AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ: ಕಾಂಗ್ರೆಸ್

ಹೆಚ್​ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಯುದ್ದ ನಡೆಯುತ್ತಲೇ ಇದೆ. ಟೀಕೆಗೆ ಪ್ರತಿ ಟೀಕೆ ನಡೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ ಕರ್ನಾಟಕ ಕಾಂಗ್ರೆಸ್ ಘಟಕ, ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ಜರಿದಿದೆ.

ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ: ಕಾಂಗ್ರೆಸ್
ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್
TV9 Web
| Updated By: Rakesh Nayak Manchi|

Updated on: Nov 17, 2023 | 6:53 AM

Share

ಬೆಂಗಳೂರು, ನ.17: ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕಾಂಗ್ರೆಸ್ ನಡುವೆ ಮಾತಿನ ಯುದ್ದ ನಡೆಯುತ್ತಲೇ ಇದೆ. ಟೀಕೆಗೆ ಪ್ರತಿ ಟೀಕೆ ನಡೆಯುತ್ತಲೇ ಇದೆ. ಇದೀಗ ಕಾಂಗ್ರೆಸ್ ವಿರುದ್ಧ ಮುಗಿಬೀಳುತ್ತಿರುವ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ ಕರ್ನಾಟಕ ಕಾಂಗ್ರೆಸ್ ಘಟಕ (Karnataka Congress), ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದು ಜರಿದಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್, ಜೆಡಿಎಸ್ ಪಕ್ಷದ ಶಾಸಕರು ಹಣ ಕೊಟ್ಟು ಮತ ಪಡೆದಿದ್ದಾರೆ, ಹಣ ಪಡೆದು ಮತ ನೀಡುತ್ತಾರೆ, ಕುಮಾರಸ್ವಾಮಿಯವರು ಹಣ ವಸೂಲಿ ಮಾಡಿ ಟಿಕೆಟ್ ನೀಡುತ್ತಾರೆ. ಇದನ್ನು ಅವರೇ ಒಪ್ಪಿಕೊಂಡಿದ್ದು. ಫ್ಯಾಮಿಲಿ ಟ್ರಸ್ಟ್ ನಂತಿರುವ ಜೆಡಿಎಸ್ ಪಕ್ಷಕ್ಕಾಗಿ ಪಡೆದ ಹಣ ಕುಮಾರಸ್ವಾಮಿಯವರ ಜೇಬಿಗೆ ಹೋಗುತ್ತದೆಯಲ್ಲವೇ ಎಂದು ಹೇಳಿದೆ.

ಇದನ್ನೂ ಓದಿ: ತೆಲಂಗಾಣಕ್ಕೆ ಸೂಟ್​ಕೇಸ್​ಗಳಲ್ಲಿ ಹಣ ಒಯ್ಯತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್​ಗಳನ್ನು ಯಾಕೆ ಅಂಟಿಸಬಾದು? ಹೆಚ್ ಡಿ ಕುಮಾರಸ್ವಾಮಿ

ರಾಜಕೀಯವನ್ನು ಭ್ರಷ್ಟೋಧ್ಯಮವನ್ನಾಗಿ ಮಾಡಿಕೊಂಡ ಕೀರ್ತಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ. ಟಿಕೆಟ್ ಅಕ್ಷಾಂಕ್ಷಿಗಳಲ್ಲೇ ಸೂಟ್ ಕೇಸ್ ಪಡೆದ ತಾವು ಅಧಿಕಾರದಲ್ಲಿ ಕಂಟೈನರ್ ನಲ್ಲಿ ವಸೂಲಿ ಮಾಡಿಲ್ಲವೇ? ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಯತೀಂದ್ರ ಸಿದ್ದರಾಮಯ್ಯ ಮತ್ತು ಸಿದ್ದರಾಮಯ್ಯ ನಡುವೆ ನಡೆದ ಆರೋಪಿತ ವರ್ಗಾವಣೆ ಧಂದೆಯ ವಿಡಿಯೋ ವೈರಲ್ ಆಗಿರುವ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಲ್ಲಿ ಪೋಸ್ಟರ್ ಅಂಟಿಸುವ ಗೀಳು ಹುಟ್ಟಿಕೊಂಡಿದೆ, ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಮ್ ಪೋಸ್ಟರ್ ಅಂಟಿಸಿ ಪ್ರಚಾರ ನಡೆಸಿದ್ದರು ಎಂದು ಹೇಳಿದರು. ಅಲ್ಲದೆ, ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನ ಸಭಾ ಚುನಾವಣೆಗೆ ರಾಜ್ಯದ ಕಾಂಗ್ರೆಸ್ ನಾಯಕರು ಸೂಟ್ ಕೇಸ್ ಗಳಲ್ಲಿ ಹಣ ತುಂಬಿಕೊಂಡು ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧವೂ ಪೊಸ್ಟರ್ ಗಳನ್ನು ಅಂಟಿಸಬೇಕು ತಾನೇ ಎಂದು ಕೇಳಿದ್ದರು.

