‘ಬಿಜೆಪಿ ಏನ್ ಸಾಧನೆ ಮಾಡಿದೆ ಅಂತ ಒಳಒಪ್ಪಂದ ಮಾಡಿಕೊಳ್ಳಲಿ, ಸಿದ್ರಾಮಣ್ಣಾ?’

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘BJP ಜತೆ ಕುಮಾರಸ್ವಾಮಿ ಒಳಒಪ್ಪಂದ ಮಾಡಿಕೊಂಡಿದ್ದಾರೆ’ ಎಂದೆಲ್ಲಾ ಮಾತಾಡಿ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು, ಬಿಜೆಪಿಯ  ‘ಬಿ’ ಟೀಂ ಅಂದಿದ್ರಿ ಎಂದೂ ಕುಮಾರಸ್ವಾಮಿ ಆಕ್ರೋಶವನ್ನು ಹೊರಹಾಕಿದ್ದಾರೆ. ಅಂದು ಸಿದ್ದರಾಮಯ್ಯ ಕುತಂತ್ರದ ರಾಜಕಾರಣ ಮಾಡಿದ್ರು, ಹೀಗಾಗಿ ಬಿಜೆಪಿಗೆ 105 ಬಂತು, ಇಲ್ಲಿದಿದ್ರೆ ಬಿಜೆಪಿಗೆ 70 ಸ್ಥಾನ […]

ಬಿಜೆಪಿ ಏನ್ ಸಾಧನೆ ಮಾಡಿದೆ ಅಂತ ಒಳಒಪ್ಪಂದ ಮಾಡಿಕೊಳ್ಳಲಿ, ಸಿದ್ರಾಮಣ್ಣಾ?
ಸಾಧು ಶ್ರೀನಾಥ್​

Updated on: Nov 13, 2019 | 4:56 PM

ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅನ್ನೋ ಸಿದ್ದರಾಮಯ್ಯನವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಇಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘BJP ಜತೆ ಕುಮಾರಸ್ವಾಮಿ ಒಳಒಪ್ಪಂದ ಮಾಡಿಕೊಂಡಿದ್ದಾರೆ’ ಎಂದೆಲ್ಲಾ ಮಾತಾಡಿ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡ್ತಿದ್ದಾರೆ ಸಿದ್ದರಾಮಯ್ಯ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು, ಬಿಜೆಪಿಯ  ‘ಬಿ’ ಟೀಂ ಅಂದಿದ್ರಿ ಎಂದೂ ಕುಮಾರಸ್ವಾಮಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಅಂದು ಸಿದ್ದರಾಮಯ್ಯ ಕುತಂತ್ರದ ರಾಜಕಾರಣ ಮಾಡಿದ್ರು, ಹೀಗಾಗಿ ಬಿಜೆಪಿಗೆ 105 ಬಂತು, ಇಲ್ಲಿದಿದ್ರೆ ಬಿಜೆಪಿಗೆ 70 ಸ್ಥಾನ ಬರ್ತಿತ್ತು. ಬಿಜೆಪಿ ಅವ್ರು ಏನ್ ಸಾಧನೆ ಮಾಡಿದ್ದಾರೆ ಅಂತ ನಾನು ಅವ್ರ ಜೊತೆ ಒಳಒಪ್ಪಂದ ಮಾಡಿಕೊಳ್ಳಬೇಕು. ಕಾಂಗ್ರೆಸ್ ಗಿಂತ ಎರಡು ಪಟ್ಟು ಈ ಚುನಾವಣೆಯಲ್ಲಿ ನಾನು ಕೆಲಸ ಮಾಡಲು ಮುಂದಾಗಿದ್ದೇನೆ.

2008 ರಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿತ್ತು. ಅವತ್ತು ಕಾಂಗ್ರೆಸ್, ಜೆಡಿಎಸ್ ಉಪಚುನಾವಣೆ ಯಲ್ಲಿ ಎಷ್ಟು ಸ್ಥಾನ ಗೆದ್ದಿತ್ತು ಎಂದು ಮೊದಲು ತಿಳಿದುಕೊಳ್ಳಿ. ಕಾಂಗ್ರೆಸ್ ಗಿಂತಲೂ ನಾವೇ ಅವತ್ತು ಜಾಸ್ತಿ ಸ್ಥಾನ ಗೆದ್ದೆವು. ನೀವು ನಮ್ಮಿಂದ ಗೋವಿಂದರಾಜನಗರ ಗೆದ್ರಿ. ನಾವು ಯಡಿಯೂರಪ್ಪ ಅವ್ರನ್ನ ಉಳಿಸುತ್ತೇವೆ ಅಂತ ಹೇಳಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿ ಇರೋದ್ರೀಂದ ಸರ್ಕಾರಕ್ಕೆ ಅನುಕೂಲ ಅಂತ ದೇವೇಗೌಡರು ಹೇಳಿದ್ದಾರೆ ಅಷ್ಟೇ ಎಂದಿದ್ದಾರೆ.

Published On - 3:44 pm, Wed, 13 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us