published On - 3:09 pm, Tue, 26 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us