ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

| Updated By: ಆಯೇಷಾ ಬಾನು

Updated on: Jul 05, 2021 | 1:01 PM

ಮಂಡ್ಯದಲ್ಲಿ ಇಂತಹ ಸಂಸದರು ಬಂದಿಲ್ಲ, ಬರೋದಿಲ್ಲ. KRS ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿದ್ದಾರೆ. KRS ಸೋರುತ್ತಿದ್ದರೆ KRS ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು.

ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ
Follow us on

ಮಂಡ್ಯ: KRS ಸೋರುತ್ತಿದ್ದರೆ ನೀರು ಸೋರದಂತೆ ಸುಮಲತಾ ಅವರನ್ನ ಮಲಗಿಸಬೇಕು ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಸಂಸದೆ ಸುಮಲತಾ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮಂಡ್ಯದಲ್ಲಿ ಇಂತಹ ಸಂಸದರು ಬಂದಿಲ್ಲ, ಬರೋದಿಲ್ಲ. KRS ಇವರೇ ರಕ್ಷಿಸುತ್ತಿದ್ದಾರೆ ಅನ್ನೋ ರೀತಿ ಹೇಳಿದ್ದಾರೆ. KRS ಸೋರುತ್ತಿದ್ದರೆ KRS ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು. KRS ಡ್ಯಾಂ ಬಿರುಕುಬಿಟ್ಟಿದೆ ಎಂದು ಸುಮಲತಾ ಹೇಳಿದ್ದರು ಎಂದು ಸುಮಲತಾ ಹೇಳಿಕೆ ಖಂಡಿಸಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಯಾವುದೋ ಅನುಕಂಪದಲ್ಲಿ ಆಯ್ಕೆಯಾಗಿದ್ದಾರೆ. ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಲಿ. ಸಂಸದರಾಗಿ ಮಂಡ್ಯ ಕ್ಷೇತ್ರದ ಜನರ ಸೇವೆ ಮಾಡಲಿ ಎಂದರು.

ಮಂಡ್ಯ ಮೈ ಶುಗರ್ ಖಾಸಗೀಕರಣಕ್ಕೆ ಸಂಸದರ ಒತ್ತಡ ಇದೆಯಾ ಅಂತ ಅವರನ್ನೇ ಕೇಳಬೇಕು. ಅಂಥಹ ಸಂಸದೆ ಮಂಡ್ಯಕ್ಕೆ ಸಿಕ್ಕಿಲ್ಲ, ಸಿಗಲ್ಲ. ಮೊನ್ನೆ ಯಾವುದೋ ಸಭೆಯಲ್ಲಿ KRS ಇವರೇ ರಕ್ಷಣೆ ಮಾಡ್ತಿರುವ ಹಾಗೆ ಹೇಳಿಕೆ ಕೊಟ್ಟಿದ್ದಾರೆ. KRS ಬಾಗಿಲಿಗೆ ನೀರು ಹೋಗದಂತೆ ಅವರನ್ನೇ ಮಲಗಿಸಿಬಿಟ್ರೆ ಬಿಗಿಯಾಗುತ್ತದೆ. ಸಂಸದರು ಕೆಲಸ ಯಾವ ರೀತಿ ಮಾಡಬೇಕು ಅಂತ ಮಾಹಿತಿ ಪಡೆಯಲ್ಲ. ಕಾಟಾಚಾರಕ್ಕೆ ಯಾರ ಮೇಲಿನ ದ್ವೇಷಕ್ಕೋ ಹೇಳಿಕೆ ಕೊಡೋದು ಸರಿಯಲ್ಲ. ಇದು ಬಹಳ ದಿನ ನಡೆಯಲ್ಲ. ಅನುಕಂಪದ ಮೇಲೆ ಗೆದ್ದ ಮೇಲೆ ಜನರ ಕೆಲಸ ಮಾಡಬೇಕು. ಅನುಕಂಪದ ಅವಕಾಶ ಸದ್ಬಳಕೆ ಮಾಡಿಕೊಳ್ಳದಿದ್ರೆ ಮುಂದೆ ಜನರೇ ಪಾಠ ಕಲಿಸ್ತಾರೆ ಎಂದರು.

ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂಗೆ ಹಾನಿ
ಶ್ರೀರಂಗಪಟ್ಟಣ-ಪಾಂಡವಪುರ ಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂ ಅಸ್ತಿತ್ವಕ್ಕೆ ಅಡ್ಡಿಯಾಗಿದೆ ಎಂದು ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯೊಂದರಲ್ಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದರು. ಶ್ರೀರಂಗಪಟ್ಟಣ-ಪಾಂಡವಪುರ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಕುರಿತು ಸಂಸತ್​ನಲ್ಲಿ ಹಲವು ಬಾರಿ ಚರ್ಚಿಸಿದ್ದೇನೆ. ಈ ವಿಷಯವನ್ನು ಸಚಿವರ ಗಮನಕ್ಕೂ ತಂದಿದ್ದೇನೆ. ಅಕ್ರಮ ಚಟುವಟಿಕೆ ನಿಲ್ಲಿಸಿ ಡ್ಯಾಂ ರಕ್ಷಿಸಬೇಕು. ಅಕ್ರಮ ಚಟುವಟಿಕೆ ನಿಲ್ಲಿಸುವುದು ಜಿಲ್ಲಾಡಳಿತದ ಹೊಣೆಯಾಗಿದ್ದು, ನಾನೂ ಸಹ ಕೈಜೋಡಿಸುತ್ತೇನೆ. ಅಕ್ರಮ ಗಣಿಗಾರಿಕೆಯ ಹಿಂದೆ ಯಾರೇ ಪ್ರಭಾವಿ ಇದ್ದರೂ ತಡೆಗಟ್ಟಲು ನಾನು ಸಿದ್ಧ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್ ಡ್ಯಾಂಗೆ ಹಾನಿ: ಸಂಸದೆ ಸುಮಲತಾ ಅಂಬರೀಶ್

Published On - 12:00 pm, Mon, 5 July 21