AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಡ್ಡು ಕೊಟ್ಟೋರು ಯಾರಾದ್ರು ಬಂದು ಹೇಳ್ತಾರಾ: ಹಳ್ಳಿಹಕ್ಕಿಗೆ ಕುಟುಕಿದ HDK

ಮೈಸೂರು: ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಅನರ್ಹ ಶಾಸಕ ಹೆಚ್​.ವಿಶ್ವನಾಥ್ ಆಣೆ ಪ್ರಮಾಣ ಸಂಬಂಧಸಿದಂತೆ ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ‘ಹಳ್ಳಿಹಕ್ಕಿ’ಯನ್ನು ಕುಟುಕಿದ್ದಾರೆ. ವಿಶ್ವಾನಾಥ್ ಏನು? ಅವರ ಮುಖವಾಡ ಏನು ಅನ್ನೋದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಸಾ.ರಾ.ಮಹೇಶ್​ಗೆ ಮೊದಲೇ ಹೇಳಿದ್ದೆ. ವಿಶ್ವನಾಥ್ ಬುದ್ಧಿ ಗೊತ್ತಿದ್ದೂ ಯಾಕಪ್ಪ ಹೋಗ್ತೀಯ ಅಂತ ಹೇಳಿದ್ದೆ. ಈಗ ಗೊತ್ತಿರೋ ಸತ್ಯಕ್ಕೆ ಆಣೆ ಪ್ರಮಾಣ ಬೇಕಿತ್ತಾ? ದುಡ್ಡು ಕೊಟ್ಟೋರು ಯಾರಾದ್ರು ಬಂದು ಹೇಳ್ತಾರಾ? ಇದಕ್ಕೆ ಜನರೇ ಉತ್ತರ ಕೊಡ್ತಾರೆ ಎಂದು ಮೈಸೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ […]

ದುಡ್ಡು ಕೊಟ್ಟೋರು ಯಾರಾದ್ರು ಬಂದು ಹೇಳ್ತಾರಾ: ಹಳ್ಳಿಹಕ್ಕಿಗೆ ಕುಟುಕಿದ HDK
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 3:00 PM

Share

ಮೈಸೂರು: ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ಅನರ್ಹ ಶಾಸಕ ಹೆಚ್​.ವಿಶ್ವನಾಥ್ ಆಣೆ ಪ್ರಮಾಣ ಸಂಬಂಧಸಿದಂತೆ ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ‘ಹಳ್ಳಿಹಕ್ಕಿ’ಯನ್ನು ಕುಟುಕಿದ್ದಾರೆ.

ವಿಶ್ವಾನಾಥ್ ಏನು? ಅವರ ಮುಖವಾಡ ಏನು ಅನ್ನೋದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಸಾ.ರಾ.ಮಹೇಶ್​ಗೆ ಮೊದಲೇ ಹೇಳಿದ್ದೆ. ವಿಶ್ವನಾಥ್ ಬುದ್ಧಿ ಗೊತ್ತಿದ್ದೂ ಯಾಕಪ್ಪ ಹೋಗ್ತೀಯ ಅಂತ ಹೇಳಿದ್ದೆ. ಈಗ ಗೊತ್ತಿರೋ ಸತ್ಯಕ್ಕೆ ಆಣೆ ಪ್ರಮಾಣ ಬೇಕಿತ್ತಾ? ದುಡ್ಡು ಕೊಟ್ಟೋರು ಯಾರಾದ್ರು ಬಂದು ಹೇಳ್ತಾರಾ? ಇದಕ್ಕೆ ಜನರೇ ಉತ್ತರ ಕೊಡ್ತಾರೆ ಎಂದು ಮೈಸೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬಿಜೆಪಿಯವರು 2008ರಲ್ಲಿ ಯಾವ ರೀತಿ ಆಪರೇಷನ್ ಮಾಡಿದ್ರು ಅಂತ ಗೊತ್ತಿದೆ. ಈಗ ಸರ್ಕಾರ ಬಿಳಿಸೋಕೆ ಯಾವ ರೀತಿ ಆಪರೇಷನ್ ಮಾಡಿದ್ರು ಅನ್ನೋದೂ ಗೊತ್ತಿದೆ. ಇದಕ್ಕೆ ಬೆಟ್ಟಕ್ಕೆ ಹೋಗಿ ಆಣೆ ಪ್ರಮಾಣ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೂಟ ಹೊಡೆದು ಕೂರಲ್ಲ, ಅಧಿಕಾರ ಬಿಟ್ಟುಕೊಡಲು ಸಿದ್ಧ: ನನ್ನ ಮೇಲೆ ನನ್ನ ಶಾಸಕರಿಗೆ, ಪರಿಷತ್​ ಸದಸ್ಯರಿಗೆ ನಂಬಿಕೆ ಇಲ್ಲದಿದ್ದರೆ ಬೇರೆ ನಾಯಕರನ್ನ ಆಯ್ಕೆ ಮಾಡಿಕೊಳ್ಳಲಿ. ನಾನು ಅಧಿಕಾರ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದರು. ಹೆಚ್.ಡಿ.ದೇವೇಗೌಡರು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಅವರನ್ನ ವಿಶ್ವಾಸದಿಂದ ನಡೆಸಿಕೊಳ್ಳುವರನ್ನ ಆರಿಸಿಕೊಳ್ಳಲಿ. ಆದ್ರೆ ನಾನು ಗೂಟ ಹೊಡೆದು ಕೂರುವುದಿಲ್ಲ, ಅಧಿಕಾರ ಬೇಕಿಲ್ಲ. ಜೆಡಿಎಸ್​ ವರಿಷ್ಠ ದೇವೇಗೌಡರಿಗೂ ಅದನ್ನೇ ಹೇಳಿದ್ದೇನೆ. 13 ವರ್ಷದಿಂದ ಇದೆಲ್ಲವನ್ನೂ ನಾನು ನೋಡಿದ್ದೇನೆ. ನನ್ನ ಆತ್ಮಕ್ಕೆ ನಾನು ಉತ್ತರ ಕೊಟ್ಟುಕೊಂಡರೇ ಸಾಕು, ಇನ್ನೊಬ್ಬರನ್ನ ಮೆಚ್ಚಿಸಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆಲವರಿಗೆ ವೈಯಕ್ತಿಕ ಆಸೆ ಇರುತ್ತೆ, ಏನೂ ಮಾಡಲಾಗಲ್ಲ, ಹೊರಟ್ಟಿ ಸಚಿವರಾದಾಗ ಅವರ ಹೆಸರು ಪಟ್ಟಿಯಲ್ಲಿರಲಿಲ್ಲ. ಬಸವರಾಜ ಹೊರಟ್ಟಿ ಸಚಿವರಾಗಲು ನನ್ನ ಪಾತ್ರ ಇದೆ. ಈಗ ಬಸವರಾಜ ಹೊರಟ್ಟಿ ಅವರು ಮಾತನಾಡುತ್ತಾರೆ ಎಂದು ಮೈಸೂರಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Published On - 2:26 pm, Fri, 18 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?