“ಕುಮಾರಸ್ವಾಮಿಯವರ ಸ್ಥಿತಿ “ತಾನು ಕಳ್ಳ ಪರರ ನಂಬ” ಎಂಬಂತಿದೆ. ತಾನು ಮಾಡಿದ್ದನ್ನೇ ಬೇರೆಯವರೂ ಮಾಡುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. “ರಾಜಕಾರಣದಲ್ಲಿ ಅಧಿಕಾರ, ಹಣ ಬಹುಮುಖ್ಯ, ನಾನು ಶುದ್ಧನಲ್ಲ, ಪ್ರಾಮಾಣಿಕನಲ್ಲ” ಎಂದು ತಪ್ಪೊಪ್ಪಿಕೊಂಡಿರುವ ಕುಮಾರಸ್ವಾಮಿ ಅವರ ಪ್ರಾಮಾಣಿಕತೆಗೆ ಕಾಂಗ್ರೆಸ್ ಅಭಿನಂದಿಸುತ್ತದೆ. ಆದರೆ ತನ್ನಂತೆ ಬೇರೆಯವರೂ ಭ್ರಷ್ಟರು ಎಂದು ಕಲ್ಪಿಸಿಕೊಳ್ಳುವುದನ್ನು ಬಿಟ್ಟು, ತಮ್ಮ ಭ್ರಷ್ಟಾಚಾರಕ್ಕೆ, ಲೂಟಿಗೆ ಪ್ರಾಯಶ್ಚಿತ್ತದ ಕೆಲಸಗಳನ್ನು ಮಾಡಲಿ” ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

“ಪೆನ್ ಡ್ರೈವ್ ನಾಟಕ ಠುಸ್ ಆಯ್ತು, ಸೋಫಾ ಸೆಟ್ ಸುಳ್ಳು ಬಯಲಾಯ್ತು, ಈಗ ವರ್ಗಾವಣೆ ವಿಡಿಯೋ ಎನ್ನುವ ಮತ್ತೊಂದು ಸುಳ್ಳಿನ ನಾಟಕ ಶುರು ಮಾಡಿದ್ದಾರೆ. ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದೆಂದರೆ ನೀರು ಕುಡಿದಷ್ಟೇ ಸಲೀಸು” ಎಂದು ಕಾಂಗ್ರೆಸ್ ಕುಟುಕಿದೆ.

“ರಾಜ್ಯದ ಜನತೆ ಈಗಾಗಲೇ ಪೆನ್ ಡ್ರೈವ್ ಸ್ವಾಮಿಯ ಮಾನವನ್ನು ಮೂರು ಕಾಸಿಗೆ ಕಳೆದಿದ್ದಾರೆ, ಆದರೂ ನೌಟಂಕಿ ನಾಟಕ ಮುಂದುವರೆಸಿರುವ ಅವರನ್ನು ಕರ್ನಾಟಕದ ರಾಜಕಾರಣದ ತಿಪ್ಪೆಗುಂಡಿ ಎಂದು ಪರಿಗಣಿಸುವ ಕಾಲ ದೂರವಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