AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಹುಟ್ಟುಹಬ್ಬ; ಟ್ವೀಟ್​ ಮೂಲಕ ಶುಭ ಹಾರೈಸಿದ ಬಿ.ಎಸ್​ ಯಡಿಯೂರಪ್ಪ

Happy Birthday HD Devegowda: ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.

HD Deve Gowda Birthday: ಇಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರ ಹುಟ್ಟುಹಬ್ಬ; ಟ್ವೀಟ್​ ಮೂಲಕ ಶುಭ ಹಾರೈಸಿದ ಬಿ.ಎಸ್​ ಯಡಿಯೂರಪ್ಪ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
shruti hegde
| Edited By: |

Updated on:May 18, 2021 | 12:59 PM

Share

ಬೆಂಗಳೂರು: ಮಾಜಿ ಪ್ರಧಾನಿ ಹೆಚ್​.ಡಿ.ದೇವೆಗೌಡ ಅವರಿಗೆ ಇಂದು (ಮೇ 18) ಹುಟ್ಟು ಹಬ್ಬದ ಸಂಭ್ರಮ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಟ್ವೀಟ್​ ಮೂಲಕ ಶುಭ ಹಾರೈಸಿದ್ದಾರೆ.ಮೇ 18ರಂದು ಹೊಳೆನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದ ದೇವೇಗೌಡ ಅವರು 89ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಅನೇಕ ರಾಜಕೀಯ ಮುಖಂಡರು, ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.

ಹಿರಿಯ ಮತ್ತು ಮಾಜಿ ಪ್ರಧಾನಿಗಳಾದ ಸನ್ಮಾನ್ಯ ಹೆಚ್​.ಡಿ.ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರ ಅನುಗ್ರಹ ಸದಾ ನಿಮಗಿರಲಿ ಎಂದು ಮುಂಖ್ಯಮಮತ್ರಿ ಬಿ.ಎಸ್​ ಯಡಿಯೂರಪ್ಪನವರು ಟ್ವೀಟ್​ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ದೇವೇಗೌಡರಿಗೆ ಶುಭ ಹಾರೈಸಿದ್ದು, ಮಾಜಿ ಪ್ರಧಾನಿ ಮತ್ತು ಜೆಡಿಎಸ್​ ಪಕ್ಷದ ಹಿರಿಯ ನಾಯಕ ಎಚ್​.ಡಿ.ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳು. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ದಿಗಲಿ ಎಂದು ಹಾರೈಸಿದ್ದಾರೆ.

ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸದೇ ತಮ್ಮ ಹತ್ತಿರದ ಕೊವಿಡ್ ಸೋಂಕಿತರ ಆರೈಕೆ ಮತ್ತು ನೆರವಿಗೆ ಸಹಾಯ ಮಾಡಬೇಕೆಂದು ಅಭಿಮಾನಿಗಳು ಮತ್ತು ಜೆಡಿಎಸ್​ ಕಾರ್ಯಕರ್ತರಲ್ಲಿ ಎರಡು ದಿನಗಳ ಹಿಂದೆಯೇ ಕೋರಿದ್ದರು. ಸದ್ಯ ಕೊವಿಡ್​ನಿಂದಾಗಿ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಡಗರ- ಸಂಭ್ರಮದ ಹುಟ್ಟುಹಬ್ಬದ ಆಚರಣೆ ಸಲ್ಲದು. ಸಂಭ್ರಮವನ್ನು ವಿವಿಧ ರೂಪಗಳಲ್ಲಿ ಆಚರಿಸುವ ಬದಲಿಗೆ ಅದೇ ಹಣವನ್ನು ಹತ್ತಿರದ ಕೊವಿಡ್ ಸೋಂಕಿತರ ಆರೈಕೆಗೆ ವಿನಿಯೋಗಿಸುವಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ ಮಾಡಿದ್ದರು.

ಇದನ್ನೂ ಓದಿ: ತಮ್ಮ ಹುಟ್ಟುಹಬ್ಬದಂದು ಕೊವಿಡ್ ಸೋಂಕಿತರಿಗೆ ನೆರವಾಗುವಂತೆ ಮನವಿ ಮಾಡಿದ ಮಾಜಿ ಪ್ರಧಾನಿ ದೇವೇಗೌಡ

Published On - 11:16 am, Tue, 18 May 21

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು