ಕೈತಪ್ಪಿದ ಕೃಷಿ ಖಾತೆ: ಮೋದಿ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಿಷ್ಟು

ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ. ಇನ್ನು ಕೃಷಿ ಖಾತೆ ಕುಮಾರಸ್ವಾಮಿಗೆ ಮಿಸ್ ಆಗಿದ್ದು, ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಈ ಬಗ್ಗೆ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ.

ಕೈತಪ್ಪಿದ ಕೃಷಿ ಖಾತೆ: ಮೋದಿ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಿಷ್ಟು
ಕುಮಾರಸ್ವಾಮಿ-ಮೋದಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jun 10, 2024 | 10:29 PM

ಬೆಂಗಳೂರು, (ಜೂನ್ 10): ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ಎಚ್​ಡಿ ಕುಮಾರಸ್ವಾಮಿ(HD Kumaraswamy )ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದು, ಕೃಷಿ ಖಾತೆ ಮಿಸ್ ಆಗಿದೆ. ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಖಾತೆ ಹಂಚಿಕೆ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದು, ಕೃಷಿ ಖಾತೆ ನಿರೀಕ್ಷೆ ಇತ್ತು, ಆದರೆ ಮೋದಿ ತೀರ್ಮಾನ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ನಾಳೆ (ಜೂನ್ 11) ಸಂಜೆ 5 ಗಂಟೆಗೆ ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಖಾತೆ ಹಂಚಿಕೆ ಮಾಡಿದ್ದಾರೆ. ವಿಶ್ವಾಸ ಇಟ್ಟು ಖಾತೆ ಹಂಚಿಕೆ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ನಿರೀಕ್ಷೆ ಮಾಡಿ ಖಾತೆ ನೀಡಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಅಧಿಕಾರ ವಹಿಸಿಕೊಳ್ಳುತ್ತೇನೆ. ಕನ್ನಡಿಗರ ಪರವಾಗಿ ಪ್ರಧಾನಿಯವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿಗೆ ಕೃಷಿ ಖಾತೆ ಮಿಸ್​: ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ? ಇಲ್ಲಿದೆ ವಿವರ

ಪ್ರಹ್ಲಾದ್ ಜೋಷಿಯವರಿಗೆ ಆಹಾರ ಖಾತೆ ಕೊಟ್ಟಿದ್ದಾರೆ. ದೊಡ್ಡ, ಪ್ರಮುಖವಾದ ಇಲಾಖೆ ನೀಡಿದ್ದಾರೆ. ನನ್ನ ವಿಚಾರದಲ್ಲಿ ವಿಶೇಷವಾದ ನಂಬಿಕೆ ಇಟ್ಟು ಖಾತೆ ನೀಡಿದ್ದಾರೆ. ನನ್ನ ಮೇಲೆ ಸವಾಲಿದೆ. ದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ಕೆಲಸ ಮಾಡಬೇಕಿದೆ. ಕರ್ನಾಟಕಕ್ಕೆ ಅಂತ ಮಾತ್ರ ಹೇಳಲ್ಲ. ದೇಶಾದ್ಯಂತ ಸುತ್ತಾಡಿ ಬದಲಾವಣೆ ತರಲು ಬಯಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಜೀವನದಲ್ಲಿ ಅತಿ ದೊಡ್ಡ ಸವಾಲು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಇವೆ. ಅವುಗಳನ್ನು ಈಗ ಚರ್ಚೆ ಮಾಡುವುದಿಲ್ಲ. ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ. ಎಲ್ಲವನ್ನು ಗಮನಿಸಿ ಇಲಾಖೆಯನ್ನು ಮೋದಿ ಕೊಟ್ಟಿದ್ದಾರೆ. ಪ್ರಮಾಣಿಕವಾಗಿ ಕ್ಷಣ ವ್ಯರ್ಥಮಾಡದೆ ಕೆಲಸ ಮಾಡುತ್ತೇನೆ. ರೂಟ್ ಮ್ಯಾಪ್ ಸಿದ್ದಮಾಡಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ನನ್ನದೆ ಕಲ್ಪನೆಯಲ್ಲಿ ಕೆಲಸ ಮಾಡಲು ಪ್ರಮಾಣಿಕೆ ಪ್ರಯತ್ನ ಮಾಡುತ್ತೇನೆ. ಶೋಭಾ ಅವರಿಗೂ ಉತ್ತಮ ಖಾತೆ ಸಿಕ್ಕಿದೆ. ದೇಶದ ಪ್ರಗತಿಗೆ ನಾವು ಕೆಲಸ ಮಾಡುತ್ತೇವೆ. ಹೊಸ ಇತಿಹಾಸ ಕರ್ನಾಟಕದಲ್ಲಿ ತರುವುದು ಮಾತ್ರವಲ್ಲ, ದೇಶದ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುತ್ತೇವೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಎಲ್ಲದರ ಬಗ್ಗೆ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷ ಏಳು ಬೀಳುಗಳನ್ನು ಕಂಡಿದೆ. ದೇವೇಗೌಡರನ್ನು ಇಂದು ಸ್ಮರಿಸುತ್ತೇನೆ. ದೇವೇಗೌಡರ ರಾಜಕೀಯ ಮುಗಿದೇ ಹೋಯ್ತು ಎನ್ನುವಾಗ ಮತ್ತೆ ಪುಟಿದೇದ್ದಿದ್ದಾರೆ. ಕುಮಾರಸ್ವಾಮಿ ಮುಗಿದು ಹೋದ ಎನ್ನುವಾಗಲೇ ಯಾವುದೋ ಶಕ್ತಿ ಕಾಪಾಡಿದೆ. ಈ ಪಕ್ಷವನ್ನು ಯಾವುದೋ ಶಕ್ತಿ ಮೇಲೆತ್ತಿದೆ. ಪಕ್ಷದ ಸಂಘಟನೆ ಮಾಡುವ ಸಮರ್ಥ ನಾಯಕರು ರಾಜ್ಯದಲ್ಲಿ ಇದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!