AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಪ್ರಗತಿಗೆ ಉಪಚುನಾವಣೆಯೇ ಮುಹೂರ್ತವಾಗಿತ್ತೇ? ಬಿಎಸ್​ವೈಗೆ ಹೆಚ್​.ಡಿ.ಕುಮಾರಸ್ವಾಮಿ ತಿರುಗೇಟು

ಮಸ್ಕಿ ಕ್ಷೇತ್ರ ಸಮಗ್ರ ಅಭಿವೃದ್ಧಿಯ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಮಾತನಾಡಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.

ಮಸ್ಕಿ ಕ್ಷೇತ್ರದ ಪ್ರಗತಿಗೆ ಉಪಚುನಾವಣೆಯೇ ಮುಹೂರ್ತವಾಗಿತ್ತೇ? ಬಿಎಸ್​ವೈಗೆ ಹೆಚ್​.ಡಿ.ಕುಮಾರಸ್ವಾಮಿ ತಿರುಗೇಟು
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
shruti hegde
| Edited By: |

Updated on: Mar 22, 2021 | 12:12 PM

Share

ಬೆಂಗಳೂರು: ಮಸ್ಕಿ ಕ್ಷೇತ್ರ ಸಮಗ್ರ ಅಭಿವೃದ್ಧಿಯ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪ್ರಸ್ತಾಪಿಸುವ ಹೊತ್ತಿನಲ್ಲೇ ಟ್ವೀಟ್​ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಸ್ಕಿ ಶಾಸಕರ ಮಹಾತ್ಯಾಗದಿಂದ ಬಿಎಸ್‌ವೈಗೆ ಅಧಿಕಾರ ಸಿಕ್ಕಿರುವುದು. ಬಿಎಸ್‌ವೈ ಅಧಿಕಾರಕ್ಕೆ ಬಂದು 2 ವರ್ಷಗಳಾಗುತ್ತಾ ಬಂತು. ಆದರೂ ಈವರೆಗೆ ಮಸ್ಕಿ ಕ್ಷೇತ್ರ ಏಕೆ ಅಭಿವೃದ್ಧಿಯಾಗಿಲ್ಲ. ಪ್ರಗತಿಗೆ ಉಪಚುನಾವಣೆಯೇ ಮುಹೂರ್ತವಾಗಿತ್ತೇ? ಎಂದು ಟ್ವೀಟ್​ ಮೂಲಕ ಹೆಚ್​.ಡಿ.ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಕ್ಷೇತ್ರದ ಅಭಿವೃದ್ಧಿಗೆ ಮುಹೂರ್ತ ನೋಡಿದ್ದಾರೆ. ಆದರೆ ವರ್ಷದ ಹಿಂದೆಯೇ ಉಪಚುನಾವಣೆಗಳು ನಡೆದವು. ಬಾಂಬೆ ತಂಡದ ಸದಸ್ಯರ ಕ್ಷೇತ್ರಗಳಿಗೆ ಚುನಾವಣೆ ಆಗಿದೆ. ಆದರೆ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆ. ಇದು ಬುಟಾಟಿಕೆತನದ್ದು ಎಂದು ನಿಮಗಾದರೂ ಅನಿಸಲ್ವೇ? ಎಂದು ಬರೆದುಕೊಂಡಿದ್ದಾರೆ.

ಜೊತೆ ಜೊತೆಗೆ ಇನ್ನೊಂದು ಪೋಸ್ಟ್​ ಹಂಚಿಕೊಂಡ ಹೆಚ್​.ಡಿ.ಕುಮಾರಸ್ವಾಮಿ ಮಸ್ಕಿ ಕ್ಷೇತ್ರವಾಗಿರಲಿ ಅಥವಾ ಬೇರೆ ಯಾವ ಕ್ಷೇತ್ರವಾದರೂ ಆಗಲಿ ಅಭಿವೃದ್ಧಿ ಮಾಡುವುದಕ್ಕೆ ಸರ್ಕಾರದಲ್ಲಿ ಹಣವಿದೆಯಾ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ. ನಿಮ್ಮ ಸರ್ಕಾರದಲ್ಲಿರುವ ಏಕಗವಾಕ್ಷಿಗೆ ಆಪೋಷನವಾಗ್ತಿಲ್ವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ ಅವರ ಸರ್ಕಾರದ ಏಕಗವಾಕ್ಷಿ ಮಾತುಗಳನ್ನು ಹೇಳುತ್ತಾರೆ. ರಾಜ್ಯದ ಜನರು ಇಂತಹ ಮಾತುಗಳಿಗೆ ಮನ್ನಣೆ ನೀಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ; ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್

ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಟೀಕೆ: ಎಚ್​.ಡಿ.ಕುಮಾರಸ್ವಾಮಿ ಟ್ವೀಟ್​ಗೆ ವಿಎಚ್​ಪಿ ಖಂಡನೆ

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?