AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸ್ಕೃತಿ ಅವರಿಗೇ ತಿರುಗುಬಾಣ ಆಗಿದೆ.. ಕರ್ಮ ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸಿದೆ: ಎಚ್​​ಡಿ ​ಕುಮಾರಸ್ವಾಮಿ

Jindal land sale: ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ.

ಬಿಜೆಪಿ ಸಂಸ್ಕೃತಿ ಅವರಿಗೇ ತಿರುಗುಬಾಣ ಆಗಿದೆ.. ಕರ್ಮ ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸಿದೆ: ಎಚ್​​ಡಿ ​ಕುಮಾರಸ್ವಾಮಿ
ಬಿಜೆಪಿ ಸಂಸ್ಕೃತಿ ಅವರಿಗೇ ತಿರುಗುಬಾಣವಾಗಿದೆ.. ಕರ್ಮ ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸಿದೆ: ಎಚ್​​ಡಿ ​ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on:May 28, 2021 | 9:34 AM

Share

ಬೆಂಗಳೂರು/ ಬಳ್ಳಾರಿ: ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಇತ್ತೀಚೆಗೆ ಟ್ವೀಟ್​ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದರು. ಅದಕ್ಕೆ ನಿನ್ನೆ ನಡೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸಂಪುಟ ಸಭೆಯಲ್ಲಿ ಸಮಾಧಾನಕರ ಉತ್ತರ ಸಿಕ್ಕಿದೆ ಎಂಬ ರೀತಿಯಲ್ಲಿ ಎಚ್​ ಡಿ ​ ಕುಮಾರಸ್ವಾಮಿ ಅವರು ಇಂದು ಮತ್ತೊಮ್ಮೆ ಟ್ವೀಟ್​ ಮಾಡಿದ್ದಾರೆ. ನಿನ್ನೆ ನಡೆದ ಮಹತ್ವದ ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಂದಾಲ್​ ಕಂಪನಿಗೆ ಭೂಮಿ ನೀಡುವುದನ್ನು ಸದ್ಯಕ್ಕೆ ಕೈಬಿಟ್ಟಿದ್ದರು. ಚರ್ಚೆಯನ್ನೇ ನಡೆಸದೆ ವಿಷಯವನ್ನು ಹಿಂಪಡೆದಿತ್ತು. ಪ್ರಕರಣ ಹೈಕೋರ್ಟ್​ ಮತ್ತು ಸುಪ್ರೀಂಕೋರ್ಟ್​​ನಲ್ಲಿದೆ ಎಂದು ಸರ್ಕಾರ ತನ್ನ ಈ ಹಿಂದಿನ ನಿರ್ಧಾರದಿಂದ ಹಿಂದೆಸರಿದಿತ್ತು.

ಈ ಬಗ್ಗೆ ಇಂದು ಜೆಡಿಎಸ್ ವರಿಷ್ಠ ಎಚ್​ ಡಿ ​ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದು, ಅದರ ಸಾರಾಂಶ ಇಲ್ಲಿದೆ: ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.

ಜಿಂದಾಲ್‌ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದಿದ್ದಾರೆ.

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

(hd kumaraswamy re tweets on karnataka bjp government withdrawing from sale of land to jindal company in bellary)

Published On - 9:25 am, Fri, 28 May 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್