ಅಫ್ಘಾನಿಸ್ತಾನದ ಘಟನೆಗಳಿಗೆ ಮಾನವೀಯತೆಯಿಂದ ನಾವು ಪ್ರತಿಕ್ರಿಯಿಸಬೇಕಿದೆ: ಹೆಚ್​ಡಿ ದೇವೇಗೌಡ ಟ್ವೀಟ್

HD Devegowda: ಅಫ್ಘಾನಿಸ್ತಾನದ ಘಟನೆಗಳಿಗೆ ಮಾನವೀಯ ಕಳಕಳಿಯಿಂದ ನಾವು ಪ್ರತಿಕ್ರಿಯಿಸಬೇಕಿದೆ ಎಂದು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್​.ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದ ಘಟನೆಗಳಿಗೆ ಮಾನವೀಯತೆಯಿಂದ ನಾವು ಪ್ರತಿಕ್ರಿಯಿಸಬೇಕಿದೆ: ಹೆಚ್​ಡಿ ದೇವೇಗೌಡ ಟ್ವೀಟ್
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Follow us
| Updated By: ganapathi bhat

Updated on: Aug 17, 2021 | 4:45 PM

ಬೆಂಗಳೂರು: ಅಫ್ಘಾನಿಸ್ತಾನದಿಂದ ಬರುತ್ತಿರುವ ವರದಿಗಳು ಆ ದೇಶದಲ್ಲಿ ಭಯ ಮತ್ತು ಅಭದ್ರತೆ ಎಷ್ಟು ಆವರಿಸಿದೆ ಎಂಬುದನ್ನು ತೋರಿಸುತ್ತಿದೆ. ಇದು ಭಾರತಕ್ಕೆ ಹಾಗೂ ಇತರ ಪ್ರದೇಶಗಳಿಗೂ ಕಷ್ಟದ ಸಮಯ ಆಗಿದೆ. ಈ ಘಟನೆಗಳಿಗೆ ಮಾನವೀಯ ಕಳಕಳಿಯಿಂದ ನಾವು ಪ್ರತಿಕ್ರಿಯಿಸಬೇಕಿದೆ ಎಂದು ಮಾಜಿ ಪ್ರಧಾನ ಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್​.ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣ ವಶಪಡಿಸಿಕೊಂಡಿದೆ. ಇದರಿಂದ, ಅಫ್ಘಾನ್ ನಾಗರಿಕರು ಹಾಗೂ ಅಲ್ಲಿ ನೆಲೆಸಿರುವ ವಿದೇಶಿಗರು ಅಭದ್ರತೆ, ಆತಂಕದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ತಾಲಿಬಾನರ ದುರಾಡಳಿತದ ಭಯ ಜನರನ್ನು ಆವರಿಸಿಕೊಂಡಿದೆ. ಅಫ್ಘಾನ್ ಮಹಿಳೆಯರ ಬಗೆಗಂತೂ ಬಹಳಷ್ಟು ಪ್ರಶ್ನೆಗಳು ಎದುರಾಗಿದೆ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು, ಅಫ್ಘಾನ್​ನಿಂದ ಪಾರಾಗಲು ಜನರು ವಿಮಾನ ನಿಲ್ದಾಣದಲ್ಲಿ ತೋರಿದ ವರ್ತನೆಯೇ ಸಾಕ್ಷಿ ಎಂಬಂತಾಗಿದೆ. ಆ ಘಟನಾವಳಿಗಳ ದೃಶ್ಯಗಳು ಸಹ ಹರಿದಾಡುತ್ತಿದ್ದು ನೋಡುಗರಲ್ಲೇ ನಡುಕ ಹುಟ್ಟಿಸುವಂತಿದೆ.

