ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ. ಫಲಿತಾಂಶದವರೆಗೂ ಕಾದು ನೋಡಿ: ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ […]

ಮತ್ತೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ ಹೆಚ್​ಡಿಕೆ
ಸಾಧು ಶ್ರೀನಾಥ್​

Updated on: Nov 18, 2019 | 9:47 PM

ಬೆಳಗಾವಿ: ಉಪಚುನಾವಣೆ ಫಲಿತಾಂಶದ ಬಳಿಕ ಮತ್ತೆ ಮುಖ್ಯಮಂತ್ರಿ ಆಗುವ ಇಂಗಿತವನ್ನು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಅಧಿಕಾರ ಇದ್ದಾಗ ಜನರ ಪರವಾಗಿ ಕೆಲಸ ಮಾಡಿದ್ದೇನೆ. ಮತ್ತೆ ಅಧಿಕಾರ ಸಿಕ್ಕರೆ ಜನರ ಪರವಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಮತ್ತೆ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಗೋಕಾಕ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಷ್ಟೇ ಅಲ್ಲ, ಬಿಜೆಪಿಯವರು ಬೆಂಬಲ ಕೊಡ್ತಾರೆ.

ಫಲಿತಾಂಶದವರೆಗೂ ಕಾದು ನೋಡಿ:
ಡಿಸೆಂಬರ್ 9ರ ಫಲಿತಾಂಶದವರೆಗೂ ಕಾದು ‌ನೋಡಿ ಉತ್ತರ ಸಿಗುತ್ತೆ. 2020ಕ್ಕೆ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ತೀರ್ಮಾನ ಬರುತ್ತೆ. ಈ ಉಪಚುನಾವಣೆ ಫಲಿತಾಂಶದಿಂದ ಪೂರಕ ತೀರ್ಮಾನಗಳು ಬರುತ್ತವೆ ಅಂತಾ ಗೋಕಾಕ್​ನಲ್ಲಿ ಕುಮಾರಸ್ವಾಮಿ ಹೇಳಿದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us