AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ಸಹವಾಸ ನನ್ನ ಜೀವನದ ಅತ್ಯಂತ ಕರಾಳ ದಿನಗಳು ಎಂದ ಕುಮಾರಸ್ವಾಮಿ!

ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸದೇ ಮೌನಕ್ಕೆ ಶರಣಾಗಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಈಗ ಜಮೀರ್‌ ಅಹ್ಮದ್‌ (Zameer Ahmed) ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

ಜಮೀರ್ ಸಹವಾಸ ನನ್ನ ಜೀವನದ ಅತ್ಯಂತ ಕರಾಳ ದಿನಗಳು ಎಂದ ಕುಮಾರಸ್ವಾಮಿ!
ಕುಮಾರಸ್ವಾಮಿ-ಜಮೀರ್ ಅಹಮ್ಮದ್ ಖಾನ್
ರಾಮ್​, ಮೈಸೂರು
| Edited By: |

Updated on: Nov 15, 2024 | 4:10 PM

Share

ಮೈಸೂರು, (ನವೆಂಬರ್ 15): ತಮ್ಮನ್ನು ಕರಿಯ ಎಂದು ವ್ಯಂಗವಾಡಿದ್ದು ಅಲ್ಲದೇ ದೇವೇಗೌಡರ (Devegowda) ಕುಟುಂಬವನ್ನು ಮುಸ್ಲಿಮರು ಖರೀದಿಸುತ್ತಾರೆ ಎಂದಿದ್ದ ಜಮೀರ್‌ ಅಹ್ಮದ್‌ ಅವರ ಕಥೆಯನ್ನು ಮುಂದೆ ಬಿಚ್ಚಿಡುತ್ತೇನೆ ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಿಯ ಎಂದು ಕರೆದಿದ್ದಕ್ಕೆ ಜಾಸ್ತಿ ತಲೆಕೆಡಿಸಿಕೊಳ್ಳದ ಕುಮಾರಸ್ವಾಮಿ ತಂದೆಯ ಬಗ್ಗೆ ಜಮೀರ್‌ ಮಾತನಾಡಿದ್ದಕ್ಕೆ ಗರಂ ಆಗಿದ್ದು, ಮುಸ್ಲಿಮರು ಟಯರ್‌ ಅಂಗಡಿ ಇಟ್ಟುಕೊಂಡಿರುತ್ತಾರೆ. ಅವರ ಬಳಿಕ ಚಂದಾ ಎತ್ತಿ ದೇವೇಗೌಡರನ್ನು ಕೊಂಡುಕೊಳ್ಳುತ್ತಾರಾ? ಜಮೀರ್‌ಗೆ ದುಡ್ಡಿನ ಮದ ಬಂದಿದೆ. ನಿಯತ್ತಾಗಿ ಬಸ್ ಓಡಿಸಿ ಬಂದ ದುಡ್ಡಾ ಅದು? ಇದೆನ್ನೆಲ್ಲಾ ಮುಂದಿನ ದಿನದಲ್ಲಿ ಮಾತನಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕುಮಾರಸ್ವಾಮಿಯದ್ದು ಜೆಡಿಎಸ್‌ನ ಕಥೆ ಮುಗಿಯಿತು ಅಂತ ಅಂದುಕೊಂಡಿದ್ದರು. ಈಗ ಮತ್ತೆ ನಮಗೆ ಶಕ್ತಿ ಬಂದಿದೆ ಅದನ್ನು ತಡೆದುಕೊಳ್ಳಲು ಆಗದೇ ಈ ರೀತಿ ಮಾತನಾಡುತ್ತಿದ್ದಾರೆ. ಜಮೀರ್ ಮತ್ತು ಆ ನಾಲ್ಕು ಜನರ ಜೊತೆ ಇದ್ದದ್ದು ನನ್ನ ಜೀವನದ ಅತ್ಯಂತ ಕರಳ ದಿನಗಳು. ಅವರನ್ನು ಈಗ ಕೊಚ್ಚೆ ಎಂದು ಈಗ ದೂರ ಇಟ್ಟಿದ್ದೇನೆ.

ಇದನ್ನೂ ಓದಿ: ಕಾಂಗ್ರೆಸ್ಸಿಗರ ನೆಮ್ಮದಿ ಕೆಡಿಸಿ ಯೋಗೇಶ್ವರ್‌ ನಿದ್ದೆಗೆಡಿಸಿದೆ ಜಮೀರ್!

ಕೊಚ್ಚೆಗಳ ಬಗ್ಗೆ ಪದೇ ಪದೇ ಯಾಕೆ ನನ್ನನ್ನು ಮಾತನಾಡಿಸುತ್ತೀರಿ. ನಿಮಗೆ ಮೋಸ ಮಾಡಿದ ದಿನ ನಾನು ಏನಾಗ್ತೀನಿ ಎಂದು ನೂರು ಬಾರಿ ಜಮೀರ್ ನನಗೆ ಹೇಳಿದ್ದಾನೆ. ಆ ಪದ ಯಾವುದು ಎಂಬುದನ್ನು ನನ್ನ ಬಾಯಿಯಿಂದ ಹೇಳಿಸಬೇಡಿ. ಅದು ಅತ್ಯಂತ ಕೆಟ್ಟ ಪದ. ನನಗೆ ಅದನ್ನು ಸಾರ್ವಜನಿಕವಾಗಿ ಬಳಸಲು ಆಗುತ್ತಿಲ್ಲ. ಮೆಕ್ಕಾಗೆ ಹೋಗುತ್ತಾರಲ್ಲ ಅಲ್ಲಿ ಆ ಪದವನ್ನು ಅವರು ಜ್ಞಾಪಿಸಿಕೊಳ್ಳಲಿ. ಅಂತಹ ಪದ ಅದು. ಈಗ ದುಡ್ಡಿನ ಮದದಲ್ಲಿ ಅವರು ಮಾತನಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್