ಭಾರತಕ್ಕೆ ಅಫ್ಘಾನ್ ದೂರದ ದೇಶ ಏನಲ್ಲ. ಅಷ್ಟೇ ಅಲ್ಲದೆ, ಭಾರತ ಮತ್ತು ಕರ್ನಾಟಕದಲ್ಲಿ ಸಹಿತ ಹಲವಾರು ಸಂಖ್ಯೆಯಲ್ಲಿ ಅಫ್ಘಾನ್ ಪ್ರಜೆಗಳಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕೂಡ ಸಾವಿರಾರು ಸಂಖ್ಯೆಯ ಭಾರತದ ಪ್ರಜೆಗಳಿದ್ದರು. ಅವರನ್ನು ಭಾರತಕ್ಕೆ ಕರೆತರುವ ಕೆಲಸಗಳು ಆಗುತ್ತಿವೆ. ಈ ಮಧ್ಯೆ, ಘಟನೆಯ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇ-ವೀಸಾ ಘೋಷಣೆ ಹಾಗೂ ಸಹಾಯವಾಣಿ ತೆರೆಯಲಾಗಿದೆ ತಾಲಿಬಾನ್ ಆಡಳಿತದ ದೇಶದಲ್ಲಿ ವಾಸಿಸಲು ಇಚ್ಛಿಸಿದ ಹಾಗೂ ಅಲ್ಲಿಂದ ಹೊರಹೋಗಲು ಹವಣಿಸುತ್ತಿರುವ ಜನರಿಗೆ ಭಾರತ ಸರ್ಕಾರ ಮಂಗಳವಾರ (ಆಗಸ್ಟ್ 17) ಇ- ವೀಸಾ ಘೋಷಿಸಿದೆ. ‘ಇ-ಎಮರ್ಜೆನ್ಸಿ ಎಕ್ಸ್-ಮಿಸ್ಕ್ ವೀಸಾ’ (e-Emergency X-Misc Visa) ಎಂಬ ಎಲೆಕ್ಟ್ರಾನಿಕ್ ವೀಸಾದ ಮೂಲಕ ವೇಗವಾಗಿ ವೀಸಾಗೆ ಅಪ್ಲೈ ಮಾಡಬಹುದಾಗಿದೆ. ಅಫ್ಘಾನಿಸ್ತಾನದ ನಾಗರಿಕರಿಗೆ ಕೂಡ ಭಾರತದ ಇ-ವೀಸಾ ನೀಡಿಕೆ ಇರಲಿದೆ. ಈ ತುರ್ತು ವೀಸಾ ಸೇವೆಯಲ್ಲಿ ಎಲ್ಲಾ ಧರ್ಮದವರಿಗೂ ಅವಕಾಶ ನೀಡಲಾಗಿದೆ. ಭದ್ರತೆಯ ವಿಚಾರ ಗಮನದಲ್ಲಿ ಇಟ್ಟುಕೊಂಡು ಅಫ್ಘನ್ನರಿಗೆ 6 ತಿಂಗಳ ಕಾಲ ಭಾರತದ ಇ-ವೀಸಾ ನೀಡಲಾಗುತ್ತದೆ.

ಭಾರತದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ 919717785379 ಸಹಾಯವಾಣಿ ತೆರೆಯಲಾಗಿದೆ. ಹಾಗೇ, MEAHelpdeskIndia@gmail.com ಇಮೇಲ್ ಹೆಲ್ಪ್​ಲೈನ್ ಮೂಲಕ ಭಾರತಕ್ಕೆ ವಾಪಾಸ್ ಬರಲು ಬಯಸುವ ಅಫ್ಘಾನ್​ನಲ್ಲಿರುವ ಭಾರತೀಯರು ಭಾರತವನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಅಫ್ಘಾನಿಸ್ತಾನ ನಿರಾಶ್ರಿತರಿಗೆ ತುರ್ತು ಇ-ವೀಸಾ ಸೇವೆ ಆರಂಭಿಸಿದ ಭಾರತ; ಅರ್ಜಿ ಸಲ್ಲಿಸುವುದು ಹೇಗೆ? ವಿವರ ಇಲ್ಲಿದೆ

ಕೆಲಸಕ್ಕೆ ಹಿಂದಿರುಗುವಂತೆ ಅಫ್ಘಾನ್​ ಸರ್ಕಾರಿ ನೌಕರರಿಗೆ ಕರೆಕೊಟ್ಟ ತಾಲಿಬಾನ್​ ಉಗ್ರರು; ಮಹಿಳೆಯರಿಗೂ ಆಹ್ವಾನ

(HD Deve Gowda on Afghanistan Crisis Taliban takeover Afghan Kabul)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!