AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಹುಟ್ಟುಹಬ್ಬ; ಟ್ವೀಟ್​ ಮೂಲಕ ಶುಭ ಹಾರೈಸಿದ ಬಿ.ಎಸ್​ ಯಡಿಯೂರಪ್ಪ

Happy Birthday HD Devegowda: ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಹುಟ್ಟುಹಬ್ಬ; ಟ್ವೀಟ್​ ಮೂಲಕ ಶುಭ ಹಾರೈಸಿದ ಬಿ.ಎಸ್​ ಯಡಿಯೂರಪ್ಪ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
shruti hegde
| Edited By: |

Updated on:May 18, 2021 | 12:59 PM

Share

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.ಮೇ 18ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರು 89ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.

ಹಿರಿಯ ಮತ್ತು ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಹೆಚ್​.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ನಿಮಗಿರಲಿ ಎಂದು ಮುಂಖ್ಯಮಮತ್ರಿ ಬಿ.ಎಸ್​ ಯಡಿಯೂರಪ್ಪನವರು ಟ್ವೀಟ್​ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ದೇವೇಗೌಡರಿಗೆ ಶುಭ ಹಾರೈಸಿದ್ದು, ಮಾಜಿ ಪ್ರಧಾನಿ ಮತ್ತು ಜೆಡಿಎಸ್​ ಪಕ್ಷದ ಹಿರಿಯ ನಾಯಕ ಎಚ್​.ಡಿ.ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳು. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ದಿಗಲಿ ಎಂದು ಹಾರೈಸಿದ್ದಾರೆ.

ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸದೇ ತಮ್ಮ ಹತ್ತಿರದ ಕೊವಿಡ್ ಸೋಂಕಿತರ ಆರೈಕೆ ಮತ್ತು ನೆರವಿಗೆ ಸಹಾಯ ಮಾಡಬೇಕೆಂದು ಅಭಿಮಾನಿಗಳು ಮತ್ತು ಜೆಡಿಎಸ್​ ಕಾರ್ಯಕರ್ತರಲ್ಲಿ ಎರಡು ದಿನಗಳ ಹಿಂದೆಯೇ ಕೋರಿದ್ದರು. ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದರು.

ಇದನ್ನೂ ಓದಿ: ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

Published On - 11:16 am, Tue, 18 May 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!