AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಪಕ್ಷವನ್ನೇ ಕೆಡಿಸುತ್ತೆ, ಸುಮ್ನಿರಿ ಎಂದ ದೊಡ್ಡಗೌಡರು; ತೋಟದ ಮನೆಯಲ್ಲಿ ಮೌನಕ್ಕೆ ಶರಣಾದ ಕುಮಾರಸ್ವಾಮಿ

ಮುಂದಿನ ಸ್ಥಳೀಯ ಚುನಾವಣೆ ಮೇಲೆ ಈ ಬೆಳವಣಿಗೆಗಳು ಪ್ರಭಾವ ಬೀರುವ ಸಾಧ್ಯತೆ ಇದೆ. ಅಲ್ಲದೇ, ಬೀಸು ಹೇಳಿಕೆಗಳಿಂದ ಪಕ್ಷಕ್ಕೆ ಹಾನಿ ಉಂಟಾಗುವ ಅಪಾಯವೂ ಇದೆ. ಹೀಗಾಗಿ ಸ್ವಲ್ಪ ದಿನ ಈ ವಿಚಾರವಾಗಿ ಹೇಳಿಕೆ ಬೇಡ ಎಂದು ಹೆಚ್.ಡಿ.ದೇವೇಗೌಡ ಸೂಚನೆ.

ಮಾತು ಪಕ್ಷವನ್ನೇ ಕೆಡಿಸುತ್ತೆ, ಸುಮ್ನಿರಿ ಎಂದ ದೊಡ್ಡಗೌಡರು; ತೋಟದ ಮನೆಯಲ್ಲಿ ಮೌನಕ್ಕೆ ಶರಣಾದ ಕುಮಾರಸ್ವಾಮಿ
ಹೆಚ್​.ಡಿ.ದೇವೇಗೌಡ, ಹೆಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Jul 10, 2021 | 12:08 PM

Share

ಮಂಡ್ಯ: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಸಮರ ತಾರಕಕ್ಕೇರುತ್ತಿರುವುದನ್ನು ಗಮನಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಈ ಬಗ್ಗೆ ಯಾರೂ ಅನಗತ್ಯ ಹೇಳಿಕೆ ನೀಡಬಾರದು ಎಂದು ಪಕ್ಷದ ಮುಖಂಡರಿಗೆ ಸೂಚನೆ ನೀಡುವ ಮೂಲಕ ಪಕ್ಷಕ್ಕಾಗಬಹುದಾದ ಹಾನಿ ತಡೆಗಟ್ಟಲು ಮುಂದಾಗಿದ್ದಾರೆ. ಈ ರೀತಿ ಹೇಳಿಕೆಯಿಂದ ಜನರಿಗೆ ಬೇರೆ ರೀತಿ ಸಂದೇಶ ರವಾನೆಯಾಗುತ್ತದೆ. ಇದರಿಂದ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಹಾನಿ ಆಗುತ್ತದೆ. ಇದೇ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವ ವಿರೋಧಿಗಳು ಪಕ್ಷಕ್ಕೆ ಹಿನ್ನಡೆ ಉಂಟುಮಾಡುವ ಕೆಲಸ ಮಾಡುತ್ತಾರೆ. ಹೀಗಾಗಿ ಯಾರೂ ಅನಗತ್ಯ ಹೇಳಿಕೆ ನೀಡಕೂಡದು ಎಂದು ದೇವೇಗೌಡ ಸೂಚಿಸಿದ್ದಾರೆ ಎನ್ನಲಾಗಿದೆ.

