AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಮೇಕೆದಾಟು ಯೋಜನೆಗೆ ಪ್ರಧಾನಿ ಮೋದಿಯವರಿಂದ ಅನುಮೋದನೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ. ನಿಖಿಲ್ ಅವರನ್ನು ರಾಜ್ಯ ನಾಯಕರನ್ನಾಗಿ ರೂಪಿಸುವುದಾಗಿ ಹೇಳಿದ್ದಾರೆ.

ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ
ಕೊನೆಯುಸಿರೆಳೆಯುವ ಮುನ್ನ ಮೇಕೆದಾಟುಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್​ಡಿಡಿ ವಾಗ್ದಾನ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on: Nov 07, 2024 | 9:08 PM

Share

ರಾಮನಗರ, ನವೆಂಬರ್​ 07: ನನ್ನ ಕೊನೆ ಉಸಿರು‌ ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ (HD Deve Gowda) ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಮತಯಾಚನೆ ವೇಳೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗುತ್ತೆ ಎಂದರೆ ಅದು‌‌ ಪ್ರಧಾನಿ ಮೋದಿ ಅವರಿಂದ ಮಾತ್ರ ಸಾಧ್ಯ ಎಂದಿದ್ದಾರೆ.

ತಮಿಳುನಾಡಿನವರು‌ ನಮ್ಮ ಕುತ್ತಿಗೆ ಹಿಡಿದಿದ್ದಾರೆ. ನಾನು‌ ಇಗ್ಗಲೂರು‌ ಆಣೆಕಟ್ಟು ಕಟ್ಟಿದ್ದು‌ ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು‌ ದೈವದ ಆಟ. ನಾನು ಅವರಿಗೆ ಮನವಿ ಮಾಡುತ್ತೇನೆ, ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ ಎಂದರು.

ಕಾಂಗ್ರೆಸ್ ವಿರುದ್ಧ ಹೆಚ್​ಡಿ ದೇವೇಗೌಡ ಟೀಕಾಸ್ತ್ರ

ಕಾಂಗ್ರೆಸ್ ನಾಯಕರು ನಾಟಕ ಮಾಡುತ್ತಿದ್ದಾರೆ. ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದ್ರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶ್ಯಾನುಭೋಗನಹಳ್ಳಿ: ಎತ್ತಿಗಾಡಿಯಲ್ಲಿ ತೆನೆಹೊತ್ತ ಮಹಿಳೆಯೊಂದಿಗೆ ಕುಮಾರಸ್ವಾಮಿ ಪ್ರಚಾರ

55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ‌ ನೀವು ಕೇಳಿ ಎಂದಿದ್ದಾರೆ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ, ನಿಮ್ಮನ್ನು ‌ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದು ಹೇಳಿದ್ದಾರೆ.

ನಿಖಿಲ್ ಬಗ್ಗೆ ಮಾತನಾಡಿದ ಹೆಚ್​ಡಿ ದೇವೇಗೌಡ, ನಿಖಿಲ್​ ನನ್ನ ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ತೋಟದಲ್ಲಿ ಕುಳಿತು ಹೇಳಿಕೊಟ್ಟು ರಾಜ್ಯ ನಾಯಕನನ್ನಾಗಿ ಮಾಡುವ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!