AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಗೆ 50 ಕೋಟಿ ರೂ.ಗೆ ನೀಡುವಂತೆ ಬೆದರಿಕೆ: FIR ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ ಕುಮಾರಸ್ವಾಮಿ

ಉದ್ಯಮಿ ವಿಜಯ್‌ ಟಾಟಾಗೆ ಬೆದರಿಕೆ ಕೇಸ್‌ನಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಎಂಎಲ್​ಸಿ ರಮೇಶ್​ ಗೌಡ ವಿರುದ್ಧವೂ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ಇದೀಗ ವಿಜಯ್‌ ಟಾಟಾ ಎಫ್​ಐಆರ್​ ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ವಿಚಾರಣೆ ಅ.21ಕ್ಕೆ ಮುಂದೂಡಿದೆ.

ಉದ್ಯಮಿಗೆ 50 ಕೋಟಿ ರೂ.ಗೆ ನೀಡುವಂತೆ ಬೆದರಿಕೆ: FIR ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ ಕುಮಾರಸ್ವಾಮಿ
ಉದ್ಯಮಿಗೆ 50 ಕೋಟಿ ರೂ.ಗೆ ನೀಡುವಂತೆ ಬೆದರಿಕೆ: FIR ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದ ಕುಮಾರಸ್ವಾಮಿ
Ramesha M
| Edited By: |

Updated on:Oct 14, 2024 | 8:14 PM

Share

ಬೆಂಗಳೂರು, ಅಕ್ಟೋಬರ್​ 14: 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಟಾಟಾ ದಾಖಲಿಸಿದ ಎಫ್​ಐಆರ್​ ಪ್ರಶ್ನಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಎಂಎಲ್​ಸಿ ರಮೇಶ್​ ಗೌಡ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ.21ಕ್ಕೆ ಮುಂದೂಡಿದೆ.

ಉದ್ಯಮಿ ವಿಜಯ್‌ ಟಾಟಾಗೆ ಬೆದರಿಕೆ ಕೇಸ್‌ನಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಎಂಎಲ್​ಸಿ ರಮೇಶ್​ ಗೌಡ ವಿರುದ್ಧವೂ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು. ನಿಖಿಲ್ ಕುಮಾರಸ್ವಾಮಿಯನ್ನ ಚನ್ನಪಟ್ಟಣ ಬೈ ಎಲೆಕ್ಷನ್‌ಗೆ ನಿಲ್ಲಿಸ್ತಾ ಇದ್ದೀನಿ, 50 ಕೋಟಿ ರೂ. ಕೊಡದೇ ಇದ್ರೆ ನಿಮ್ಮ ಪ್ರಾಜೆಕ್ಟ್​ಗಳನ್ನ ಕಂಪ್ಲೀಟ್ ಮಾಡೋಕೆ ಬಿಡಲ್ಲ ಅಂತಾ ಹೆಚ್‌ಡಿ ಕುಮಾರಸ್ವಾಮಿ ಬೆದರಿಕೆ ಹಾಕಿದ್ರು ಎಂದು ವಿಜಯ್ ತಾತಾ ದೂರು ನೀಡಿದ್ದರು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ದಾಖಲು: 50 ಕೋಟಿ ರೂ.ಗೆ ಬೆದರಿಕೆ ಆರೋಪ

ಅಲ್ಲದೆ ರಮೇಶ್ ಗೌಡ ವಿರುದ್ಧ 5 ಕೋಟಿ ರೂ. ಬೇಡಿಕೆಯ ಬಾಂಬ್ ಸಿಡಿಸಿದ್ದರು. ಇದಾದ ಬೆನ್ನಲ್ಲೇ ರಮೇಶ್ ಗೌಡ ವಿಜಯ್ ಟಾಟಾ ವಿರುದ್ಧವೇ ಪ್ರತಿದೂರು ನೀಡಿ, ಅವರೇ 100 ಕೋಟಿ ರೂ. ನೀಡುವಂತೆ ತಮಗೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕರ್ನಾಟಕ ರಾಜಕಾರಣದಲ್ಲಿ ಜೋರಾಯ್ತು ಎಫ್​ಐಆರ್ ಪಾಲಿಟಿಕ್ಸ್: ಹೆಚ್​ಡಿಕೆ vs ವಿಜಯ್ ಟಾಟಾ ಪ್ರಕರಣದ ಸಮಗ್ರ ವಿವರ ಇಲ್ಲಿದೆ

ತಮ್ಮ ವಿರುದ್ಧದ ಪ್ರತಿದೂರಿನ ಬೆನ್ನಲ್ಲೇ, ಪ್ರತಿಕ್ರಿಯೆ ನೀಡಿದ್ದ ವಿಜಯ್ ಟಾಟಾ, ನಾನು ಯಾರು ಅಂತಾನೇ ಗೊತ್ತಿಲ್ಲ ಅಂತಿದ್ದವರು, ಈಗ ನನ್ನ ವಿರುದ್ಧ ದೂರು ನೀಡಿದ್ದಾರೆ. ಕುಮಾರಸ್ವಾಮಿ ಅವರ ಹತ್ತಿ ನಾನು, 100 ಕೋಟಿ ಕೇಳೋಕೆ ಸಾಧ್ಯವೆ ಎಂದಿದ್ದಾರೆ. ಅಷ್ಟೇ ಅಲ್ಲ, ಹೆಚ್​ಡಿ ಕುಮಾರಸ್ವಾಮಿ ನನ್ನ ಬಳಿ 50 ಕೋಟಿ ರೂ. ಕೇಳಿ ಬೆದರಿಕೆ ಹಾಕಿದ್ದನ್ನ ನಾನು ಪ್ರೂವ್ ಮಾಡುತ್ತೇನೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:01 pm, Mon, 14 October 24

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