ಮುಂದಿನ ಸ್ಥಳೀಯ ಚುನಾವಣೆ ಮೇಲೆ ಈ ಬೆಳವಣಿಗೆಗಳು ಪ್ರಭಾವ ಬೀರುವ ಸಾಧ್ಯತೆ ಇದೆ. ಅಲ್ಲದೇ, ಬೀಸು ಹೇಳಿಕೆಗಳಿಂದ ಪಕ್ಷಕ್ಕೆ ಹಾನಿ ಉಂಟಾಗುವ ಅಪಾಯವೂ ಇದೆ. ಹೀಗಾಗಿ ಸ್ವಲ್ಪ ದಿನ ಈ ವಿಚಾರವಾಗಿ ಹೇಳಿಕೆ ಬೇಡ ಎಂದು ಸೂಚನೆ ನೀಡಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ಪ್ರತಿದಿನ ಇದೇ ರೀತಿ ಹೇಳಿಕೆ ನೀಡಿದರೆ ಜನರಿಗೆ ಬೇರೆ ರೀತಿಯ ಸಂದೇಶ ಹೊಗುತ್ತದೆ. ಮಾತಿನ ಸಮರದಿಂದ ಪಕ್ಷಕ್ಕೆ ಹೊಡೆತ ಬೀಳುತ್ತದೆ ಹೀಗಾಗಿ ಸುಮಲತಾ, ಕುಮಾರಸ್ವಾಮಿ ಜಟಾಪಟಿ ಬಗ್ಗೆ ಬೇರೆಯವರೂ ಯಾವ ಹೇಳಿಕೆ ಕೊಡಬೇಡಿ ಎಂದು ಸೂಚಿಸಿರುವುದು ತಿಳಿದುಬಂದಿದೆ.

ದೇವೇಗೌಡರ ಈ ಸಲಹೆಯನ್ನು ಪರಿಗಣಿಸಿರುವ ಹೆಚ್.ಡಿ.ಕುಮಾರಸ್ವಾಮಿ ತಟಸ್ಥವಾಗಿರಲು ನಿರ್ಧಾರ ತಳೆದಿದ್ದು, ಇದೀಗ ಮೌನಕ್ಕೆ ಶರಣಾಗಿದ್ದಾರೆ. ಸುಮಲತಾ ಹಾಗೂ ರಾಕ್​ಲೈನ್ ವೆಂಕಟೇಶ್ ವಾಗ್ದಾಳಿ ನಡೆಸಿದರೂ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕುತ್ತಿರುವ ಹೆಚ್​.ಡಿ.ಕುಮಾರಸ್ವಾಮಿ ವಿವಾದ ದೊಡ್ಡದಾಗುತ್ತಿರುವಂತೆಯೇ ಸುಮ್ಮನಾಗಿದ್ದಾರೆ. ಸದ್ಯ ರಾಮನಗರ ತಾಲ್ಲೂಕಿನ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಇರುವ ಅವರು, ಕಾರ್ಯಕರ್ತರು ಹಾಗೂ ಮುಖಂಡರನ್ನ ಭೇಟಿ ಆಗುತ್ತಿದ್ದು, ಮುಂದೆ ಸಮಯ, ಸಂದರ್ಭ ನೋಡಿ ಸಿಡಿದೇಳುತ್ತಾರಾ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಬೇರೆ ಮಹಿಳೆಯರ ಬಗ್ಗೆ ಬೇಕಾದರೆ ಚರ್ಚೆ ಮಾಡೋಣ, ಆದರೆ ಇಂತಹ ವಿಶೇಷವಾದ ಮಹಿಳೆಗೆ ನಮಸ್ಕಾರ: ಸಂಸದೆ ಸುಮಲತಾಗೆ ಕೈಮುಗಿದ ಮಾಜಿ ಸಿಎಂ ಕುಮಾರಸ್ವಾಮಿ 

ಕುಮಾರಣ್ಣನ ಕೆಣಕಿದರೆ ಸಹಿಸೋದಿಲ್ಲ, ಮಂಡ್ಯ ಬಗ್ಗೆ ಮಾತನಾಡಿದರೆ ಹುಷಾರ್: ರಾಕ್​ಲೈನ್​ಗೆ ಅನ್ನದಾನಿ ಎಚ್ಚರಿಕೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?