AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ. ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ. ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ […]

ರಾಮನಗರದ ಬಳಿಕ ಈಗ ಮಂಡ್ಯ ಟಾರ್ಗೆಟ್, ಸರ್ಕಾರದ ವಿರುದ್ಧ ಕಿಡಿಕಾರಿದ ಹೆಚ್​ಡಿಕೆ
ಸಾಧು ಶ್ರೀನಾಥ್​
|

Updated on:May 01, 2020 | 12:27 PM

Share

ದೇವನಹಳ್ಳಿ: ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ-ಮುಂಬೈ ಲಿಂಕ್​ನಿಂದ ಮತ್ತೆ ಐವರಿಗೆ ಸೋಂಕು ಹರಡಿದೆ.

ಮಂಡ್ಯದಲ್ಲಿ ಅನಾಹುತ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ರಾಮನಗರಕ್ಕೆ ಪಾದರಾಯನಪುರದ ಪುಂಡರನ್ನು ಕರೆದುಕೊಂಡು ಬಂದಿದ್ರು. ಆಗ ಒಂದಷ್ಟು ಆತಂಕ ಸೃಷ್ಟಿಮಾಡಿದ್ರು. ರಾಮನಗರ ಬಳಿಕ ಈಗ ಮಂಡ್ಯ ಟಾರ್ಗೆಟ್ ಆಗಿದೆ ಎಂದು ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರ ಕಿಡಿಕಾರಿದ್ದಾರೆ.

ಮುಂಬೈನಿಂದ ಬಂದು ಮಂಡ್ಯದಲ್ಲಿ ಶವ ಸಂಸ್ಕಾರ ಮಾಡುವಾಗ ಜೊತೆ ಇದ್ದ ಐದು ಜನರಿಗೆ ಕೊರೊನಾ ಬಂದಿದೆ. ಶವಸಂಸ್ಕಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದ್ದು ಯಾಕೆ? ಅಕ್ರಮ ದಾಖಲೆಗಳನ್ನು ಸೃಷ್ಟಿಸಿ ಶವ ತೆಗೆದುಕೊಂಡು ಬರಲಾಗಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುಂಬೈನಲ್ಲಿ ‌ಮಂಡ್ಯದವರು 15 ಸಾವಿರಕ್ಕೂ ‌ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಏಳು ಸಾವಿರಕ್ಕೂ ಅಧಿಕ ಮಂದಿ ಮಂಡ್ಯಕ್ಕೆ ವಾಪಸಾಗಿದ್ದಾರೆ. ಸರ್ಕಾರ, ಜಿಲ್ಲಾಡಳಿತ ಕೂಡಲೇ ಇವರನ್ನು ಕೂಡ ಪರೀಕ್ಷೆಗೆ ಒಳಪಡಿಸಬೇಕು. ಸರ್ಕಾರ ಕೊರೊನಾ ‌ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ಹೆಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ.

Published On - 12:24 pm, Fri, 1 May 20

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